ಬೆಳಗಾವಿ: ನೂತನ ಸಚಿವರಾಗಿ ಆಗಮಿಸಿದ್ದ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಇದೇ ವೇಳೆ ಕಾಂಗ್ರೆಸ್ ವಿಜಯೋತ್ಸವ ಸಂಭ್ರಮಿಸಲು ತಂದಿದ್ದ ಲಾಡು ತಿನ್ನಲು ಕಾಂಗ್ರೆಸ್ ಕಾರ್ಯಕರ್ತರು ಮುಗಿಬಿದ್ದರು.
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ (Congress) ಕಚೇರಿ ಎದುರು ಕಾರ್ಯಕರ್ತರು ಲಾಡುಗಾಗಿ ಮುಗಿಬಿದ್ದರು. ಸಚಿವರಾದ ಬಳಿಕ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ್ದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ತೆರೆದ ವಾಹನದಲ್ಲಿ ಸಚಿವದ್ವಯರ ಬೃಹತ್ ಮೆರವಣಿಗೆ ನಡೆಸಲಾಯಿತು. ಇದನ್ನೂ ಓದಿ: ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಸಚಿವದ್ವಯರ ಆಗಮನ
ವಿಮಾನ ನಿಲ್ದಾಣದಿಂದಲೇ ಬೈಕ್ ರ್ಯಾಲಿ ಮೂಲಕ ಸಚಿವದ್ವಯರನ್ನು ನಗರಕ್ಕೆ ಕರೆತಂದ ಕಾರ್ಯಕರ್ತರು, ನಂತರ ಕಿತ್ತೂರು ರಾಣಿ ಚೆನ್ನಮ್ಮ, ಛತ್ರಪತಿ ಶಿವಾಜಿ ಮಹಾರಾಜ್, ಡಾ.ಬಿ.ಆರ್ ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಮಹಾತ್ಮ ಗಾಂಧಿ ಸೇರಿದಂತೆ ಮಹಾನ್ ವ್ಯಕ್ತಿಗಳ ಪುತ್ಥಳಿಗಳಿಗೆ ಸಚಿವರಿಂದ ಮಾಲಾರ್ಪಣೆ ಮಾಡಿಸಲಾಯಿತು. ಇದನ್ನೂ ಓದಿ: ಮನೆಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ, ಎಲ್ಲರಿಗೂ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ