ಬೆಂಗಳೂರು: ದೇಶವು ಒಗ್ಗಟ್ಟಿನಲ್ಲಿರುವ ಸಂದರ್ಭದಲ್ಲಿ ಇಂದಿರಾಗಾಂಧಿಗೆ (Indira Gandhi) ಹೋಲಿಕೆ ಮಾಡುವ ಕಾಂಗ್ರೆಸ್ಸಿನವರು (Congress) ಮೊದಲು ಒಡಕು ಮಾತುಗಳನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಖಂಡಿಸಿದ್ದಾರೆ.ಇದನ್ನೂ ಓದಿ: ಪಕ್ಷಾತೀತವಾಗಿ ಮೇ 15ರಿಂದ 23ರವರೆಗೆ ಕರ್ನಾಟಕದಲ್ಲಿ ತಿರಂಗಾ ಯಾತ್ರೆ: ಆರ್.ಅಶೋಕ್
ಬೆಂಗಳೂರಿನಲ್ಲಿ ಮಾತನಾಡಿದ ಅವರು, `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಗೂ ಮೊದಲು ಕಾಂಗ್ರೆಸ್ನವರು ಯುದ್ಧ ಬೇಡ, ಅದರ ಅವಶ್ಯಕತೆ ಇದೆಯೇ ಎಂದು ಹೇಳುತ್ತಿದ್ದರು. ಆಪರೇಷನ್ ಸಿಂಧೂರ ಪ್ರಾರಂಭವಾದ ಮೇಲೆ ಶಾಂತಿ ಸ್ಥಾಪನೆ ಮಾಡಬೇಕೆಂದು ಹೇಳಿಕೆ ನೀಡಿದ್ದರು. ಬಳಿಕ ಕದನ ವಿರಾಮ ಘೋಷಣೆಯಾದ ಮೇಲೆ ಏತಕ್ಕೆ ಯುದ್ಧ ನಿಲ್ಲಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ ಎಂದು ಟೀಕಿಸಿದರು.
ನಾರಿ ಶಕ್ತಿ pic.twitter.com/pcXaFZac1U
— Karnataka Congress (@INCKarnataka) May 13, 2025
ಕಾಂಗ್ರೆಸ್ ಹೇಳಿಕೆಯಲ್ಲಿನ ನಿಲುವು ಮತ್ತು ಉದ್ದೇಶ ಏನು ಎಂಬುದನ್ನು ಮೊದಲು ತಿಳಿಸಬೇಕು. ಪಾಕಿಸ್ತಾನವು ಭಯೋತ್ಪಾದನೆ ಮೂಲಕ ಭಾರತದ ಮೇಲೆ ದಾಳಿ ಮಾಡಿರುವುದಕ್ಕೆ ತಕ್ಕ ಉತ್ತರ ನೀಡುವ ಸಂದರ್ಭದಲ್ಲಿ ಸಂಸತ್ತಿನಲ್ಲಿ ಅಧಿವೇಶನ ಕರೆಯಬೇಕು, ಚರ್ಚೆಯಾಗಬೇಕು ಎಂಬ ಹೇಳಿಕೆಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ