ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!

Public TV
1 Min Read
nalpad cricket

ಬೆಂಗಳೂರು: ರಣಜಿ ಕ್ರಿಕೆಟ್ ಆಟಗಾರನಿಗೂ ಶಾಂತಿ ನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ಹಲ್ಲೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ.  ಇದನ್ನೂ ಓದಿ: ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

ಸ್ಟಾರ್ ಹೋಟೆಲ್ ಒಂದರಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಯರ್ ಬಾಟಲ್ ನಲ್ಲಿ ರಣಜಿ ಆಟಗಾರನೊಬ್ಬನಿಗೆ ನಲಪಾಡ್ ಮಾರಣಾಂತಿಕ ಹಲ್ಲೆ ನಡೆಸಿದ್ದ. ಆರು ತಿಂಗಳ ಹಿಂದೆ ಈ ಘಟನೆ ನಡೆದಿದ್ದು ಆಟಗಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರನ್ನು ನೀಡಿರಲಿಲ್ಲ. ಇದನ್ನೂ ಓದಿ:  ವಿಪಕ್ಷಗಳು, ಮಾಧ್ಯಮದ ಮೇಲೆ ಗೂಬೆ ಕೂರಿಸಿದ ರೌಡಿ ನಲಪಾಡ್

ಈಗ ಸ್ಟಾರ್ ಹೋಟೆಲ್ ಒಂದರ ಮ್ಯಾನೇಜರ್ ಈ ವಿಚಾರವನ್ನು ಬಹಿರಂಗ ಪಡಿಸಿದ ಕಾರಣ ಸುದ್ದಿಯಾಗಿದೆ. ಈ ಸುದ್ದಿ ಪ್ರಕಟವಾದ ಬಳಿಕ ಕರ್ನಾಟಕ ರಣಜಿ ತಂಡ ಸಿದ್ದರಾಮಯ್ಯನವರಿಗೆ ಟ್ವೀಟ್ ಮಾಡಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಕೇಳಿಕೊಂಡಿದೆ. ನಮ್ಮ ರಾಜ್ಯದ ಆಟಗಾರರು ನಮ್ಮ ಕನ್ನಡನಾಡಿನ ಹೆಮ್ಮೆಯ ಪ್ರತಿನಿಧಿಗಳು. ಭಾರತದ ಮಟ್ಟದ್ದಲ್ಲಿ ನಮ್ಮ ನಾಡ ಕೀರ್ತಿಯನ್ನು ಬೆಳಗಿರುವವರು. ದಯವಿಟ್ಟು ಈ ಹಿಂಸೆಗೆ ಅಂತ್ಯ ಹಾಡಿ ಎಂದು ಟ್ವೀಟ್ ಮಾಡಿ ಮಾನವಿ ಮಾಡಿಕೊಂಡಿದೆ. ಇದನ್ನೂ ಓದಿ:ಜೈಲಿಗೆ ಹೋದ ಎರಡೇ ದಿನಕ್ಕೆ ನಲಪಾಡ್ ಕೈಗೆ ಸಿಕ್ತು ಮೊಬೈಲ್ ಫೋನ್!

ranji nalpad

https://www.youtube.com/watch?v=rByoOC1wzSk

https://www.youtube.com/watch?v=RtMFKdQtfME

 

Share This Article
Leave a Comment

Leave a Reply

Your email address will not be published. Required fields are marked *