Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡಿ ಕಚೇರಿ ಮುಂಭಾಗದಲ್ಲಿ ಹೈಡ್ರಾಮಾ – ನಾನು ಹೇಡಿಯಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಡಿ ಕಚೇರಿ ಮುಂಭಾಗದಲ್ಲಿ ಹೈಡ್ರಾಮಾ – ನಾನು ಹೇಡಿಯಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದ ಡಿಕೆಶಿ

Latest

ಇಡಿ ಕಚೇರಿ ಮುಂಭಾಗದಲ್ಲಿ ಹೈಡ್ರಾಮಾ – ನಾನು ಹೇಡಿಯಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದ ಡಿಕೆಶಿ

Public TV
Last updated: September 3, 2019 9:56 pm
Public TV
Share
3 Min Read
DK Shivakumar ED Main 1
SHARE

ನವದೆಹಲಿ: ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬಂಧನದ ಸಮಯದಲ್ಲಿ ಜಾರಿ ನಿರ್ದೇಶನಾಲಯದ ಕಚೇರಿ ಮುಂಭಾಗ ದೊಡ್ಡ ಹೈಡ್ರಾಮಾವೇ ನಡೆದಿದೆ. ಡಿಕೆಶಿ ಅಭಿಮಾನಿಗಳು ಅಡ್ಡಿಯ ನಡುವೆಯೂ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಕಾರಿನಲ್ಲಿ ಕನಕಪುರದ ಬಂಡೆಯನ್ನು ಕರೆದುಕೊಂಡು ಹೋದರು.

ದೆಹಲಿ ಫ್ಲ್ಯಾಟ್‍ನಲ್ಲಿ ಪತ್ತೆಯಾದ ದಾಖಲೆ ಇಲ್ಲದ 8.59 ಕೋಟಿ ರೂ. ಹಣದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಸತತ 4 ದಿನಗಳಿಂದ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು ಇಂದು ರಾತ್ರಿ 8.20ರ ವೇಳೆಗೆ ಬಂಧಿಸಿದರು.

I appeal to my party cadre, supporters and well-wishers to not be disheartened as I have done nothing illegal.

I have full faith in God & in our country's Judiciary and am very confident that I will emerge victorious both legally and politically against this vendetta politics.

— DK Shivakumar (@DKShivakumar) September 3, 2019

ವಿಚಾರಣೆಯ ಸಂದರ್ಭದಲ್ಲಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಅಕ್ರಮ ಹಣಕಾಸು ವ್ಯವಹಾರಗಳ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿ ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿದೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆ ಮಾಡಿಸಲು ಮನೋಹರ್ ಲೋಹಿಯಾ (ಆರ್ ಎಂಎಲ್) ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. 24 ಗಂಟೆಯ ಒಳಗಡೆ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಾಗಿರುವ ಕಾರಣ ಇಡಿ ಅಧಿಕಾರಿಗಳು ಇಂದು ರಾತ್ರಿಯೇ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಾರೋ ಅಥವಾ ನಾಳೆ ಹಾಜರು ಪಡಿಸುತ್ತಾರೋ ಎನ್ನುವುದು ತಿಳಿದು ಬಂದಿಲ್ಲ.

ಮಾಧ್ಯಮಗಳಲ್ಲಿ ಡಿಕೆಶಿ ಬಂಧನದ ಸುದ್ದಿ ಪ್ರಕಟವಾಗುತ್ತಿದ್ದಂತೆ ಇಡಿ ಕಚೇರಿ ಮುಂಭಾಗದಲ್ಲಿದ್ದ ಅಭಿಮಾನಿಗಳು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗತೊಡಗಿದರು. ರಾತ್ರಿ 9.05ರ ವೇಳೆಗೆ ಡಿಕೆಶಿ ಇಡಿ ಕಚೇರಿಯಿಂದ ಹೊರ ಬಂದು ಮಾಧ್ಯಮಗಳ ಜೊತೆ ಮಾತನಾಡಿ, ನಾನು ಹೇಡಿಯಲ್ಲ, ಎಲ್ಲವನ್ನೂ ಎದುರಿಸುತ್ತೇನೆ. ನಾನು ತಪ್ಪು ಮಾಡಿಲ್ಲ. ಮೋಸ ಮಾಡಿಲ್ಲ ಬಿಜೆಪಿ ಈಗ ಗೆಲುವು ಸಾಧಿಸಿದೆ. ಅವರಿಗೆ ಶುಭವಾಗಲಿ ಎಂದು ಹೇಳುತ್ತಾ ಮುಂದೆ ಸಾಗಿದರು. ಕೊನೆಗೆ ಕಾರಿನ ಮುಂದೆ ನಿಂತು ಕೈ ಮುಗಿದರು. ಅಷ್ಟರಲ್ಲೇ ಇಡಿ ಅಧಿಕಾರಿಗಳು ಬಲವಂತವಾಗಿ ಡಿಕೆಶಿಯನ್ನು ಕಾರಿನಲ್ಲಿ ಕುಳ್ಳಿರಿಸಿದರು.

DK Shivakumar ED Main 2

ಈ ಸಂದರ್ಭದಲ್ಲಿ ಅಭಿಮಾನಿಗಳು ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಧಿಕ್ಕಾರ ಕೂಗಲು ಆರಂಭಿಸಿದರು. ಅಷ್ಟೇ ಅಲ್ಲದೇ ಡಿಕೆ ಶಿವಕುಮಾರ್ ಇದ್ದ ಕಾರಿಗೆ ಅಡ್ಡ ಬಂದು ತಡೆಯಲು ಯತ್ನಿಸಿದರು. ಪೊಲೀಸರು ಅಭಿಮಾನಿಗಳನ್ನು ಚದುರಿಸಿ ಕಾರು ಚಲಿಸಲು ಅನುವು ಮಾಡಿಕೊಟ್ಟರು. ಕಾರು ಮುಂದಕ್ಕೆ ಹೋಗುತ್ತಿದ್ದಂತೆ ಅಭಿಮಾನಿಗಳು ಮುಂಭಾಗಕ್ಕೆ ಬಂದು ಅಡ್ಡಿ ಪಡಿಸಿದರು. ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಿದ ಬಳಿಕ ಕಾರು ಇಡಿ ಗೇಟ್ ದಾಟಿ ರಸ್ತೆ ಪ್ರವೇಶಿಸಿತು. ಕಾರು ಮುಂದಕ್ಕೆ ಹೋಗುತ್ತಿದ್ದರೂ ಅಭಿಮಾನಿಗಳು ಕಾರಿನ ಹಿಂದೆಯೇ ಓಡತೊಡಗಿದ್ದರು. ಡಿಕೆ ಶಿವಕುಮಾರ್ ಹಿಂಬಾಲಿಸಿ ಸುರೇಶ್ ಅವರು ತಮ್ಮ ಕಾರಿನಲ್ಲಿ ತೆರಳಿದರು.

DK Shivakumar ED Main 3

ನಿರೀಕ್ಷಣಾ ಜಾಮೀನು ಸಲ್ಲಿಸುವ ನಿರ್ಧಾರದಿಂದ ಸದ್ಯಕ್ಕೆ ಡಿಕೆ ಶಿವಕುಮಾರ್ ಹಿಂದೆ ಸರಿದಿದ್ದಾರೆ. ಡಿಕೆಶಿ ಹೊರತುಪಡಿಸಿ ಉಳಿದವರು, ಸಮನ್ಸ್ ರದ್ದು ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. ವಿಚಾರಣೆ ನಡೆಯುತ್ತಾ ಇರುವಾಗ ತುರ್ತು ವಿಚಾರಣೆ ಅಗತ್ಯ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಏನಿದು ಪ್ರಕರಣ?
2017ರ ಆಗಸ್ಟ್ 2 ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ದಾಖಲೆ ಇಲ್ಲದ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಅಪಾರ್ಟ್ ಮೆಂಟ್‍ನಲ್ಲಿ ಪತ್ತೆ ಹಣದ ಜತೆಗೆ ಹವಾಲಾ ಮೂಲಕ ಏಜೆಂಟ್‍ಗಳ ಸಹಾಯದಿಂದ ಡಿಕೆ ಶಿವಕುಮಾರ್ ಕೋಟ್ಯಂತರ ರೂ.ಗಳನ್ನು ಕಾಂಗ್ರೆಸ್ ಹೈಕಮಾಂಡ್‍ಗೆ ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ನೋಟು ನಿಷೇಧಗೊಂಡ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಾವಿರಾರು ಕೋಟಿ ರೂ.ಗಳನ್ನು ಬದಲಾಯಿಸಿದ್ದಾರೆ. ಆಪ್ತರ ಮೂಲಕ ಕಪ್ಪುಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ವಿದೇಶದಲ್ಲೂ ಡಿಕೆಶಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ರದ್ದು ಪಡಿಸುವಂತೆ ಕೋರಿ ಡಿಕೆ ಶಿವಕುಮಾರ್ ಹೈ ಕೋರ್ಟ್ ಮೊರೆ ಹೋಗಿದ್ದರು. ಡಿಕೆ ಶಿವಕುಮಾರ್ ಅವರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಕಳೆದ ವಾರ ವಜಾಗೊಳಿಸಿದ ಹಿನ್ನೆಲೆಯಲ್ಲಿ ಇಡಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿತ್ತು.

TAGGED:congressdelhiDK ShivakumarEnforcement Directorate officePublic TVಕನಕಪುರ ಬಂಡೆಕಾಂಗ್ರೆಸ್ಜಾರಿ ನಿರ್ದೇಶನಾಲಯಡಿಕೆ ಶಿವಕುಮಾರ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
12 seconds ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
1 hour ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
1 hour ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
2 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
3 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?