ಕಾರವಾರ: ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಸಚಿವ ಅಶ್ವಥ್ ನಾರಾಯಣ್ (Ashwath Narayan) ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ (B.K.Hariprasad) ವಾಗ್ದಾಳಿ ನಡೆಸಿದ್ದಾರೆ.
ಕುಮುಟಾ ತಾಲೂಕಿನ ಮಿರ್ಜಾನ್ ಗ್ರಾಮದಲ್ಲಿ ಆಯೋಜಿಸಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತಾನಾಡಿದ ಬಿ.ಕೆ.ಹರಿಪ್ರಸಾದ್, ಬಿಜೆಪಿಗರ ಮನೆ ದೇವರೇ ಸುಳ್ಳು. ಅವರ ಸಿದ್ಧಾಂತ ಹಿಂಸಿಸು ಎಂಬುದಾಗಿದೆ. ದ್ವೇಷದಿಂದ ನಡೆದುಕೊಳ್ಳಿ ಎನ್ನುತ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಅಶ್ವಥ್ ನಾರಾಯಣ್ ಹೇಳಿಕೆ ನಾನೂ ಒಪ್ಪಲ್ಲ, ಯಾವತ್ತೂ ಸಾವು ಬಯಸಬಾರದು – ಸಿ.ಟಿ ರವಿ
ದ್ವೇಷ, ಅಸೂಯೆ ಬಿಟ್ಟರೆ ಅವರಿಗೆ ದೇಶಭಕ್ತಿ ಇಲ್ಲ. ಮಂತ್ರಿ ಅಶ್ವಥ್ ನಾರಾಯಣ್, ಸಿದ್ದರಾಮಯ್ಯ ಅವರನ್ನು ಹೊಡದು ಹಾಕಿ ಎಂದು ಹೇಳುತ್ತಾರೆ. ಅವರು ಅಶ್ವಥ್ ನಾರಾಯಣ್ ಅಲ್ಲ. ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರನ್ನು ಬೆಂಗಳೂರಿನ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ.
ನಮ್ಮ ಹೆಣ ಕೂಡಾ ಬಿಜೆಪಿ, ಆರ್ಎಸ್ಎಸ್ ಸೇರುವುದಿಲ್ಲ. ರಸ್ತೆ, ಚರಂಡಿ ಬಗ್ಗೆ ಮಾತನಾಡಿದರೆ, ಲವ್ ಜಿಹಾದ್ ಬಗ್ಗೆ ಮಾತನಾಡಿ ಎನ್ನುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ- ಸಾಕು ಬಿಟ್ಬಿಡಿ ಅಂತ ಮಾಧುಸ್ವಾಮಿ ಮನವಿ
ಬುಧವಾರ ಮಂಡ್ಯದ ಸಾತನೂರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ಮಾತನಾಡಿ. ಟಿಪ್ಪುವಿನ ಜಾಗಕ್ಕೆ ಸಿದ್ದರಾಮಯ್ಯ ಬಂದುಬಿಡುತ್ತಾರೆ. ಉರಿಗೌಡ, ನಂಜೇಗೌಡ ಅವರು ಟಿಪ್ಪುವಿಗೆ ಏನು ಮಾಡಿದ್ದಾರೋ, ಅದೇ ರೀತಿ ಸಿದ್ದರಾಮಯ್ಯ ಅವರನ್ನು ಕೂಡಾ ಹೊಡೆದು ಹಾಕಬೇಕು. ನಿಮಗೆ ಸಾವರ್ಕರ್ ಬೇಕಾ? ಟಿಪ್ಪು ಬೇಕಾ? ನೀವೇ ತೀರ್ಮಾನಿಸಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.
ಅಶ್ವಥ್ ನಾರಾಯಣ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಯಿತು. ಸಚಿವರ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾಪ್ರಹಾರ ನಡೆಸಿದರು. ಸದನದಲ್ಲೂ ಅಶ್ವಥ್ ನಾರಾಯಣ್ ಅವರ ವಿವಾದಿತ ಹೇಳಿಕೆಯೇ ಸದ್ದು ಮಾಡಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k