Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಗ ಭಾಷಣ ಮಾಡಿದ್ದಕ್ಕೆ ಅನರ್ಹತೆ; ಈಗ ಸತ್ಯಮೇವ ಜಯತೆ – ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಗಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಗ ಭಾಷಣ ಮಾಡಿದ್ದಕ್ಕೆ ಅನರ್ಹತೆ; ಈಗ ಸತ್ಯಮೇವ ಜಯತೆ – ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಗಾ

Bengaluru City

ಆಗ ಭಾಷಣ ಮಾಡಿದ್ದಕ್ಕೆ ಅನರ್ಹತೆ; ಈಗ ಸತ್ಯಮೇವ ಜಯತೆ – ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಗಾ

Public TV
Last updated: March 29, 2023 9:40 pm
Public TV
Share
2 Min Read
rahul gandhi 5
SHARE

ಬೆಂಗಳೂರು: ಅದು 2019ರ ಲೋಕಸಭೆ (Lok Sabha) ಚುನಾವಣೆ ಸಂದರ್ಭ. ಆಗ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹೊತ್ತಿನಲ್ಲಿ ಅದೇ ಕೋಲಾರ ನೆಲದಿಂದಲೇ ಕಾಂಗ್ರೆಸ್‌ (Congress) ನಾಯಕರ ಜೊತೆಗೂಡಿ ‘ಸತ್ಯಮೇವ ಜಯತೆ’ ಹೋರಾಟ ಆರಂಭಿಸಲು ರಾಹುಲ್‌ ಗಾಂಧಿ ಬರುತ್ತಿದ್ದಾರೆ.

ತಾನು ಸಂಸದ ಸ್ಥಾನದಿಂದ ಅನರ್ಹಗೊಳ್ಳಲು ಕಾರಣವಾಗಿದ್ದ ನೆಲದಿಂದಲೇ ಈಗ ಮತ್ತೆ ಹೋರಾಟ ನಡೆಸಲು ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. “ಏ.5 ರಂದು ಕೋಲಾರಕ್ಕೆ ಬಂದು ಮಹಾತ್ಮ ಗಾಂಧೀಜಿ ಅವರ ಮೂಲ ಮಂತ್ರವಾದ ‘ಸತ್ಯಮೇವ ಜಯತೆ’ ಹೋರಾಟ ನಡೆಸಲಿದ್ದಾರೆಂದು” ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

congress flag

2019ರಲ್ಲಿ ಏನಾಗಿತ್ತು?
2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ರಾಹುಲ್‌ ಗಾಂಧಿ ಭಾಷಣ ಮಾಡಿದ್ದರು. “ಎಲ್ಲ ಕಳ್ಳರ ಉಪನಾಮ ಮೋದಿ ಎಂದೇ ಯಾಕಿರುತ್ತದೆ”? ಎಂದು ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ ವ್ಯಂಗ್ಯವಾಡಿದ್ದರು. ಈ ಸಂಬಂಧ ಸೂರತ್‌ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಾಗಿತ್ತು. ಪ್ರಕರಣಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತಿನಲ್ಲಿರಿಸಿ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಮಾರ್ಚ್‌ 23ರಿಂದ ಅನ್ವಯವಾಗುವಂತೆ ರಾಹುಲ್‌ ಗಾಂಧಿಯವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಲಾಗಿದೆ.

ವಯನಾಡ್‌ ಕ್ಷೇತ್ರ ತೆರವು
ರಾಹುಲ್‌ ಗಾಂಧಿ ಪ್ರತಿನಿಧಿಸುತ್ತಿದ್ದ ವಯನಾಡ್‌ ಕ್ಷೇತ್ರ ಸದ್ಯ ತೆರವಾಗಿದೆ. ಇನ್ನು 6 ತಿಂಗಳಲ್ಲಿ ಚುನಾವಣಾ ಆಯೋಗವು ಚುನಾವಣೆ ನಡೆಸಬೇಕಿದೆ. ಜೊತೆಗೆ ದೆಹಲಿಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಸರ್ಕಾರಿ ಬಂಗಲೆಯನ್ನು ಸಹ ರಾಹುಲ್‌ ಗಾಂಧಿ ತೊರೆಯಬೇಕಿದೆ. ಇದನ್ನೂ ಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್

Rahul Gandhi 2

ಏ.5ಕ್ಕೆ ರಾಹುಲ್‌ ಮತ್ತೆ ಕೋಲಾರಕ್ಕೆ
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಅತ್ತ ರಾಹುಲ್‌ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ ನಾಯಕರು ಹಾಗೂ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ. ರಾಹುಲ್‌ ಗಾಂಧಿ ಅನರ್ಹತೆ ಸಂವಿಧಾನಬಾಹಿರ, ಪ್ರಜಾಪ್ರಭುತ್ವ ವಿರೋಧಿ ಹಾಗೂ ವಿಪಕ್ಷಗಳನ್ನು ಹತ್ತಿಕ್ಕುವ ಹುನ್ನಾರ ಎಂದು ಟೀಕಿಸಿವೆ. ಅಲ್ಲದೇ ಅನರ್ಹತೆ ಖಂಡಿಸಿ ದೇಶಾದ್ಯಂತ ಹೋರಾಟ ಕೂಡ ನಡೆಸಲಾಗುತ್ತಿದೆ. ಕರ್ನಾಟಕದಲ್ಲೂ ಕೋಲಾರದಿಂದಲೇ ‘ಸತ್ಯಮೇವ ಜಯತೆ’ ಹೆಸರಿನಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಏ.5 ರಂದು ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಪ್ರಕಟಿಸಿದ್ದಾರೆ. ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದನ್ನೂ ಓದಿ: ಧನ್ಯವಾದ, ಮನೆ ಖಾಲಿ ಮಾಡುವೆ – ಲೋಕಸಭೆಯ ವಸತಿ ಸಮಿತಿ ಪತ್ರಕ್ಕೆ ರಾಗಾ ಉತ್ತರ

TAGGED:congresskolaraRahul GandhiSatyameva Jayateಕಾಂಗ್ರೆಸ್ಕೋಲಾರರಾಹುಲ್ ಗಾಂಧಿಸತ್ಯಮೇವ ಜಯತೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
5 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
5 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
6 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
6 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
7 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?