ಎಸ್‍ಎಂಕೆ, ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿದ್ರಿಂದ ಕಾಂಗ್ರೆಸ್‍ಗೆ ಗೆಲುವು: ದಿನೇಶ್ ಗುಂಡೂರಾವ್

Public TV
1 Min Read
gundu rao 1

ಬೆಂಗಳೂರು: ಮಾಜಿ ಸಿಎಂ ಎಸ್‍ಎಂ ಕೃಷ್ಣ ಹಾಗೂ ಕುಮಾರ್ ಬಂಗಾರಪ್ಪ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಕಾಂಗ್ರೆಸ್‍ಗೆ ಗೆಲುವು ಸಿಕ್ಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.

ಉಪಚುನಾಚವಣೆಯಲ್ಲಿ ಗುಂಡ್ಲುಪೇಟೆ ಹಾಗೂ ನಂಜನಗೂಡು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎಸ್‍ಎಂ ಕೃಷ್ಣ, ಕುಮಾರ್ ಬಂಗಾರಪ್ಪ ಬಿಜೆಪಿಗೆ ಸೇರ್ಪಡೆಯಾಗಿದ್ದರಿಂದ ಕಾಂಗ್ರೆಸ್‍ಗೆ ಗೆಲುವು ಸಿಕ್ಕಿದೆ. ಜನ ಯಾವುದೇ ರೀತಿಯ ಬಣ್ಣದ ಮಾತುಗಳಿಗೆ ಸೋಲುವುದಲ್ಲ. ಜನ ಪ್ರತ್ಯುತ್ತರ ನೀಡಿದ್ದಾರೆ ಅಂತ ಹೇಳಿದ್ರು.

ಜಾತಿ ಆಧಾರದ ಮೇಲೆ ಚುನಾವಣೆ ಗೆದ್ದಿಲ್ಲ. ಜನರೇ ತಕ್ಕ ಉತ್ತರ ನೀಡಿದ್ದಾರೆ. ಇನ್ನು ಮುಂದೆ ಕೂಡ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಮತದಾರರು ನಮ್ಮ ಅಭ್ಯರ್ಥಿಗಳಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಅಂದ್ರು.

ಕಾಂಗ್ರೆಸ್ ಜಯಭೇರಿ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ರು.

gundu rao

Share This Article
Leave a Comment

Leave a Reply

Your email address will not be published. Required fields are marked *