ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡ ಪ್ರಧಾನಿಯವರ ಭಾಷಣ ಮುಗಿಯುತ್ತಿದ್ದಂತೆಯೇ ಮೋದಿ ಭಾಷಣಕ್ಕೆ ಸೆಡ್ಡು ನೀಡಲು ಕೆಪಿಸಿಸಿ ರೆಡಿಯಾಗಿದೆ.
ಈಗಾಗಲೇ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ಮೋದಿ ಭಾಷಣ ಮುಗಿದ ಕೂಡಲೇ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಲು ತೀರ್ಮಾನಿಸಿದೆ. ಈ ಮೂಲಕ ಪ್ರಧಾನಿಯವರ ಭಾಷಣಕ್ಕೆ ಟಾಂಗ್ ಕೊಡಲು ರೆಡಿಯಾಗಿದೆ.
ಮೋದಿ ಭಾಷಣದ ವಿರುದ್ಧ ಸಂಜೆ 6 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರಿಂದ ಸುದ್ದಿಗೋಷ್ಠಿ ನಡೆಯಲಿದೆ. ಒಟ್ಟಿನಲ್ಲಿ ಪ್ರಧಾನಿ ಮೋದಿಯವರ ಆರೋಪಗಳಿಗೆ ತಿರುಗೇಟು ನೀಡಲು ಕೆಪಿಸಿಸಿ ಸಿದ್ಧವಾಗಿದೆ ಎಂಬುವುದಾಗಿ ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.