ಕೊಪ್ಪಳ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಾಂಗ್ರೆಸ್ ಸಚಿವರೇ ಸೋಲಿಸುತ್ತಾರೆ. ಜೆಡಿಎಸ್ ಜೊತೆ ಇದ್ದ ಹಾಗೇ ಮಾಡಿ ಕಾಂಗ್ರೆಸ್ ನಾಯಕರು ಜೆಡಿಎಸ್ ಸೋಲಿಸುತ್ತಾರೆ. ನೋಡಲು ಮಾತ್ರ ಮೈತ್ರಿ ಸಮಾವೇಶ ನಡೆದಿದ್ದು, ಒಳಗೊಳಗೆ ಒಬ್ಬರಿಗೊಬ್ಬರು ಚಾಕು ಹಾಕುತ್ತಾರೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಗಂಗಾವತಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಲು ಕಾಂಗ್ರೆಸ್ ನಾಯಕರು ಬಿಡಲ್ಲ. ನಿಖಿಲ್ ಸೋಲು ನಿಶ್ಚಿತವಾಗಿದ್ದು, ಸಿಎಂ ಕುಮಾರಸ್ವಾಮಿ ಅವರಿಗೆ ಸೋಲಿನ ಭಯ ಕಾಡುತ್ತಿದೆ. ಅದ್ದರಿಂದ ರಾಜ್ಯವನ್ನೇ ಬಿಟ್ಟು ಸಿಎಂ ಮಂಡ್ಯದಲ್ಲಿ ಸೀಮಿತವಾಗಿದ್ದು, ಎಚ್ಡಿಡಿ ಕುಟುಂಬಕ್ಕೆ ಮಂಡ್ಯ, ಹಾಸನ, ತುಮಕೂರು ಕ್ಷೇತ್ರಗಳು ಒಂದು ದೇಶವಾಗಿದ್ದು, ಮೂರು ಕ್ಷೇತ್ರಗಳಲ್ಲೂ ಅವರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.
- Advertisement 2
- Advertisement 3
ಸ್ವತಃ ಸಿದ್ದರಾಮಯ್ಯನವರೇ ದೇವೇಗೌಡರನ್ನು ಸೋಲಿಸಲು ನೇತೃತ್ವ ತೆಗೆದುಕೊಂಡಿದ್ದಾರೆ. ಏಕೆಂದರೆ ದೇವೇಗೌಡ ಅವರೇ ಸಿದ್ದರಾಮಯ್ಯರನ್ನು ಸೋಲಿಸಿದ್ರು. ಸಿದ್ದರಾಮಯ್ಯನವರ ಆಪ್ತರನ್ನು ಮೈಸೂರಿನಲ್ಲಿ ದೇವೇಗೌಡರು ಸೋಲಿಸುತ್ತಾರೆ. ಸಿದ್ದರಾಮಯ್ಯ ಶಿಷ್ಯರೇ ಅವರನ್ನು ಸೋಲಿಸುತ್ತಾರೆ. ಆ ಮೂಲಕ ಕೆಲ ಕಾಂಗ್ರೆಸ್ ಪಕ್ಷದವರು ನೇರವಾಗಿಯೇ ಬಿಜೆಪಿಗೆ ಬೆಂಬಲ ನೀಡಿದರೆ, ಮತ್ತು ಕೆಲವರು ಒಳಗೊಳಗೆ ಬಿಜೆಪಿ ಬೆಂಬಲ ನೀಡುತ್ತಾರೆ ಎಂದು ತಿಳಿಸಿದರು.
- Advertisement 4
ಇದೇ ವೇಳೆ ಲೋಕಸಭಾ ಟಿಕೆಟ್ ಸಿಗದೇ ಅಸಮಾಧಾನಗೊಂಡಿರುವ ಉಮೇಶ ಕತ್ತಿಯವರ ಜೊತೆ ಮಾತನಾಡಿದ್ದು, ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಎಂದು ಸ್ಪಷ್ಟನೆ ನೀಡಿದರು.