ಮೈಸೂರು: ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ (Amitshah) ವಿರುದ್ಧ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಕೇಂದ್ರದಿಂದ ಅನುದಾನ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಗ್ರಾಮಾಂತರ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಬರಿಗೈನಲ್ಲಿ ಬಂದ ಗೃಹ ಸಚಿವರಿಗೆ ಧಿಕ್ಕಾರ ಎಂದು ಕಿಡಿಕಾರಿರುವ ಕಾಂಗ್ರೆಸ್, ಕಪ್ಪು ಪಟ್ಟಿ ಧರಿಸಿ.. ಗೋ ಬ್ಯಾಕ್ ಅಮಿಶ್ ಶಾ ಎಂದು ಘೋಷಣೆ ಕೂಗಿದೆ. ಇದನ್ನೂ ಓದಿ: ಅಮಿತ್ ಶಾ ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರ್ತಾರೆ: ಜಿ.ಪರಮೇಶ್ವರ್
ನನ್ನ ತೆರಿಗೆ ನನ್ನ ಹಕ್ಕು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದೆ. ಅಮಿಶ್ ಶಾ ವಿರುದ್ಧ ಪೋಸ್ಟರ್ ಅಭಿಯಾನವನ್ನು ಕೂಡ ಕಾಂಗ್ರೆಸ್ ಕಾರ್ಯಕರ್ತರು ಕೈಗೊಂಡಿದ್ದಾರೆ. ಗೋಡೆಗಳಿಗೆ ಪೋಸ್ಟರ್ ಅಂಟಿಸಲು ಮುಂದಾದರು. ಈ ವೇಳೆ ಪೋಸ್ಟರ್ ಅಂಟಿಸದಂತೆ ಪೊಲೀಸರು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಪೋಸ್ಟರ್ ಕಿತ್ತುಕೊಂಡು ಹೋದ ಪ್ರಸಂಗವೂ ನಡೆಯಿತು. ಇದಾದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಕೈಯಿಂದ ಪೋಸ್ಟರ್ ಕಿತ್ತುಕೊಂಡು ಗೋಡೆಗಳಿಗೆ ಅಂಟಿಸಿದರು.