Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವವರಿಗೆ ಕಾಂಗ್ರೆಸ್ಸಿಗರು ಹೆದರಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವವರಿಗೆ ಕಾಂಗ್ರೆಸ್ಸಿಗರು ಹೆದರಲ್ಲ: ಡಿಕೆಶಿ

Bengaluru City

ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವವರಿಗೆ ಕಾಂಗ್ರೆಸ್ಸಿಗರು ಹೆದರಲ್ಲ: ಡಿಕೆಶಿ

Public TV
Last updated: January 23, 2024 8:32 pm
Public TV
Share
4 Min Read
dk shivakumar 2 2
SHARE

ಬೆಂಗಳೂರು: ಬಿಜೆಪಿಯವರು (BJP) ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ (Congress) ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಅಸ್ಸಾಂನಲ್ಲಿ (Assam) ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು. ಇದನ್ನೂ ಓದಿ: ರಾಮಮಂದಿರದಲ್ಲಿರೋ ಮೂರ್ತಿಗೆ `ಬಾಲಕ ರಾಮ’ ಹೆಸರು: ಪ್ರತಿಷ್ಠಾಪನೆಯ ಅರ್ಚಕ ಅರುಣ್ ದೀಕ್ಷಿತ್ ಮಾಹಿತಿ

Rahul Gandhi

ರಾಹುಲ್ ಗಾಂಧಿ ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ. ಭಾರತ ಜೋಡೋ ನ್ಯಾಯ ಯಾತ್ರೆ ಕುರಿತು ಪಕ್ಷದ ಮುಖಂಡರು ಚರ್ಚೆ ಮಾಡುವಾಗ ನಾನು, ಸಿದ್ದರಾಮಯ್ಯ ಅವರು ಇದ್ದೆವು. ಈ ಚಳಿ, ಬಿಸಿಲಿನಲ್ಲಿ ಹೆಜ್ಜೆ ಹಾಕಿ ಈ ದೇಶದ ಹೃದಯಗಳನ್ನು ಒಗ್ಗೂಡಿಸಬೇಕು. ಜನರ ಧ್ವನಿಯಾಗಿ, ಅವರ ಸಮಸ್ಯೆ ಬಗೆಹರಿಸಬೇಕು. ಆ ಮೂಲಕ ನ್ಯಾಯ ಒದಗಿಸಬೇಕು ಎಂಬ ನಿರ್ಣಯಕ್ಕೆ ರಾಹುಲ್ ಗಾಂಧಿ ಅವರು ಬದ್ಧರಾಗಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಯಾವುದೇ ಅಕ್ರಮ, ಗೊಂದಲವಿಲ್ಲದೆ ಪಿಎಸ್‌ಐ ಪರೀಕ್ಷೆ ನಡೆಸಿದ ಕೆಇಎ

ಈ ಯಾತ್ರೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ. ಎಲ್ಲಾ ವಿರೋಧ ಪಕ್ಷಗಳಿಗೆ ಮಾದರಿ. ದೇಶದ ಐಕ್ಯತೆ, ಸಮಗ್ರತೆ ಶಾಂತಿಗೆ ಸಾವಿರಾರು ಕಾಂಗ್ರೆಸ್ ನಾಯಕರು ಪ್ರಾಣತ್ಯಾಗ ಮಾಡಿದ್ದಾರೆ. ತನ್ನ ಅಜ್ಜಿಗೆ ಗುಂಡು ಹಾರಿಸಿ ಕೊಂದಿದ್ದನ್ನು, ಅವರ ಚಿಕ್ಕಪ್ಪ ಸಂಜಯ್ ಗಾಂಧಿ ಹತ್ಯೆಯನ್ನು, ತನ್ನ ತಂದೆ ರಾಜೀವ್ ಗಾಂಧಿ ಮೇಲೆ ಬಾಂಬ್ ದಾಳಿ ಮಾಡಿ, ಹತ್ಯೆ ಮಾಡಿದ್ದನ್ನು ರಾಹುಲ್ ಗಾಂಧಿ ಚಿಕ್ಕ ವಯಸ್ಸಿನಲ್ಲೇ ಕಂಡಿದ್ದಾರೆ. ಇಷ್ಟು ದುಃಖ ಅನುಭವಿಸಿದ್ದರೂ ಅವರು ದೇಶದ ಒಗ್ಗಟ್ಟಿಗಾಗಿ ಯಾತ್ರೆ ಮಾಡುತ್ತಿದ್ದಾರೆ. ಅದನ್ನು ನೋಡಿ ಬಿಜೆಪಿಯವರಿಂದ ಸಹಿಸಲು ಆಗುತ್ತಿಲ್ಲ. ಬಿಜೆಪಿಯ ಯಾವುದಾದರೂ ಒಬ್ಬ ನಾಯಕ ಇಂತಹ ತ್ಯಾಗ ಮಾಡಿದ್ದಾರಾ? ಕಾಂಗ್ರೆಸ್ ಪಕ್ಷ ಮಾತ್ರ ಇಂತಹ ಯಾತ್ರೆ ಮಾಡಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಶ್ರೀರಾಮ ಅವರಪ್ಪನ ಮನೆ ಆಸ್ತಿನಾ? – ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಡಿಕೆಶಿ

ಕೆಲವೇ ಗಂಟೆಗಳ ಸೂಚನೆಗೆ ಸ್ಪಂದಿಸಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಬಂದು ಭಾಗವಹಿಸಿದ್ದೀರಿ. ನೀವು ರಾಹುಲ್ ಗಾಂಧಿ ಅವರ ಬೆಂಬಲವಾಗಿ ನಿಂತಿರುವುದಕ್ಕೆ ಧನ್ಯವಾದಗಳು. ಯಾತ್ರೆ ನಿಲ್ಲಿಸಲು ಬಿಜೆಪಿ ಮಾಡುತ್ತಿರುವ ಯಾವುದೇ ಷಡ್ಯಂತ್ರಕ್ಕೂ ನಾವು ಜಗ್ಗುವುದಿಲ್ಲ. ದೇಶದ ಒಗ್ಗಟ್ಟು, ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದರು. ಇದನ್ನೂ ಓದಿ: 11 ದಿನಗಳ ಕಾಲ ಮೋದಿ ಉಪವಾಸ ಮಾಡಿದ್ದೇ ಅನುಮಾನ: ವೀರಪ್ಪ ಮೊಯ್ಲಿ

ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ? ಧರ್ಮ ಯಾವುದಾದರೂ ತತ್ವವೊಂದೆ. ನಾಮ ನೂರಾದರೂ ದೈವವೊಂದೆ. ಪೂಜೆ ನೂರಾದರೂ ಭಕ್ತಿವೊಂದೆ. ಕರ್ಮ ಹಲವಾದರೂ ನಿಷ್ಠೆವೊಂದೆ. ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ. ಸಂವಿಧಾನದ ಪರವಾಗಿ ನಾವು ಎಲ್ಲಾ ಧರ್ಮಕ್ಕೂ ಆದ್ಯತೆ ನೀಡುತ್ತಾ ಬಂದಿದ್ದೇವೆ. ಎಲ್ಲರನ್ನೂ ಸಮಾನವಾಗಿ ಕಂಡು ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಮೇಲೆ ಆಡಳಿತ ಮಾಡುತ್ತಿದ್ದೇವೆ. ನಿಮ್ಮ ಕೈಯಲ್ಲೂ ಅಧಿಕಾರ ಇತ್ತು. ಆಗ ಜನಪರ ಕಾರ್ಯಕ್ರಮ ಯಾಕೆ ಮಾಡಲಿಲ್ಲ? ಈಗ ಅಧಿಕಾರ ಹೋದ ನಂತರ ಸಂಕಟಪಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿಯವರು ಬೀದಿ ಬೀದಿಯಲ್ಲಿ ರಾಮನನ್ನು ಆಟ ಆಡಿಸಿದ್ದಾರೆ: ಮಧು ಬಂಗಾರಪ್ಪ

ಈ ಸರ್ಕಾರ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಬಲಿಷ್ಠವಾಯಿತು. ಇದನ್ನು ಬಿಜೆಪಿ ಸಹಿಸಲು ಆಗುತ್ತಿಲ್ಲ. ನಾವೆಲ್ಲರೂ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆದ ಭಾರತ ಜೋಡೋ ಯಾತ್ರೆ ವೇಳೆ ರಾಜ್ಯದಲ್ಲಿ ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಲಾಯಿತು. ಇದರ ಯಶಸ್ಸಿನಿಂದಾಗಿ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಬಲಿಷ್ಠವಾದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಸೇವೆಗೆ ಅವಕಾಶ ಸಿಕ್ಕಿದೆ. ರಾಹುಲ್ ಗಾಂಧಿ ಅವರ ಯಾತ್ರೆಯಿಂದ ಬಿಜೆಪಿಯವರಿಗೆ ಭಯ ಹುಟ್ಟಿದೆ. ನಾವು ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ಮಾಡಿದ್ದೆವು. ಆ ಸರ್ಕಾರವನ್ನು ಬೀಳಿಸಿದವರ ಜೊತೆಗೆ ಇಂದು ಜೆಡಿಎಸ್ ಸಖ್ಯ ಬೆಳೆಸಿದೆ. ಅನ್ಯಾಯ ಮಾಡಿದವರ ಜೊತೆ ಸೇರಿ ರಾಜಕಾರಣ ಮಾಡುತ್ತಿದ್ದಾರೆ. ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ ಯೋಜನೆಗಳು ಜನರಿಗೆ ನೆರವಾಗಿವೆ. ಅನ್ನಭಾಗ್ಯ ಯೋಜನೆ ಅಕ್ಕಿಯೇ ನಾವು ಜನರಿಗೆ ನೀಡುವ ಮಂತ್ರಾಕ್ಷತೆ. ನಾವು ಈ ಯೋಜನೆಗಳನ್ನು ಒಂದು ಜಾತಿ, ಧರ್ಮ, ಸಮುದಾಯ, ಪಕ್ಷದವರಿಗೆ ಮಾತ್ರ ನೀಡುತ್ತಿದ್ದೇವಾ? ಇದೇ ಕಾಂಗ್ರೆಸ್ ಪಕ್ಷದ ಬದ್ಧತೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ನನಗೆ ರಾಮನ ಬಗ್ಗೆ ಭಕ್ತಿ ಇಲ್ಲ, ಅಯೋಧ್ಯೆಗೆ ಹೋಗಲ್ಲ: ಪ್ರಿಯಾಂಕ್ ಖರ್ಗೆ

TAGGED:bengalurubjpcongressDK Shivakumarಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
8 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
8 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
9 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
9 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
9 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?