ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ (Amrutha Gowda) ಅವರಿಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ (Rajeev Gowda) ಈಗ ಪರಾರಿಯಾಗಿದ್ದಾರೆ.
ಅಮೃತಗೌಡ ಮತ್ತು ಶಿಡ್ಲಘಟ್ಟ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ (Srinivas Gowda) ದೂರಿನ ಮೇರೆಗೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಎರಡು ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ.
ಈಗ ರಾಜೀವ್ ಗೌಡ ಬಂಧನಕ್ಕೆ ಚಿಕ್ಕಬಳ್ಳಾಪುರ (Chikkaballapura) ಎಸ್ಪಿ ಕುಶಾಲ್ ಚೌಕ್ಸಿ ಎರಡು ತಂಡಗಳನ್ನು ನೇಮಿಸಿದ್ದು ಸೆನ್ ಪೊಲೀಸರು ಈಗ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅವಾಚ್ಯ ಶಬ್ಧಗಳಿಂದ ನಿಂದನೆ, ಕೊಲೆ ಬೆದರಿಕೆ – ʻಕೈʼ ಮುಖಂಡನ ವಿರುದ್ಧ ಪೌರಾಯುಕ್ತೆ ಅಮೃತಗೌಡ ದೂರು
ಅಮೃತ ಗೌಡ ದೂರು – ಯಾವ ಬಿಎನ್ಎಸ್ ಸೆಕ್ಷನ್ ಅಡಿ ಕೇಸ್?
132 – ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಬೆದರಿಕೆ
351(3) – ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ, ಮಹಿಳೆಯ ಚಾರಿತ್ರ್ಯವಧೆ
56 – ಅಪರಾಧಕ್ಕೆ ಪ್ರಚೋದನೆ ಅಥವಾ ಪ್ರೇರಣೆ
224 – ಸರ್ಕಾರಿ ನೌಕರನಿಗೆ ದೈಹಿಕ ಅಥವಾ ಮಾನಸಿಕವಾಗಿ ಗಾಯ ಮಾಡುವ ಬೆದರಿಕೆ
352 – ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಅವಮಾನ ಇದನ್ನೂ ಓದಿ: ನಗರಸಭೆಗೆ ಬೆಂಕಿ ಹಾಕಿಸುತ್ತೇನೆ – ಶಿಡ್ಲಘಟ್ಟ ಪೌರಾಯುಕ್ತೆಗೆ ಕೈ ನಾಯಕನಿಂದ ಜೀವ ಬೆದರಿಕೆ
352 – ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಅವಮಾನ
353(2) – ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಮಾಹಿತಿ ವದಂತಿ ಪ್ರಸಾರ

