ಕೈ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಗೆ ದಾಖಲು

1 Min Read

ಮೈಸೂರು: ಮೈಸೂರು ಎನ್‍ಆರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತನ್ವೀರ್ ಸೇಠ್ ಸೋಮವಾರ ರುಟಿನ್ ಚೆಕ್‍ಅಪ್‍ಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ತನ್ವೀರ್ ಸುಸ್ತು ಹಾಗೂ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ವೈದ್ಯರು ಒಂದು ದಿನ ಆಸ್ಪತ್ರೆಯಲ್ಲೇ ಇರುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಖಡ್ಗ, ಭಯ, ದಬ್ಬಾಳಿಕೆಯಿಂದ ತನ್ವೀರ್ ಸೇಠ್ ಆಗಿದ್ದಾರೆ: ಪ್ರತಾಪ್ ಸಿಂಹ

ಸದ್ಯ ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿವೆ: ಈಶ್ವರ್ ಖಂಡ್ರೆ

Share This Article
Leave a Comment

Leave a Reply

Your email address will not be published. Required fields are marked *