Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ

Bengaluru City

ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ

Public TV
Last updated: September 8, 2022 8:40 am
Public TV
Share
3 Min Read
bjp 2
SHARE

ಬೆಂಗಳೂರು: ವರುಣನ ಆರ್ಭಟಕ್ಕೆ ಬೆಂಗಳೂರಿನ ಸ್ಥಿತಿ ಅಧೋಗತಿ ತಲುಪಿದೆ. ಈ ನಡುವೆ `ಬೆಂಗಳೂರು ರಕ್ಷಿಸಬೇಕಾದ ಬೆಂಗಳೂರು ಸಚಿವರು ಕಾಣೆಯಾಗಿದ್ದಾರೆ’ ಎಂದು ಮಿಸ್ಸಿಂಗ್ ಮಿನಿಸ್ಟರ್ಸ್ ಹ್ಯಾಷ್‍ಟ್ಯಾಗ್‍ನಡಿ ಬಿಜೆಪಿ ಸಚಿವರು, ಸಂಸದರ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.

congress flag

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ಮಿಂಗ್ ಮಾಡುತ್ತಿದ್ದರು. ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ. ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ ಎಂದು ವ್ಯಂಗ್ಯವಾಡಿದ್ದಾರೆ.

ಸಚಿವ @mla_sudhakar ಅವರು
ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು.

ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ.

ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ! #MissingMinisters#BJPBarshtotsava pic.twitter.com/bLfmTrbqR6

— Karnataka Congress (@INCKarnataka) September 7, 2022

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ. ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಆರಗ ಜ್ಞಾನೇಂದ್ರ ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ.

ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ @JnanendraAraga ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ!?#MissingMinisters#BJPBrashtotsava pic.twitter.com/zB3SAR3s6Q

— Karnataka Congress (@INCKarnataka) September 7, 2022

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ ಆರ್. ಅಶೋಕ್ ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ. ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್‍ಗಳಿಗೆ ಕ್ರಿಯಾಶೀಲರಾಗುತ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಹಾ ಮಳೆಗೆ ವ್ಯಂಗ್ಯ – #LeaveBengaluru ಅಭಿಯಾನ ಆರಂಭಿಸಿದ ಕನ್ನಡಿಗರು

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ @RAshokaBJP ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ.

ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್‌ಗಳಿಗೆ ಕ್ರಿಯಾಶೀಲರಾಗ್ತಾರೆ!#MissingMinisters#BJPBrashtotsava pic.twitter.com/aDJEgsG2XV

— Karnataka Congress (@INCKarnataka) September 7, 2022

ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ? ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ ‘ನಾನೇ ಸಿಎಂ’ ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ. “ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ” ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು ಡಾ. ಅಶ್ವಥ್‍ನಾರಾಯಣ್ ಅವರೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ?

ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ 'ನಾನೇ ಸಿಎಂ' ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ.

"ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ" ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು @drashwathcn ಅವರೇ?#MissingMinisters#BJPBrashtotsava pic.twitter.com/enuFxpk5tY

— Karnataka Congress (@INCKarnataka) September 7, 2022

ಸಂಸದ ತೇಜಸ್ವಿ ಸೂರ್ಯ ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ. ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ. ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ ಎಂದು ಕಾಲೆಳೆದಿದ್ದಾರೆ.

ಸಂಸದ @Tejasvi_Surya ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ!

ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ.

ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ!#MissingMinisters#BJPBrashtotsava pic.twitter.com/gSoJ4eDK5s

— Karnataka Congress (@INCKarnataka) September 7, 2022

ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ ಎಸ್.ಟಿ. ಸೋಮಶೇಖರ್ ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ. ಜನತೆ ಹುಡುಕುತ್ತಿದ್ದಾರೆ. ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ. ಸಚಿವರೇ ಜನರತ್ತ ನೋಡುವುದು ಯಾವಾಗ ಎಂದಿದ್ದಾರೆ.

ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ @STSomashekarMLA ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ.
ಜನತೆ ಹುಡುಕುತ್ತಿದ್ದಾರೆ.

ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ!

ಸಚಿವರೇ ಜನರತ್ತ ನೋಡುವುದು ಯಾವಾಗ?#MissingMinisters#BJPBrashtotsava pic.twitter.com/WJ4wCN2VCS

— Karnataka Congress (@INCKarnataka) September 7, 2022

ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ? ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ? ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸೋತಿದ್ದಕ್ಕೆ ಕ್ರೀಡಾಂಗಣದಲ್ಲಿ ಅಫ್ಘಾನ್‌ ಅಭಿಮಾನಿಗಳ ಹುಚ್ಚಾಟ – ಚಯರ್‌ನಲ್ಲೇ ಪಾಕಿಗಳ ಮೇಲೆ ಹಲ್ಲೆ

ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ @VSOMANNA_BJP ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ?

ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ?

ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ?#MissingMinisters#BJPBrashtotsava pic.twitter.com/oLWZvMq5AM

— Karnataka Congress (@INCKarnataka) September 7, 2022

ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ ಗೋಪಾಲಯ್ಯ.ಕೆ ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ. ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಾಪತ್ತೆಯಾಗಿದ್ದೆಲ್ಲಿ? ಸಿಎಂ ಸಚಿವರೆಲ್ಲರನ್ನೂ ‘ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ’ ಎಂಬಂತೆ ಬಿಟ್ಟಿದ್ದಾರೆಯೇ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ @GopalaiahK ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ.

ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಪತ್ತೆಯಾಗಿದ್ದೆಲ್ಲಿ?

ಸಿಎಂ ಸಚಿವರೆಲ್ಲರನ್ನೂ 'ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ' ಎಂಬಂತೆ ಬಿಟ್ಟಿದ್ದಾರೆಯೇ?!#MissingMinisters#BJPBrashtotsava pic.twitter.com/B2gmuvoqUV

— Karnataka Congress (@INCKarnataka) September 7, 2022

ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ ಬೆಂಗಳೂರಿನ ಸಚಿವರಾದ ಭೈರತಿ ಬಸರಾಜ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ. ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು? ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ ಎಂದು ಹರಿಹಾಯ್ದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurubjpcongressraintweetಕಾಂಗ್ರೆಸ್ಟ್ವೀಟ್ಬಿಜೆಪಿಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
14 minutes ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
15 minutes ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
36 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
57 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?