ಬೆಂಗಳೂರು: ಅತ್ಯಾಚಾರದ ಕುರಿತು ಶಾಸಕ ರಮೇಶ್ ಕುಮಾರ್ ಅವರು ಬೆಳಗಾವಿ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಗೆ ಕಾಂಗ್ರೆಸ್ ನಾಯಕರೇ ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.
ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರೇ ಕಿಡಿಕಾರಿದ್ದಾರೆ. ರಮೇಶ್ ಕುಮಾರ್ ಅವರು ಹೆಣ್ಣಿನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಕಡತದಿಂದ ತೆಗೆಯಬೇಕು ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್
ಇನ್ನು ಕೆಪಿಸಿಸಿ ರಾಮಲಿಂಗ ರೆಡ್ಡಿ ಅವರು ಕೂಡ ರಮೇಶ್ ಹೇಳಿಕೆಗೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಾಸಕರು, ಸಚಿವರು ಒತ್ತಾಯಿಸಿದ್ದರು. ನಂತರ ರಮೇಶ್ ಕುಮಾರ್ ಟ್ವೀಟ್ ಮಾಡಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ರಿಲೇಶನ್ಶಿಪ್ನಲ್ಲಿ ಡಿಸ್ಟೆನ್ಸ್ ಹೆಚ್ಚಾಗಿದ್ದಕ್ಕೆ ಪ್ರಿಯಕರನಿಗೆ ಗುಂಡಿಟ್ಟ ಕಿರಾತಕಿ