ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಲಘು ಹೃದಯಾಘಾತವಾಗಿದೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
- Advertisement 2
ಸದ್ಯ ಶಾಸಕರಿಗೆ ವೈದ್ಯರು ಸ್ಟೆಂಟ್ ಅಳವಡಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
- Advertisement 3
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಜಮೀರ್ ಗುರುತಿಸಿಕೊಂಡಿಸಿದ್ದಾರೆ. ಇತ್ತೀಚೆಗೆ ಐಎಂಎ ಜ್ಯುವೆಲ್ಸ್ ವಂಚನೆ ಕೇಸ್ ನಲ್ಲಿ ಜಮೀರ್ ಅವರ ಹೆಸರು ಕೇಳಿಬಂದಿತ್ತು.
- Advertisement 4