ಚಾಮರಾಜನಗರ: ಕ್ಷೇತ್ರದ ಕಾಂಗ್ರೆಸ್ ಶಾಸಕರೊಬ್ಬರನ್ನು ಬಿಜೆಪಿಗೆ ಸೆಳೆಯಲು ವಿಪಕ್ಷ ನಾಯಕ ಈಶ್ವರಪ್ಪ ಯತ್ನಿಸುತ್ತಿದ್ದಾರೆ.
ಸಚಿವ ಸ್ಥಾನ ನೀಡುತ್ತೇವೆ ಬನ್ನಿ ಎಂದು ಈಶ್ವರಪ್ಪ ಕಾಂಗ್ರೆಸ್ ಶಾಸಕ ಸಿ. ಪುಟ್ಟರಂಗಶೆಟ್ಟಿಯನ್ನು ಬಿಜೆಪಿಗೆ ಸೆಳೆಯಲು ಯತ್ನಿಸಿದ್ದಾರೆ. ಆದರೆ ಈಶ್ವರಪ್ಪ ಅವರ ಆಫರ್ ಗೆ ಶಾಸಕ ಪುಟ್ಟರಂಗಶೆಟ್ಟಿ ಒಪ್ಪಿಗೆ ನೀಡುತ್ತಿಲ್ಲ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.
ಈಶ್ವರಪ್ಪ ಅವರು ಕಾಂಗ್ರೆಸ್ ಶಾಸಕ ಸಿ. ಪುಟ್ಟರಂಗಶೆಟ್ಟಿಯನ್ನು ಬೆಳಗ್ಗೆಯಿಂದ ಐದು ಬಾರಿ ದೂರವಾಣಿ ಕರೆ ಮಾಡಿದ್ದಾರೆ. ಅಂತಿಮ ಕರೆಯಲ್ಲಿ ನನಗೆ ಇನ್ನೊಮ್ಮೆ ಕರೆ ಮಾಡಬೇಡಿ ಎಂದು ಪುಟ್ಟರಂಗಶೆಟ್ಟಿ ಅವರು ಈಶ್ವರಪ್ಪ ಗೆ ಬೈದಿದ್ದಾರೆ.