ಬೆಂಗಳೂರು: ಯಾವ ಪುರುಷಾರ್ಥಕ್ಕೆ ಈ ಅಧಿವೇಶನ ನಡೆಯುತ್ತಿದೆ. ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಹೊಣೆ ಯಾರು ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ಟ್ವೀಟ್ನಲ್ಲಿ ಏನಿದೆ?:
“ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.” ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ಎನ್ನುವಂತಾಗಿದೆ. ರಾಜಕೀಯಕೋಸ್ಕರ ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ‘ರಾಜಕೀಯ ಪ್ರತಿಷ್ಠೆ’ಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ. ‘ಪ್ರಜಾಪ್ರಭುತ್ವಕ್ಕೆ ಗ್ರಹಣ’ ಹಿಡಿಸುವ ಕೆಲಸ ನಡೆದಿದೆ. ಇದನ್ನೂ ಓದಿ: ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್ಡಿಕೆ
"ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ."
ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; "ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೊಸ್ಕರವೇ" ಎನ್ನುವಂತಾಗಿದೆ. 1/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 18, 2022
ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ‘ಕಾಲ ಕಸ’ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?. ಕೋವಿಡ್’ನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ?. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗಕ್ಕೆ ಸಮಿತಿ ರಚನೆ: ಬೊಮ್ಮಾಯಿ
ಕಲಾಪಕ್ಕೆ ‘ಜನಪರ ಅಜೆಂಡಾ’ ಇರಬೇಕೆ ವಿನಾ ‘ಚುನಾವಣೆ ಅಜೆಂಡಾ’ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ‘ಮತ ಗಳಿಕೆಗೆ ಗುರಾಣಿ’ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ’ಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ. ಜನರು ಕಷ್ಟದಲ್ಲಿದ್ದಾರೆ. ಕೋವಿಡ್’ನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ.