Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ನಾಯಕರೇ ನಮ್ಮನ್ನು ಪ್ರಚೋದಿಸಿ ರಾಜೀನಾಮೆ ಕೊಡಿಸಿದ್ದು: ಮುನಿರತ್ನ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ನಾಯಕರೇ ನಮ್ಮನ್ನು ಪ್ರಚೋದಿಸಿ ರಾಜೀನಾಮೆ ಕೊಡಿಸಿದ್ದು: ಮುನಿರತ್ನ

Public TV
Last updated: July 28, 2019 3:04 pm
Public TV
Share
3 Min Read
MUNIRATNA
SHARE

ಬೆಂಗಳೂರು: ಅನರ್ಹತೆ ನಮಗೆ ತಿಳಿದಿರುವ ವಿಷಯವೇ, ಕಾಂಗ್ರೆಸ್ ನಾಯಕರು ನಮಗೆ ಮೊದಲೇ ಈ ಬಗ್ಗೆ ತಿಳಿಸಿದ್ದರು. ಅನರ್ಹತೆಯ ಶಿಕ್ಷಯನ್ನೇ ನೀಡುತ್ತೇವೆಂದು ಮೊದಲೇ ಬರೆದು ಬಿಟ್ಟಿದ್ದರು. ಅದು ಇವತ್ತು ಆಗಿದೆ ಅಷ್ಟೇ, ಹೀಗಾಗಿ ನಮಗೆ ಸ್ಪೀಕರ್ ಅನರ್ಹತೆ ನಿರ್ಧಾರ ಆಶ್ಚರ್ಯ ಎನ್ನಿಸುತ್ತಿಲ್ಲ ಎಂದು ರೆಬೆಲ್ ಶಾಸಕ ಮುನಿರತ್ನ ಹೇಳಿದ್ದಾರೆ.

ಸ್ಪೀಕರ್ ಅನರ್ಹತೆ ನಿರ್ಧಾರದ ಕುರಿತು ಪಬ್ಲಿಕ್ ಟಿವಿ ಜೊತೆ ಮುಂಬೈನಿಂದ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕೇವಲ ಮೇಲ್ನೋಟಕ್ಕೆ ನೀವು ರಾಜೀನಾಮೆ ನೀಡಿ ಹೋದರೆ, ಅನರ್ಹ ಮಾಡುತ್ತೇವೆ. ನಿಮ್ಮನ್ನು ಬಿಡಲ್ಲ ಎಂದು ಹೇಳಿದ್ದಾರೆ. ಇದು ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ, ದೇವೇಗೌಡರನ್ನು ಮೆಚ್ಚಿಸಲು ಮಾಡಿದ ಕೆಲಸ. ಮೈತ್ರಿ ಸರ್ಕಾರ ರಚನೆಯಾದ ಮೂರು ತಿಂಗಳಿಂದಲೇ ಬೀಳಿಸುವ ಕೆಲಸ ಪ್ರಾರಂಭವಾಗಿತ್ತು. ಈ ಹಿಂದೆ ದೇವೇಗೌಡರು ರಾಹುಲ್ ಗಾಂಧಿ ಅವರಿಗೆ ಯಾಕೆ ದೂರು ನೀಡಿದ್ದು, ಕುಮಾರಸ್ವಾಮಿ ಅವರು ನೆಮ್ಮದಿಯಿಂದ ಆಡಳಿತ ನಡೆಸಲು ಬಿಟ್ಟಿಲ್ಲ. ಒಂದೆಡೆ ಬಳ್ಳಾರಿಯವರು. ಇನ್ನೊಂದೆಡೆ ಕೋಲಾರದವರು ಓಡಿ ಹೋಗುತ್ತಾರೆ. ಹೀಗೆ ಬರೀ ಓಡಿ ಹೋಗುವವರನ್ನು ಹಿಡಿದು ತಂದು ಸಮಾಧಾನ ಮಾಡುವುದೇ ಕುಮಾರಸ್ವಾಮಿಯವರ ಕೆಲಸವಾಗಿತ್ತು ಎಂದು ಹರಿಹಾಯ್ದರು.

speakr biee

ಮೊದಲನೇಯದು ಇವರಿಬ್ಬರು ಮೈತ್ರಿ ಸರ್ಕಾರ ರಚಿಸಿದ್ದೇ ತಪ್ಪು. ಐದು ವರ್ಷ ಮುಖ್ಯಮಂತ್ರಿ ನೀವೆ ಎಂದು ಹೇಳಿದಾಗ ಕಾಂಗ್ರೆಸ್‍ನವರು ವಿಶ್ವಾಸದಿಂದ ಈ ಮಾತನ್ನು ಹೇಳುತ್ತಿದ್ದಾರಾ ಎಂದು ಜೆಡಿಎಸ್‍ನವರು ಯೋಚಿಸಬೆಕಿತ್ತು. ಕಾಂಗ್ರೆಸ್‍ನವರು ಬಂದರೆಂದು ಇವರು ಆತುರದಿಂದ ನಿರ್ಧಾರ ತೆಗೆದುಕೊಂಡರು. ಸರಿ ಎಂದು ಇವರು ಸುಮ್ಮನಾದರು. ಆದರೆ, ಮೂರು ತಿಂಗಳ ನಂತರ ಸರ್ಕಾರ ಕೆಡವಲು ಪ್ರಯತ್ನ ಶುರುವಾಗಿತ್ತು ಎಂದು ಗುಟ್ಟನ್ನು ಬಿಚ್ಚಿಟ್ಟರು.

ಸುದ್ದಿಗೋಷ್ಠಿ ನಡೆಸ್ತೀವಿ: ಈ ಪ್ರಯತ್ನವನ್ನು ಎಳೆದುಕೊಂಡು ಬಂದು ಲೋಕಸಭಾ ಚುನಾವಣೆಯವರೆಗೆ ತಂದರು. ಲೋಕಸಭಾ ಚುನಾವಣೆ ನಂತರ ಸರ್ಕಾರ ಕೆಡವಲೇಬೇಕೆಂದು ಸಾಕಷ್ಟು ಸಾರಿ ಕಾಂಗ್ರೆಸ್ ನಾಯಕರೇ ಸಭೆ ನಡೆಸಿದ್ದಾರೆ. ಕುಮಾರಸ್ವಾಮಿಯವರನ್ನು ತೆಗೆಯಬೇಕೆಂದು ಪ್ರಯತ್ನ ಮಾಡಿದವರೇ ಕಾಂಗ್ರೆಸ್ ನಾಯಕರು. ಇದೀಗ ಕುಮಾರಸ್ವಾಮಿಯವರ ಮೇಲೆ ಪ್ರೀತಿ, ಅಭಿಮಾನ ಉಕ್ಕಿ ಹರಿಯುತ್ತಿದೆ. ಯಾವ ನಾಯಕರು ಕೆಡವಲು ಪ್ರಯತ್ನಿಸಿದ್ದಾರೆ ಎಂಬುದನ್ನು ಬೆಂಗಳೂರಿಗೆ ಆಗಮಿಸಿದಾಗ ಎಲ್ಲ ಅತೃಪ್ತ ಶಾಸಕರು ಸೇರಿ ಸುದ್ದಿಗೋಷ್ಠಿ ನಡೆಸಿ ಹೇಳುತ್ತೇವೆ ಎಂದರು.

HDK SIDDU

ಮಾಧ್ಯಮಗಳ ಮುಂದೆ ಪ್ರೀತಿ: ನಾವು ರಾಜೀನಾಮೆ ನೀಡಲು ಪ್ರಚೋದಿಸಿದವು ಯಾರು, ನಾವು ತೆರಳಲು ಪ್ರಚೋದನೆ ನೀಡಿದ್ದೇ ಕಾಂಗ್ರೆಸ್ ನಾಯಕರು. ಇಲ್ಲವೆ ನಮಗೇನು ಹುಚ್ಚು ಹಿಡಿದಿತ್ತಾ, ನಮಗೆ ಸರ್ಕಾರದಲ್ಲಿ ಕೆಲಸ ಮಾಡಿ ಕೊಟ್ಟಿಲ್ಲ ಎಂಬ ಅಸಮಾಧಾನ ಇದ್ದದ್ದು ನಿಜ. ಇಲ್ಲೂ ನೆಮ್ಮದಿ ಇಲ್ಲ, ಅಲ್ಲೂ ಕೆಲಸ ಆಗುತ್ತಿರಲಿಲ್ಲ ಹೀಗಾಗಿ ಶಾಸಕರು ಬೇಸತ್ತಿದ್ದರು. ಅಲ್ಲದೆ, ಏನೇ ಮಾಡಿದ್ದರೂ ಸರ್ಕಾರ ಇನ್ನು ಎರಡು ತಿಂಗಳು ಸಹ ಇರುತ್ತಿರಲಿಲ್ಲ. ಇವರಿಬ್ಬರ ಮಧ್ಯದಲ್ಲಿ ನಾವೇಕೆ ಹಾಳಾಗಬೇಕಿತ್ತು. ಕನಿಷ್ಟ ಪಕ್ಷ ಸರ್ಕಾರ ರಚನೆಯಾಗಿದೆ ಎಂದು ಹೇಗೋ ಕೆಲಸ ಮಾಡಬಹದಿತ್ತು. ಆದರೆ, ದಿನವೂ ಇವರ ಜಗಳ, ಮುಸುಕಿನ ಗುದ್ದಾಟ. ಒಳಗಡೆ ಇಬ್ಬರಿಗೂ ದ್ವೇಷ ಇತ್ತು ಕೇವಲ ಮಾಧ್ಯಮದವರ ಮುಂದೆ ಪ್ರೀತಿ ತೋರಿಸುತ್ತಿದ್ದರು. ಇಬ್ಬರ ನಡುವೆ ಬೆಂಕಿ ಕಡ್ಡಿ ಗೀರಿದ್ದರೆ ಬೆಂಕಿ ಹೊತ್ತಿಕೊಳ್ಳುತ್ತಿತ್ತು ಅಷ್ಟು ದ್ವೇಷವಿತ್ತು. ಹೊರಗಡೆ ಮಾತ್ರ ಪ್ರೀತಿ ತೋರಿಸುತ್ತಿದ್ದರು ಎಂದು ಮೈತ್ರಿ ಸರ್ಕಾರದ ಮುಸುಕಿನ ಗುದ್ದಾಟದ ಕಹಾನಿಯನ್ನು ಬಿಚ್ಚಿಟ್ಟರು.

karnataka govt formation 759

ಒಳಗೊಳಗೆ ಖುಷಿ: ಕಾಂಗ್ರೆಸ್ ನಾಯಕರು ಮೈತ್ರಿ ಸರ್ಕಾರವನ್ನು ತೆಗೆಯಬೇಕಿತ್ತು. ತಗೆದಾಗಿದೆ. ಇದನ್ನು ಈಗ ನಮ್ಮ ತಲೆಗೆ ಕಟ್ಟುತ್ತಿದ್ದಾರೆ. ಒಳಗೊಳಗೆ ಅವರಿಗೆ ಖುಷಿ ಇದೆ. ಈಗ ನಮ್ಮ ಮೇಲೆ ಕ್ರಮ ಜರುಗಿಸದಿದ್ದರೆ ಜನ ಬೇರೆ ರೀತಿ ಅರ್ಥೈಸುತ್ತಾರೆ. ಪ್ರಚೋದನೆ ಮಾಡಿ ಕಳುಹಿಸಿ, ನಮ್ಮ ಮೇಲೆ ಕ್ರಮ ಜರುಗಿಸಿ, ಅವರ ಮೇಲೆ ತಪ್ಪು ಬರದಂತೆ ನಾಟವಾಡಿದ್ದಾರೆ ಎಂದು ಹರಿಹಾಯ್ದರು.

siddu hdk

ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಕ್ಷೇತ್ರದಲ್ಲಿ ಕೆಲಸ ಮಾಡಿ ನಾವೆಲ್ಲ ಶಾಸಕರಾಗಿದ್ದೇವೆ. ಹೀಗಾಗಿ ಯಾರು ಕರೆದರೂ ಹೋಗುತ್ತೇವೆ. ನಾವು ರಾಜೀನಾಮೆ ನೀಡಲು ಕಾರಣಗಳೇನು? ಪ್ರಚೋದನೆ ನೀಡಿದವರರು ಯಾರು? ಬೆಳಗಾವಿಯಲ್ಲಿ ಮೊದಲು ಗಲಾಟೆ ಶುರುವಾಗಿತ್ತು. ಅದನ್ನು ಆಗಲೇ ಸ್ವಚ್ಛಗೊಳಿಸಿದ್ದರೆ ಎಲ್ಲವೂ ಸರಿ ಹೋಗುತಿತ್ತು. ಅಲ್ಲಿನ ಕಿಡಿ ಬೆಂಗಳೂರಿಗೆ ಆವರಿಸಿ ನಮ್ಮನ್ನು ಹೊರ ಹೋಗುವಂತೆ ಮಾಡಿತು ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮನ್ನು ಈಗ ಕೇಳುವವರು ಯಾರೂ ಇಲ್ಲ. ಆದರೂ ನಾವು ಸದ್ಯದಲ್ಲೇ ಬೆಂಗಳೂರಿಗೆ ಬರುತ್ತೇವೆ. ಬಂದು ನಮ್ಮ ಈ ಸ್ಥಿತಿಗೆ ಕಾರಣ ಯಾರು ಎಂಬುದನ್ನು ತಿಳಿಸುತ್ತೇವೆ ಎಂದರು.

Share This Article
Facebook Whatsapp Whatsapp Telegram
Previous Article Rahul Bose 2 ಬಾಳೆ ಹಣ್ಣಿಗೆ 442 ರೂ. ಬಿಲ್ – ಹೋಟೆಲ್‍ಗೆ 25 ಸಾವಿರ ರೂ. ದಂಡ
Next Article Shivaram Hebbar a ಪಕ್ಷಪಾತಿಯಾಗಿ ಸ್ಪೀಕರ್ ನಿರ್ಧಾರ ತೆಗೆದುಕೊಂಡಿದ್ದಾರೆ- ಫೇಸ್‍ಬುಕ್‍ನಲ್ಲಿ ಶಿವರಾಮ್ ಹೆಬ್ಬಾರ್ ಕಿಡಿ

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

4 hours ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

5 hours ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

5 hours ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

5 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

6 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?