– ರಾಮನಗರ ಕೂನಮುದ್ದನಹಳ್ಳಿ ಗ್ರಾಮಸ್ಥರ ಆರೋಪ
ರಾಮನಗರ: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು (Cooker Blast) ಬಾಲಕಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ (Ramanagara) ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚುನಾವಣಾ ಸಮಯದಲ್ಲಿ ಕಾಂಗ್ರೆಸ್ (Congress) ಶಾಸಕ ಹೆಚ್.ಸಿ ಬಾಲಕೃಷ್ಣ (H C Balakrishna) ಈ ಕುಕ್ಕರ್ ಗಳನ್ನ ನೀಡಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು ಮಹಾಲಕ್ಷ್ಮಿ (17) ಎಂಬ ಬಾಲಕಿಗೆ ಮುಖದ ಮೇಲೆ ಸುಟ್ಟಗಾಯಗಳಾವೆ. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ಶಿಕ್ಷಕಿಯರಿಬ್ಬರ ಜಡೆ ಜಗಳ- ಮೂಕಪ್ರೇಕ್ಷರಾದ ಶಾಲಾ ಮಕ್ಕಳು
ಇನ್ನೂ ಶಾಸಕ ಹೆಚ್.ಸಿ ಬಾಲಕೃಷ್ಣ ಈ ಕುಕ್ಕರ್ ನೀಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಮಹಿಳೆಯರು ಕುಕ್ಕರ್ ಗಳನ್ನ ತಂದು ರಸ್ತೆಗೆ ಎಸೆದು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮ ಕುಕ್ಕರ್ ಗಳನ್ನ ನೀವೆ ತೆಗೆದುಕೊಂಡು ನಿಮ್ಮ ಹೆಂಡತಿಯರಿಗೆ ಕೊಡಿ, ಮತಪಡೆಯಲು ಬಡವರಿಗೆ ನೀಡಿ ಅವರ ಪ್ರಾಣಕ್ಕೆ ಕುತ್ತು ತರಬೇಡಿ ಎಂದು ಕುಕ್ಕರ್ ಗಳನ್ನ ಬೀದಿಗೆ ತಂದು ಎಸೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರೆಂಟಿ ಎಫೆಕ್ಟ್ – 6 ದಿನಗಳಲ್ಲಿ ಬರೋಬ್ಬರಿ 78 ಸಾವಿರ ಬಿಪಿಎಲ್ ಅರ್ಜಿ ಸಲ್ಲಿಕೆ