Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ.9 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇವಾದಳ ಶತಮಾನೋತ್ಸವ ಕಾರ್ಯಕ್ರಮ: ಸಲೀಂ ಅಹ್ಮದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನ.9 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇವಾದಳ ಶತಮಾನೋತ್ಸವ ಕಾರ್ಯಕ್ರಮ: ಸಲೀಂ ಅಹ್ಮದ್

Bengaluru City

ನ.9 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇವಾದಳ ಶತಮಾನೋತ್ಸವ ಕಾರ್ಯಕ್ರಮ: ಸಲೀಂ ಅಹ್ಮದ್

Public TV
Last updated: November 8, 2023 9:12 pm
Public TV
Share
2 Min Read
salim ahmed Chitradurga
SHARE

ಬೆಂಗಳೂರು: ನವೆಂಬರ್ 9 ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ (Seva Dal Centenary) ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ (Saleem Ahmed) ಹೇಳಿದ್ದಾರೆ.

ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಚಿವರು, ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

KPCC Salim Ahmed

ಇದೇ ತಿಂಗಳ 28 ರಂದು ಸೇವಾದಳ 100 ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಮಾಡಬೇಕು ಎಂದು ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳನ್ನು ನಿಯೋಜನೆ ಮಾಡಲಾಗಿದ್ದು, 75% ರಷ್ಟು ಸಚಿವರು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಮುಂದಿನ ಒಂದು ವಾರದಲ್ಲಿ ಮಂತ್ರಿಗಳು ಹಾಗೂ ವೀಕ್ಷಕರು ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಕುರಿತು ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ಸಚಿವರಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚರ್ಚೆ ಮಾಡಿ ನಮ್ಮ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದ್ದಾರೆ ಎಂದರು. ಇದನ್ನೂ ಓದಿ: ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡ್ತಿದ್ದೀರಿ?- ಮಹದೇವಪ್ಪ ವಿರುದ್ಧ ರೊಚ್ಚಿಗೆದ್ದ ಯತ್ನಾಳ್

ಮುಂಬರುವ ಜನವರಿ 2ನೇ ವಾರದಲ್ಲಿ ಲೋಕಸಭೆ ಅಭ್ಯರ್ಥಿಗಳ ಘೋಷಣೆ ಆಗಲಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಾವು ಲೋಕಸಭೆ ಚುನಾವಣೆ ತಯಾರಿ ಮಾಡಿದ್ದೇವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಮ್ಮ 4 ಗ್ಯಾರಂಟಿ ಯೋಜನೆಗಳು ಜಾರಿ ಆಗಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ನಮ್ಮ ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ನಮ್ಮ ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ 17,900 ಕೋಟಿ ರೂ. ಹಣವನ್ನು ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಕೇಂದ್ರದಿಂದ ಸ್ಪಂದನೆ ಸಿಗದಿರುವುದು ದುರ್ದೈವ. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರು ಹಾಗೂ 5 ಜನ ಕೇಂದ್ರ ಸಚಿವರಿದ್ದು ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದವರೇ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕಾರಣ ಮಾಡದೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಕೆಪಿಸಿಸಿ ಅಧ್ಯಕ್ಷರು ದೆಹಲಿಗೆ ತೆರಳಿದ್ದು, ಕಾರ್ಯಾಧ್ಯಕ್ಷರ ಬದಲಾವಣೆ ಬಗ್ಗೆ, ನಮ್ಮ ಅಧ್ಯಕ್ಷರು ದೆಹಲಿಗೆ ಹೋಗಿ, ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವಿಚಾರವಾಗಿ ಅವರೇ ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಾತಾಳಕ್ಕೆ ಹೋಗಿ ಯಾರಾದ್ರು ಬೀಳ್ತಾರಾ?- ಆಪರೇಷನ್ ಕಮಲಕ್ಕೆ ಖಂಡ್ರೆ ವ್ಯಂಗ್ಯ

TAGGED:bengalurucongresskarnatakaKPCCSaleem AhmedSeva dalಕರ್ನಾಟಕಕಾಂಗ್ರೆಸ್ಕೆಪಿಸಿಸಿಬೆಂಗಳೂರುಸಲೀಂ ಅಹ್ಮದ್ಸೇವಾದಳ ಶತಮಾನೋತ್ಸವ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Hatti Gold Mine 2
Districts

ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ!

Public TV
By Public TV
2 minutes ago
ಸಾಂರ್ದಭಿಕ ಚಿತ್ರ
Bengaluru City

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ – ಅಕ್ರಮ ತಡೆಗೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣು

Public TV
By Public TV
10 minutes ago
Arvind Kejriwal Manish Sisodia
Latest

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

Public TV
By Public TV
15 minutes ago
Rinku Singh
Cricket

ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್‌ ತಂದೆ ನಿಧನ

Public TV
By Public TV
50 minutes ago
vijayapura JDS
Districts

ವಿಜಯಪುರದಲ್ಲಿಂದು ಜೆಡಿಎಸ್ ಬೆಳ್ಳಿಹಬ್ಬ – ಹೆಲಿಕಾಪ್ಟರ್ ಮೂಲಕ ಗುಮ್ಮಟನಗರಕ್ಕೆ ಹೆಚ್‌ಡಿಡಿ

Public TV
By Public TV
57 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?