ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಪೆನ್ಡ್ರೈವ್ ಪಾಲಿಟಿಕ್ಸ್ (Pendrive Politics) ಜೋರಾಗಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ವಿವಿಧ ಇಲಾಖೆಗಳ ಅಕ್ರಮದ ಬಗ್ಗೆ ಆರೋಪ ಮಾಡ್ತಿದ್ದಾರೆ.
ಇದರ ನಡುವೆ ಈವರೆಗೆ ಒಂದು ಲೆಕ್ಕ ಸೋಮವಾರದಿಂದ ಅಸಲಿ ಲೆಕ್ಕ ಶುರು ಎಂಬಂತಾಗಿದೆ. ಪೆನ್ಡ್ರೈವ್ ಮೂಲಕ ನೆಕ್ಸ್ಟ್ ಪಾಲಿಟಿಕ್ಸ್ ಡ್ರೈವ್ ಶುರುವಾದಂತಿದೆ. 4 ಇಲಾಖೆಗಳ ವರ್ಗಾವಣೆ ವಿಚಾರಗಳ ಬಗ್ಗೆ ಹೆಚ್ಡಿಕೆ ತಲಾಶ್ ಆರಂಭಿಸಿದ್ದಾರೆ. ಹುಡುಕಲು ಹೋದ ಹೆಚ್ಡಿಕೆಗೆ ಸಿಕ್ಕಿದ್ದೇನು..? ಬಿಟ್ಟಿದ್ದೇನು..? ಎಂಬ ಚರ್ಚೆಗಳು ಶುರುವಾಗಿದೆ. ಇದನ್ನೂ ಓದಿ: ಮಾನನಷ್ಟ ಪ್ರಕರಣದಲ್ಲಿ ರಾಹುಲ್ಗೆ ಹಿನ್ನಡೆ – ಮುಂದಿನ ರಾಜಕೀಯ ಭವಿಷ್ಯ ಏನು?
ಸದನದಲ್ಲಿ ಬಿಜೆಪಿ (BJP) ಸಹಕಾರದೊಂದಿಗೆ ಸಿದ್ದರಾಮಯ್ಯ (Siddaramaiah) ಟೀಂ ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಹೆಚ್ಡಿಕೆ ನಂಬಿಕಸ್ಥ ಅಧಿಕಾರಿಗಳೇ ಪೆನ್ಡ್ರೈವ್ ಅಸಲಿಗೆ ಕಾರಣ ಎಂಬ ಚರ್ಚೆ ಶುರುವಾಗಿದೆ. 4 ಇಲಾಖೆಗಳಲ್ಲಿ ಮೂವರು ಪ್ರಭಾವಿಗಳ ಸಂಭಾಷಣೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ. ಪೆನ್ಡ್ರೈವ್ ಪ್ರಮುಖ ಅಧಿಕಾರಿಗಳ ವಿಚಾರದಲ್ಲಿ ಸಂಭಾಷಣೆ ನಡೆಸಿರುವ ಆಡಿಯೋ ಇದೆ ಎನ್ನಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಹಿನ್ನಡೆ- ಮಾನನಷ್ಟ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
ಈ ಆಡಿಯೋಗಳನ್ನೇ ಮುಂದಿಟ್ಟುಕೊಂಡು ಹೆಚ್ಡಿಕೆ ಪೆನ್ಡ್ರೈವ್ ಬ್ರಹ್ಮಾಸ್ತ್ರ ಹೂಡಲಿದ್ದಾರೆ. ಬಜೆಟ್ ಬಳಿಕ ಅಸಲಿ ಆಟ ಶುರುವಾಗಲಿದೆ ಅಂತಾ ಆಪ್ತರ ಬಳಿ ಕುಮಾರಸ್ವಾಮಿ ಹೇಳಿಕೊಂಡಿದ್ದಾರಂತೆ. ಹಾಗಾಗಿ ಮುಂದಿನವಾರ ರಾಜ್ಯ ರಾಜಕಾರಣದಲ್ಲಿ ರಣರೋಚಕ ಕದನ ಸಾಧ್ಯತೆ ಇದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]