Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ನಾಯಕರ ‘ನನ್ನನ್ನೂ ಬಂಧಿಸಿ’ ಪೋಸ್ಟರ್‌ ಅಭಿಯಾನಕ್ಕೆ ಕಾಂಗ್ರೆಸ್‌ ಠಕ್ಕರ್‌

Public TV
Last updated: January 5, 2024 11:42 am
Public TV
Share
3 Min Read
congress tweet
SHARE

ಬೆಂಗಳೂರು: ಶ್ರೀಕಾಂತ್‌ ಪೂಜಾರಿ ಬಂಧನ ಪ್ರಕರಣ ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಶ್ರೀಕಾಂತ್‌ ಬಂಧನ ಖಂಡಿಸಿ ಬಿಜೆಪಿ ನಾಯಕರು, ‘ನಾನು ಕರಸೇವಕ.. ನನ್ನನ್ನೂ ಬಂಧಿಸಿ’ ಅಭಿಯಾನ ನಡೆಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಠಕ್ಕರ್‌ ಕೊಟ್ಟಿದೆ.

,@BJP4Karnataka ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು! @CTRavi_BJP ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? pic.twitter.com/jn3lQUm2Nn

— Karnataka Congress (@INCKarnataka) January 5, 2024

ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರ ಫೋಟೋಗಳನ್ನು ಎಡಿಟ್‌ ಮಾಡಿ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಕಾಂಗ್ರೆಸ್‌, ಬಿಜೆಪಿ ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್‌ ಹೀಗಿರಬೇಕು ಎಂದು ತಿರುಗೇಟು ನೀಡಿದೆ. ಇದನ್ನೂ ಓದಿ: ಕರಸೇವಕರ ಮೇಲೆ ಪ್ರಕರಣಗಳು ಬಾಕಿ ಇವೆ ಎಂದ ಸಿಎಂನ್ನು ಶ್ರೀರಾಮ ಕ್ಷಮಿಸಲ್ಲ: ಅಶೋಕ್ ಕಿಡಿ

,@BJP4Karnataka ಅಧ್ಯಕ್ಷರಾದ @BYVijayendra ಅವರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ.

ಬಿಜೆಪಿಗರೆಲ್ಲರೂ “ನನ್ನನ್ನೂ ಬಂಧಿಸಿ“ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? pic.twitter.com/iE4nqOTZrW

— Karnataka Congress (@INCKarnataka) January 5, 2024

‘ನಾನು ಕರಸೇವಕ.. ನನ್ನನ್ನೂ ಬಂಧಿಸಿ’ ಎಂಬ ಪೋಸ್ಟರ್‌ ಹಿಡಿದು ಪೊಲೀಸ್‌ ಠಾಣೆ ಎದುರು ಮಾಜಿ ಸಚಿವ ಸಿ.ಟಿ.ರವಿ ಗುರುವಾರ ಪ್ರತಿಭಟನೆ ನಡೆಸಿದ್ದರು. ಇದರ ಫೋಟೋವನ್ನು ಎಡಿಟ್‌ ಮಾಡಿ ಕಾಂಗ್ರೆಸ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ‘ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ.. ನನ್ನನ್ನೂ ಬಂಧಿಸಿ’ ಎಂದು ಸಿ.ಟಿ.ರವಿಗೆ ಕಾಂಗ್ರೆಸ್‌ ಠಕ್ಕರ್‌ ಕೊಟ್ಟಿದೆ. ‘ಸಿಟಿ ರವಿ ಅವರೇ ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ’ ಎಂದು ಮಾರ್ಮಿಕವಾಗಿ ನುಡಿದಿದೆ.

ನನ್ನನ್ನೂ ಬಂಧಿಸಿ ಎನ್ನುತ್ತಿರುವ @karkalasunil ಅವರೇ,

ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ?

ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ? pic.twitter.com/bgTdrd22ZF

— Karnataka Congress (@INCKarnataka) January 5, 2024

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕೈಯಲ್ಲಿ, ‘ನಾನು ಆರ್‌ಟಿಜಿಎಸ್‌ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿಯ ಅಕ್ರಮದಲ್ಲಿ ಪಾಲುದಾರ.. ನನ್ನನ್ನೂ ಬಂಧಿಸಿ’ ಎಂದು ಬರೆದಿರುವ ಪೋಸ್ಟರ್‌ ಹಿಡಿಸಿ ಠಕ್ಕರ್‌ ಕೊಟ್ಟಿದೆ. ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರು ಈ ಪೋಸ್ಟರ್‌ ಹಿಡಿದು ಕುಳಿತರೆ ಸೂಕ್ತ. ಬಿಜೆಪಿಗರೆಲ್ಲರೂ ‘ನನ್ನನ್ನು ಬಂಧಿಸಿ’ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟ – ಉದ್ದೇಶಪೂರ್ವಕವಾಗಿ ಸರ್ಕಾರದಿಂದಲೇ ಕೇಸ್‌ಗೆ ಮರುಜೀವ?

,@ikseshwarappa ಅವರು ಹಿಡಿಯಬೇಕಾದ ಪೋಸ್ಟರ್ ಇದು!

ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ! pic.twitter.com/8Q4i4Ckcqb

— Karnataka Congress (@INCKarnataka) January 5, 2024

ನಾನು ಪರಶುರಾಮನ ಮೂರ್ತಿಯ ಕಂಚನ್ನು ಕದ್ದಿದ್ದೇನೆ. ಸರ್ಕಾರಿ ಸಿಮೆಂಟ್‌ ಕದ್ದಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಅವರ ಫೋಟೋ ಕೂಡ ಎಡಿಟ್‌ ಮಾಡಿ ಕಾಂಗ್ರೆಸ್‌ ಹಂಚಿಕೊಂಡಿದೆ. ನನ್ನನ್ನು ಬಂಧಿಸಿ ಎನ್ನುತ್ತಿರುವ ಸುನಿಲ್‌ ಕುಮಾರ್‌ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ ಎಂದು ಖಾರವಾಗಿ ಕಾಂಗ್ರೆಸ್‌ ಪ್ರಶ್ನಿಸಿದೆ.

,@mepratap ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ,

ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ! pic.twitter.com/qD4pO11CUL

— Karnataka Congress (@INCKarnataka) January 5, 2024

ನಾನು 40% ಕಮಿಷನ್‌ ನುಂಗಿ ಸಂತೋಷ್‌ ಪಾಟೀಲ್‌ ಸಾವಿಗೆ ಕಾರಣನಾಗಿದ್ದೇನೆ. ನನ್ನನ್ನೂ ಬಂಧಿಸಿ ಎಂಬ ಪೋಸ್ಟರ್‌ ಹಿಡಿಸಿ ಮಾಜಿ ಸಚಿವ ಈಶ್ವರಪ್ಪಗೆ ತಿರುಗೇಟು ನೀಡಲಾಗಿದೆ. ಈಶ್ವರಪ್ಪ ಅವರು ಹಿಡಿಯಬೇಕಾದ ಪೋಸ್ಟರ್ ಇದು! ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ ಎಂದು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

ನಾನು ಸಂಸತ್‌ ದಾಳಿಕೋರರಿಗೆ ಪಾಸ್‌ ಕೊಟ್ಟು ಸಹಕರಿಸಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಸಂಸದ ಪ್ರತಾಪ್‌ ಸಿಂಹ ಅವರ ಕೈಯಲ್ಲಿ ಪೋಸ್ಟರ್‌ ಹಿಡಿಸಿ ಕಾಂಗ್ರೆಸ್‌ ಟಾಂಗ್‌ ಕೊಟ್ಟಿದೆ. ಪ್ರತಾಪ್‌ ಸಿಂಹ ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ, ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ ಎಂದು ವಾಗ್ದಾಳಿ ನಡೆಸಿದೆ.

TAGGED:bjpcongressಕಾಂಗ್ರೆಸ್ಬಿಜೆಪಿ
Share This Article
Facebook Whatsapp Whatsapp Telegram

Cinema Updates

Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
43 minutes ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
11 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
14 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
15 hours ago

You Might Also Like

Nelamangala Youth Suicide
Bengaluru City

Nelamangala | ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

Public TV
By Public TV
5 minutes ago
Shreyas Iyer 1
Cricket

ಕಳೆದ 15 ತಿಂಗಳಲ್ಲಿ ಅಯ್ಯರ್‌ ಮುಟ್ಟಿದ್ದೆಲ್ಲವೂ ಚಿನ್ನ – ಈಗ 6ನೇ ಟ್ರೋಫಿ ಗೆಲುವಿನ ಗುರಿ!

Public TV
By Public TV
22 minutes ago
RCB vs PBKS
Cricket

ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

Public TV
By Public TV
55 minutes ago
pub party
Bengaluru City

ಐಪಿಎಲ್ ಫೈನಲ್ ಹಣಾಹಣಿ – ಬೆಂಗ್ಳೂರಲ್ಲಿ ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ರೆ FIR

Public TV
By Public TV
59 minutes ago
RCB 6
Cricket

IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

Public TV
By Public TV
2 hours ago
virat kohli 6
Cricket

ಬಂದಿದ್ದು ಸಾಮಾನ್ಯ ಆಟಗಾರನಾಗಿ – ಕಟ್ಟಿದ್ದು RCB ಮಹಾ ಸಾಮ್ರಾಜ್ಯ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?