Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್

Bengaluru City

ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್

Public TV
Last updated: February 10, 2024 8:54 pm
Public TV
Share
3 Min Read
Ashwath Narayan
SHARE

ಬೆಂಗಳೂರು: ಕೇಂದ್ರದ ಬಿಜೆಪಿ (BJP) ಸರ್ಕಾರವು ತಮ್ಮ ಸಾಧನೆಯನ್ನು ಅಂಕಿಅಂಶಗಳ ಶ್ವೇತಪತ್ರದ ಮೂಲಕ ತಿಳಿಸಿದೆ. ಯುಪಿಎ (UPA) ಬಿಟ್ಟು ಹೋದ ಆರ್ಥಿಕ ಗೊಂದಲ, ದಿಕ್ಕುದೆಸೆ ಇಲ್ಲದ ಆಡಳಿತ, ಅವ್ಯವಸ್ಥೆಯನ್ನು ಸರಿಪಡಿಸಿ ಕಷ್ಟದ ಕಾಲದಿಂದ ಒಳ್ಳೆಯ ಕಾಲಕ್ಕೆ ದೇಶವನ್ನು ಒಯ್ದವರು ನರೇಂದ್ರ ಮೋದಿಜೀ (Narendra Modi) ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ (CN Ashwath Narayan) ಹೇಳಿದ್ದಾರೆ.

ಮಲ್ಲೇಶ್ವರದ (Malleshwaram) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರದ ಎನ್‌ಡಿಎ (NDA) ಸರ್ಕಾರದ ಸಾಧನೆ ಮತ್ತು ಯುಪಿಎ ಸರ್ಕಾರದ ವೈಫಲ್ಯಗಳ ಕುರಿತು ವಿವರಿಸಿದರು. ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ಸಿಗರು ಮಾತನಾಡುತ್ತಾರೆ. ವಾಜಪೇಯಿ ಅವರ ಆಡಳಿತ ಇದ್ದಾಗ ಹಣದುಬ್ಬರ- ಬೆಲೆ ಏರಿಕೆ ಶೇ 3.9ರಷ್ಟಿತ್ತು. ಕಾಂಗ್ರೆಸ್‌ನ 10 ವರ್ಷಗಳ ಅವಧಿಯಲ್ಲಿ ಅದು ಸರಾಸರಿ ಶೇ. 8.2 ಆಗಿತ್ತು. ಕೋವಿಡ್ ಇದ್ದರೂ, ಜಾಗತಿಕ ಹಣಕಾಸಿನ ಬಿಕ್ಕಟ್ಟು, ಯುದ್ಧಗಳಿದ್ದರೂ ಮೋದಿಜೀ ಅವರ ಆಡಳಿತದಲ್ಲಿ ಬೆಲೆ ಏರಿಕೆ ಸರಾಸರಿ ಶೇ. 5ರಷ್ಟಿದೆ. ವಿಶ್ವದ ಎಲ್ಲೆಡೆ ಬೆಲೆ ಏರಿಕೆ ಇದೆ. ವಾಸ್ತವವಾಗಿ ಯುಪಿಎ ಅವಧಿಯಲ್ಲಿ ಬೆಲೆ ಏರಿಕೆ ಇದ್ದದ್ದು ಎದ್ದು ಕಾಣುವಂತಿತ್ತು ಎಂದು ವಿವರಿಸಿದರು.‌ ಇದನ್ನೂ ಓದಿ: ಮುಂದಿನ 25 ವರ್ಷಗಳಲ್ಲಿ ‘ವಿಕಸಿತ ಭಾರತ’ ಕನಸು ನನಸಾಗುತ್ತೆ: ಮೋದಿ ಭರವಸೆ

ವಾಜಪೇಯಿ ಅವರ ಕಾಲದಲ್ಲಿ ಶೇ. 8ರಷ್ಟು ಜಿಡಿಪಿ ಮೂಲಕ ಅಭಿವೃದ್ಧಿ ಇತ್ತು. ಆದರೆ, ಯುಪಿಎ ಕಾಲದಲ್ಲಿ ಬೆಲೆ ಏರಿಕೆ ಇದ್ದರೂ ಬೆಳವಣಿಗೆ ಕಡಿಮೆ ಇತ್ತು. ಕಾಂಗ್ರೆಸ್ ಅವಧಿಯದ್ದು ಶೇ. 5ಷ್ಟು ಅಭಿವೃದ್ಧಿ ಎಂದು ಆರೋಪಿಸಿದರು. ಮೋದಿಯವರ ಅವಧಿಯಲ್ಲಿ ಶೇ. 8ರಿಂದ 9ರಷ್ಟು ಬೆಳವಣಿಗೆಯನ್ನು ನಾವು ಕಾಣುತ್ತಿದ್ದೇವೆ. ಯುಪಿಎ ಅವಧಿಯಲ್ಲಿ ಸಾರ್ವಜನಿಕ ರಂಗದ ಬ್ಯಾಂಕ್‌ಗಳಿಂದ ಅತಿ ಹೆಚ್ಚು ಸಾಲ ಕೊಡಿಸಿದ್ದರು. ವಾಜಪೇಯಿಯವರ ಕಾಲದಲ್ಲಿ ಲೋನ್ ಎಕ್ಸ್ಪೋಜರ್ 6 ಲಕ್ಷ 60 ಸಾವಿರ ಕೋಟಿ ಇದ್ದರೆ ಯುಪಿಎ ಕಾಲದಲ್ಲಿ ಅದು 39 ಲಕ್ಷ ಕೋಟಿಗೆ ಏರಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ: ದಿನೇಶ್ ಗುಂಡೂರಾವ್

ದೇಶದ ಸಾಲ ಮರುಪಾವತಿಗೂ ಸಮಸ್ಯೆ ಇತ್ತು. ಯುಪಿಎ ಸರ್ಕಾರ ನಿರಾಳವಾಗಿ ನಿದ್ರಾಲೋಕದಲ್ಲಿತ್ತು. ಬ್ಯಾಂಕ್ ಎನ್‌ಪಿಎ ಶೇ. 7 ಇತ್ತು. ಈಗ ಅದು ಶೇ. 3.2ರಷ್ಟಿದೆ. ಬ್ಯಾಂಕ್‌ಗಳು ಹಿಂದೆ ಮುಚ್ಚುವಂಥ ಸ್ಥಿತಿಯಲ್ಲಿದ್ದವು. ಈಗ ಮೋದಿಜೀ ಅವರ ಆಡಳಿತದಲ್ಲಿ ಅವು ಬೆಳವಣಿಗೆ ಕಂಡಿವೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮದ ಕವಚದ ಒಳಗೆ ಪಾಪ, ಅನ್ಯಾಯದ ಕೆಲಸ ಬಿಜೆಪಿ ಮಾಡುತ್ತಿದೆ: ದಿನೇಶ್ ಗುಂಡೂರಾವ್

ಯುಪಿಎ ಅವಧಿಯಲ್ಲಿ ಡಾಲರ್ ಬೆಲೆ ಏರಿಕೆಯೂ ಗರಿಷ್ಠ ಪ್ರಮಾಣದಲ್ಲಿತ್ತು. ಕೇವಲ 4 ತಿಂಗಳ ಆಮದಿಗೆ ಸಾಕಾಗುವಷ್ಟು ಮಾತ್ರ ಫಾರಿನ್ ರಿಸರ್ವ್ (290 ಬಿಲಿಯನ್ ಡಾಲರ್) ನಮ್ಮ ದೇಶದಲ್ಲಿತ್ತು. ಈಗ 596 ಬಿಲಿಯನ್ ಡಾಲರ್ ಇದೆ. ಈಗ ಅಭಿವೃದ್ಧಿಯು ಭರವಸೆದಾಯಕವಾಗಿ ನಿರ್ವಹಣೆ ಆಗುತ್ತಿದೆ ಎಂದು ವಿವರ ನೀಡಿದರು. ಹಣಕಾಸು ಕೊರತೆ ಗರಿಷ್ಠ ಇತ್ತು. ತೋರಿಸುತ್ತಿದ್ದುದೇ ಒಂದು; ವಾಸ್ತವವಾಗಿ ಇನ್ನೊಂದು ಎಂಬ ಸ್ಥಿತಿ ಇತ್ತು. 1.90 ಲಕ್ಷ ಕೋಟಿ ಆಯಿಲ್ ಬಾಂಡ್ ಬಿಡುಗಡೆ ಮಾಡಿದರು. ಇದನ್ನೆಲ್ಲ ತೋರಿಸಿರಲಿಲ್ಲ. ಇಂಥ ಸಾಲಗಳನ್ನು ಮರುಪಾವತಿ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದೇಶಕ್ಕೆ ಒಂದೇ ಸಂವಿಧಾನ ಬೇಕೆಂಬ ಕನಸು ಸಾಕಾರಗೊಂಡಿದೆ – ಮೋದಿ ಬಣ್ಣನೆ

ಅವರ ಕಾಲದಲ್ಲಿ ಆರ್ಥಿಕ ಸುಸ್ಥಿರತೆ ಇಲ್ಲದೆ ಎಲ್ಲವೂ ಭರವಸೆದಾಯಕವಾಗಿರಲಿಲ್ಲ. ಇವತ್ತು ಎಲ್ಲವೂ ಸುಸ್ಥಿರತೆಯಿಂದ ಸಾಗಿದೆ. ಮೂಲಭೂತ ಸೌಕರ್ಯ, ಆಸ್ತಿ ನಿರ್ಮಿಸುವ ನಿಟ್ಟಿನಲ್ಲಿ ಕ್ಯಾಪಿಟಲ್ ಎಕ್ಸ್ಪೆಂಡಿಚರ್ ಮೊತ್ತವು ವಾಜಪೇಯಿ ಅವರ ಕಾಲದಲ್ಲಿ ಶೇ. 31ರಷ್ಟಿತ್ತು. ಕಾಂಗ್ರೆಸ್ ಕಾಲದಲ್ಲಿ ಅದು ಕೇವಲ ಶೇ. 16ಕ್ಕೆ ಇಳಿಯಿತು. ಮೋದಿಜೀ ಅವರ ಕಾಲದಲ್ಲಿ ಮತ್ತೆ ಶೇ. 28ಕ್ಕೆ ಏರಿಕೆ ಕಂಡಿತು ಎಂದು ಮಾಹಿತಿ ನೀಡಿದರು. ಕಾಂಗ್ರೆಸ್ ಅವಧಿಯಲ್ಲಿ ಮೂಲಭೂತ ಸೌಕರ್ಯಕ್ಕೆ ಕಡಿವಾಣ ಹಾಕಿರುವುದು ಎದ್ದು ಕಾಣುವಂತಿದೆ ಎಂದರು. ಈ ಎಲ್ಲ ವಿಚಾರಗಳಿಗೆ ಕಾಂಗ್ರೆಸ್ಸಿನವರಲ್ಲಿ ಉತ್ತರ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ಮೋದಿ

ಸಾಮಾಜಿಕ ಕ್ಷೇತ್ರದಲ್ಲಿ 96 ಸಾವಿರ ಕೋಟಿ ಮೊತ್ತ ಖರ್ಚಾಗದೆ ಉಳಿದಿತ್ತು. ಇದು ಅಸಮರ್ಥ ಆಡಳಿತಕ್ಕೆ ಕೈಗನ್ನಡಿ ಎಂದು ದೂರಿದರು. 60-65 ವರ್ಷಗಳ ಕಾಂಗ್ರೆಸ್- ಯುಪಿಎ ಅವಧಿಯಲ್ಲಿ 14.5 ಕೋಟಿ ಎಲ್‌ಪಿಜಿ ಸಿಲಿಂಡರ್ ಸಂಪರ್ಕ ಇದ್ದದ್ದು ಈಗ 31 ಕೋಟಿಗೂ ಹೆಚ್ಚಾಗಿದೆ. ವಿದ್ಯುದೀಕರಣ ಅವರ ಕಾಲದಲ್ಲಿ ಶೇ. 85 ಇದ್ದದ್ದನ್ನು ಈಗ ಶೇ. 100ಕ್ಕೆ ತರಲಾಗಿದೆ. ಅವರ ಕಾಲದಲ್ಲಿ 12 ಗಂಟೆ ಸರಾಸರಿ ವಿದ್ಯುತ್ ಲಭ್ಯವಿದ್ದರೆ, ಈಗ 20 ಗಂಟೆಗೂ ಹೆಚ್ಚು ಕಾಲ ಲಭ್ಯತೆ ಇದೆ ಎಂದು ಅಂಕಿ ಅಂಶಗಳನ್ನು ನೀಡಿದರು. ಇದನ್ನೂ ಓದಿ: ರಾಮನಿಲ್ಲದೆ ಭಾರತವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಅಮಿತ್ ಶಾ

TAGGED:Ashwath Narayanbengalurubjpcongressupaಅಶ್ವಥ್ ನಾರಾಯಣ್ಕಾಂಗ್ರೆಸ್ಬಿಜೆಪಿಬೆಂಗಳೂರುಯುಪಿಎ
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
19 minutes ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
28 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
32 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
49 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
56 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?