ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

Public TV
1 Min Read
Nirmala Sitharaman Office

ಬೆಂಗಳೂರು: ರಾಜ್ಯಕ್ಕೆ ತೆರಿಗೆ (Tax) ಅನ್ಯಾಯ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಕಚೇರಿಗೆ ಮಸಿ ಬಳಿದಿದ್ದಾರೆ.

ಬೆಂಗಳೂರಿನ (Bengaluru) ಮಿಲ್ಲರ್ಸ್ ರಸ್ತೆಯಲ್ಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ (Office) ಮಸಿ  ಬಳಿಯಲಾಗಿದೆ. ರಾಜ್ಯಕ್ಕೆ ತೆರಿಗೆ ಅನ್ಯಾಯ ಖಂಡಿಸಿ ಕಚೇರಿಯಲ್ಲಿರುವ ನಿರ್ಮಲಾ ಸೀತಾರಾಮನ್ ಅವರ ನಾಮಫಲಕಕ್ಕೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (NSUI) ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಮಸಿ ಬಳಿದ ಹಿನ್ನೆಲೆಯಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಸಿಐಡಿ ತನಿಖೆಗೆ

ವಿಧಾನಸೌಧ ಪೊಲೀಸರು ಎನ್‌ಎಸ್‌ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸೂರಜ್, ಲಕ್ಷ್ಯರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಎಂಬವರನ್ನು ವಶಕ್ಕೆ ಪಡೆದಿದ್ದು, ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್‌ ಗಾಂಧಿ

Share This Article