ಉಚಿತ ವಿದ್ಯುತ್ ನೀಡಿ ಎಸ್ಕಾಂಗಳನ್ನು ಖಾಸಗೀಕರಣ ಮಾಡುವುದೇ ಕಾಂಗ್ರೆಸ್‌ ಗುರಿ: ಸುನಿಲ್‌ ಕುಮಾರ್

Public TV
2 Min Read
Siddaramaiah Budget

ಬೆಂಗಳೂರು: ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಸಂಪರ್ಕ ನೀಡದೇ ಸತಾಯಿಸಿದವರು ಈಗ 200 ಯುನಿಟ್‍ವರೆಗೆ ಉಚಿತ ವಿದ್ಯುತ್ (Fee Power) ನೀಡುತ್ತೇವೆ ಎಂದು ಡಂಗುರ ಸಾರುತ್ತಿದ್ದಾರೆ. ಇದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಕಾಂಗ್ರೆಸ್ (Congress) ವಿರುದ್ಧ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ (Sunil Kumar) ವ್ಯಂಗ್ಯವಾಡಿದ್ದಾರೆ.

Sunil Kumar

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸುನೀಲ್ ಕುಮಾರ್, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತದ ಹೇಳಿಕೆಯಲ್ಲ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಾನು ಹಿಂದೂ, ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ – ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ: ಸಿದ್ದು ವಿರುದ್ಧ ಅನಂತ್ ಕುಮಾರ್ ಹೆಗಡೆ ಕಿಡಿ

ಎಸ್ಕಾಂಗಳನ್ನು ಖಾಸಗೀಕರಣಗೊಳಿಸುವುದೇ ಈ ಸುಳ್ಳು ಭರವಸೆಯ ಹಿಂದಿರುವ ಉದ್ದೇಶ. ಎಸ್ಕಾಂಗಳನ್ನು ಖಾಸಗೀಕರಣ ಮಾಡುವುದೇ ಸಿದ್ದರಾಮಯ್ಯ (Siddaramaiah)  ಹಾಗೂ ಡಿ.ಕೆ.ಶಿವಕುಮಾರ್ (D.K Shivakumar) ಅವರ ಅಂತಿಮ ಗುರಿ. ಉಚಿತ ವಿದ್ಯುತ್‍ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನೀವು ಅಧಿಕಾರದಲ್ಲಿದ್ದಾಗ ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 9,000 ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಓಲ್ಡ್ ಮೈಸೂರು ಆಪರೇಷನ್ ಕಮಲಕ್ಕೆ ಹೈಕಮಾಂಡ್ ಅಸಮಾಧಾನ – ಅಖಾಡಕ್ಕಿಳಿಯಲು ಸಜ್ಜಾದ ಅಮಿತ್ ಶಾ?

ಅಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೃಷಿ ಪಂಪ್ ಸೆಟ್‍ಗಳಿಗೆ ಹೊಸ ಸಂಪರ್ಕ ನೀಡಿರಲಿಲ್ಲ. ಇದರಿಂದ ರೈತರು ಹಾಗೂ ಕೃಷಿ ವಿಸ್ತರಣೆ ಚಟುವಟಿಕೆಗೆ ತೀವ್ರ ಸಮಸ್ಯೆಯಾಗಿತ್ತು. 2016-17 ರಿಂದ ಕೃಷಿ ಪಂಪ್ ಸೆಟ್‍ಗಳಿಗೆ ನೀಡುತ್ತಿದ್ದ ಸಬ್ಸಿಡಿ ಹಣವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡದೇ ಸತಾಯಿಸಿದರು. ಇದರಿಂದ ರೈತರು ಮಾತ್ರವಲ್ಲ ಉದ್ಯಮಕ್ಕೂ ತೊಂದರೆಯಾಯ್ತು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016 ರಿಂದ ಇಲ್ಲಿಯವರೆಗಿನ ಹಿಂಬಾಕಿಯೂ ಸೇರಿ 18 ಸಾವಿರ ಕೋಟಿ ರೂ. ಸಬ್ಸಿಡಿ ಹಣವನ್ನು ಎಸ್ಕಾಂಗಳಿಗೆ ನೀಡಿದ್ದೇವೆ. ಇಲಾಖೆಯನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಹಳ್ಳ ಹಿಡಿಸಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೋಡಿ ಈಗ ಉಚಿತ ವಿದ್ಯುತ್ ಎಂಬ ಸುಳ್ಳು ಭರವಸೆ ನೀಡುತ್ತಿದ್ದಾರೆ. ದುರಾಡಳಿತ ಹಗರಣದ ಮೂಲಕ ಇಂಧನ ಇಲಾಖೆಯನ್ನು ನಷ್ಟಕ್ಕೆ ದೂಡಿದ್ದೇ ನಿಮ್ಮ ಸರ್ಕಾರದ ಮಹತ್ ಸಾಧನೆ ಎಂದು ಸುನೀಲ್ ಕುಮಾರ್ ಟೀಕಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *