Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: #ConnectUsToMangalore ಕರಾವಳಿ ಸಂಪರ್ಕಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | #ConnectUsToMangalore ಕರಾವಳಿ ಸಂಪರ್ಕಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ

Bengaluru City

#ConnectUsToMangalore ಕರಾವಳಿ ಸಂಪರ್ಕಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ

Public TV
Last updated: August 24, 2018 3:30 pm
Public TV
Share
4 Min Read
SAMPAJE AND SHIRADI GHAT
SHARE

ಬೆಂಗಳೂರು: ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆಗಳನ್ನು ಶೀಘ್ರವೇ ಅಭಿವೃದ್ಧಿ ಪಡಿಸುವಂತೆ ಬೇಡಿಕೆ ಇಟ್ಟು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ #ConnectUsToMangalore ಬಳಸಿ ಅಭಿಯಾನ ಆರಂಭಿಸಿದ್ದಾರೆ.

ಶಿರಾಡಿ, ಸಂಪಾಜೆ ಘಾಟಿ ಬಂದ್ ಆಗಿರುವ ಕಾರಣ ಈಗ ವಾಹನಗಳು ಚಾರ್ಮಾಡಿ ಘಾಟಿ, ಕುದುರೆಮುಖ ರಸ್ತೆಯಲ್ಲಿ ಸಂಚರಿಸುತ್ತವೆ. ಚಾರ್ಮಾಡಿ ಘಾಟ್ ನಲ್ಲಿ ವಾಹನಗಳ ದಟ್ಟನೆ ಹೆಚ್ಚಾಗಿದ್ದು ಭಾರೀ ಟ್ರಾಫಿಕ್ ಜಾಮ್ ಆಗುತ್ತಿದೆ. ಹೀಗಾಗಿ ಈಗಾಗಲೇ ಇರುವ ಪರ್ಯಾಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಿ ಮುಂದೆ ನಡೆಯಬಹುದಾದ ಅನಾಹುತಗಳನ್ನು ತಪ್ಪಿಸಿ ಎಂದು ಸರ್ಕಾರದ ಪ್ರತಿನಿಧಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಸುಳ್ಯ ಮತ್ತು ಕೊಡಗನ್ನು ಸಂಪರ್ಕಿಸಲು ಈಗಾಗಲೇ ಪರ್ಯಾಯ ರಸ್ತೆಗಳು ಇದೆ. ಆದರೆ ಈ ರಸ್ತೆಯಲ್ಲಿ ಸಂಚಾರ ದುಸ್ತರವಾಗಿದೆ. ಹೀಗಾಗಿ ಈ ರಸ್ತೆಗಳನ್ನೇ ಅಭಿವೃದ್ಧಿ ಪಡಿಸಿದರೆ ಈ ಸಮಸ್ಯೆಗೆ ಸ್ವಲ್ಪ ಮಟ್ಟಿನ ಪರಿಹಾರವನ್ನು ಕಂಡುಕೊಳ್ಳಬಹುದು ಎನ್ನುವ ಸಲಹೆಯನ್ನು ಜನ ನೀಡುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರ ಮನಸ್ಸು ಮಾಡಿದ್ರೆ ಸುಳ್ಯ ಭಾಗದಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸಬಹುದು! ಸುಲಭ ರಸ್ತೆಗಳು ಎಲ್ಲಿವೆ? ಎಷ್ಟು ಕಿ.ಮೀ ಇದೆ?

shiradi ghat 1

ಬೇಡಿಕೆ ಯಾಕೆ?
1. ಕರಾವಳಿಯ ನಗರಗಳಾದ ಮಂಗಳೂರು, ಉಡುಪಿ ರಾಜ್ಯದ ಪ್ರಮುಖ ನಗರಗಳಾಗಿ ಬೆಳೆದಿವೆ. ವಿಮಾನ ಮತ್ತು ರೈಲು ಸಂಪರ್ಕ ಇದ್ದರೂ ಬಹಳಷ್ಟು ಜನ ಈಗಲೂ ರಸ್ತೆಯನ್ನೇ ಅವಲಂಬಿಸಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಅತಿ ಹೆಚ್ಚು ಸಂಖ್ಯೆಯಲ್ಲಿ ಕೆಎಸ್ಆರ್‌ಟಿಸಿ ವೋಲ್ವೋ, ರಾಜಹಂಸ ಬಸ್ಸುಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಸರ್ಕಾರಿ ಬಸ್ಸಿಗೆ ಪೈಪೋಟಿ ಎನ್ನುವಂತೆ ಖಾಸಗಿ ಬಸ್ಸುಗಳು ಸಂಚರಿಸುತ್ತಿವೆ. ಅತಿ ಹೆಚ್ಚು ಆದಾಯ ತರುವ ಮಾರ್ಗಗಳು ಬಂದ್ ಆಗಿರುವ ಕಾರಣ ಸರ್ಕಾರದ ಜೊತೆ ಖಾಸಗಿ ಕಂಪೆನಿಗಳಿಗೂ ದಿನಕ್ಕೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ.

2. ಈ ಹಿಂದೆ ಚಾರ್ಮಾಡಿ ಘಾಟಿ ಮೂಲಕ ಮಂಗಳೂರನ್ನು ಬಸ್ಸಿನಲ್ಲಿ ಪ್ರಯಾಣಿಸಿದರೆ 8, 9 ಗಂಟೆಯಲ್ಲಿ ತಲುಪಬಹುದಾಗಿತ್ತು. ಆದರೆ ಈಗ ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಹೊರಟರೂ ಮಂಗಳೂರನ್ನು 9 ಗಂಟೆಯಲ್ಲಿ ತಲುಪಬಹುದು ಎನ್ನುವ ಖಾತರಿ ಇಲ್ಲ. ಅದರಲ್ಲೂ ಅಪಘಾತ, ವಾಹನಗಳು ಪಲ್ಟಿಯಾದರೆ ದಿನಗಟ್ಟಲೇ ಈ ರಸ್ತೆಯಲ್ಲಿ ಸಂಚಾರ ಬಂದ್ ಆಗುತ್ತಿದೆ.

3. ಘಾಟಿ ರಸ್ತೆಗಳು ಬಂದ್ ಆದರೆ ಜನರ ಪ್ರಯಾಣಕ್ಕೆ ಮಾತ್ರ ಹೊಡೆತ ಬೀಳುವುದಿಲ್ಲ. ವ್ಯಾಪಾರಿಗಳ ಮೇಲೂ ಭಾರೀ ಹೊಡೆತ ಬೀಳುತ್ತದೆ. ಉದಾಹರಣೆಗೆ ಸಂಪಾಜೆ ಘಾಟಿ ಬಂದ್ ಆಗಿರುವುದರಿಂದ ಮಡಿಕೇರಿ, ಸುಳ್ಯ, ಪುತ್ತೂರು ತಾಲೂಕಿನ ಹೋಟೆಲ್ ಹಣ್ಣಿನ ಅಂಗಡಿ, ಜ್ಯೂಸ್… ಇತ್ಯಾದಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳ ಮೇಲೂ ಪರಿಣಾಮ ಬೀರುತ್ತದೆ. ಮಳೆಗಾಲದಲ್ಲೂ ಹೇಗೂ ವ್ಯಾಪಾರ ಕಡಿಮೆ ಇರುತ್ತದೆ. ಬೇಸಿಗೆಯಲ್ಲಿ ರಸ್ತೆಗಳು ಬಂದ್ ಆದರೆ ಅವರ ಜೀವನೋಪಾಯಕ್ಕೂ ಕಷ್ಟವಾಗುತ್ತದೆ.

sampaje ghat qqqqq

4. ವ್ಯಾಪಾರಕ್ಕೆ ಕಡೆ ರಸ್ತೆ ಬಂದ್ ಹೊಡೆತ ಕೊಟ್ಟರೆ ಇನ್ನೊಂದು ಕಡೆ ಘಟ್ಟ ಪ್ರದೇಶಗಳಿಗೆ ಸರಕು ಸಾಗಣೆಕೆಗೂ ಕಷ್ಟವಾಗುತ್ತದೆ. ದೇಶದ 9ನೇ ಅತಿ ದೊಡ್ಡ ಬಂದರು ಎನ್ನುವ ಹೆಗ್ಗಳಿಕೆ ಮಂಗಳೂರು ಪಾತ್ರವಾಗಿದೆ. ಈ ಬಂದರಿಗೆ ರೈಲಿಗಿಂತ ಹೆಚ್ಚಾಗಿ ಸರಕುಗಳು ರಸ್ತೆಯ ಮೂಲಕವೇ ಬರುತ್ತಿದೆ. ಬಂದರಿನ ಜೊತೆಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(ಎಂಆರ್‌ಪಿಎಲ್) ಘಟಕ ಮಂಗಳೂರಿನಲ್ಲಿದೆ. ಉದಾಹರಣೆಗೆ ಈಗ ಕೊಡಗು ಜಿಲ್ಲೆಗೆ ಎಂಆರ್‌ಪಿಎಲ್ ನಿಂದ ತೈಲವನ್ನು ಕಳುಹಿಸುವುದೇ ದುಸ್ತರವಾಗಿದೆ. ಸಂಪಾಜೆ ಘಾಟಿ ಮೂಲಕ ಮಡಿಕೇರಿಗೆ 120 ಕಿ.ಮೀ ಕ್ರಮಿಸಿ ಟ್ಯಾಂಕರ್ ತಲುಪುತ್ತಿದ್ದರೆ ಈಗ 250ಕ್ಕೂ ಹೆಚ್ಚು ಕಿ.ಮೀ ಕ್ರಮಿಸಬೇಕಿದೆ.

5. ದಕ್ಷಿಣ ಕನ್ನಡದ ಪ್ರತಿ ತಾಲೂಕು, ಗ್ರಾಮಗಳಲ್ಲಿ ವಾರಕ್ಕೊಮ್ಮೆ ಸಂತೆ ನಡೆಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಬೆಳೆದಿರುವ ತರಕಾರಿಗಳನ್ನು ರೈತರು ಇಲ್ಲಿ ತಂದು ಮಾರಾಟ ಮಾಡುತ್ತಾರೆ. ಈಗ ರಸ್ತೆ ಸಂಪರ್ಕವೇ ಬಂದ್ ಆಗಿದ್ದರಿಂದ ರೈತರ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ.

6. ಎರಡು ಘಾಟಿ ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಈಗ ಚಾರ್ಮಾಡಿ ಮೂಲಕವೇ ಸಂಚರಿಸುತ್ತಿದೆ. ಒಂದು ವೇಳೆ ವಾಹನಗಳ ಒತ್ತಡವನ್ನು ತಾಳಲಾರದೇ ಚಾರ್ಮಾಡಿಯ ರಸ್ತೆಯಲ್ಲೂ ಭೂ ಕುಸಿತವಾದರೆ ಸಂಪರ್ಕ ಮತ್ತಷ್ಟು ದುಸ್ತರವಾಗುತ್ತದೆ.

madikeri ghat sampaje 2

7. ಈಗಾಗಲೇ ಇರುವ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಕೆಲವು ಕಡೆ ಮರಗಳನ್ನು ಕಡಿಯಬೇಕಾದಿತು. ಒಂದು ವೇಳೆ ಪರ್ಯಾಯ ರಸ್ತೆ ಇದ್ದು ಮತ್ತೊಂದು ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರೆ ಅದು ತಪ್ಪಾಗುತ್ತದೆ. ಆದರೆ ಇಲ್ಲಿ ಯಾವುದೇ ಪರ್ಯಾಯ ರಸ್ತೆ ಇಲ್ಲದೇ ಇರುವ ಕಾರಣ ಅರಣ್ಯನಾಶವಾಗುತ್ತದೆ ಎನ್ನುವ ಕಾರಣ ನೀಡಿದರೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ.

8. ರಸ್ತೆ ಸಂಪರ್ಕ ಬಂದ್ ಆದರೆ ವಿಶೇಷವಾಗಿ ಜಿಲ್ಲೆಗಳ ಗಡಿಯಲ್ಲಿರುವ ಮಂದಿ ಬಹಳ ಕಷ್ಟವನ್ನು ಅನುಭವಿಸುತ್ತಾರೆ. ಉದಾಹರಣೆಗೆ ಸಂಪಾಜೆ, ಚೆಂಬು, ಪೆರಾಜೆ ಗ್ರಾಮದ ಜನತೆ ವಾಣಿಜ್ಯ ಕೆಲಸಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕನ್ನೇ ಅವಲಂಬಿಸಿದರೆ ಸರ್ಕಾರಿ ಕೆಲಸಕ್ಕೆ ಮಡಿಕೇರಿಗೆ ಹೋಗುವುದು ಅನಿವಾರ್ಯ. ಅದರಲ್ಲೂ ವಿದ್ಯಾರ್ಥಿಗಳಿಗೆ ಮತ್ತು ಪ್ರತಿನಿತ್ಯ ಉದ್ಯೋಗಕ್ಕೆ ತೆರಳುವ ಮಂದಿ ಪಾಡು ಹೇಳತೀರದಾಗಿದೆ.

8. ಕೊನೆಯದಾಗಿ ಯಾವುದೇ ಅಭಿವೃದ್ಧಿ ಕೆಲಸ ನಡೆಯಬೇಕಾದರೆ ಅರಣ್ಯ ನಾಶವಾಗುತ್ತದೆ. ಅದರಲ್ಲೂ ರಸ್ತೆ ಸಂಪರ್ಕದಂತಹ ವಿಚಾರಗಳು ಬಂದಾಗ ಅನಿವಾರ್ಯವಾಗಿ ಮೊದಲ ಆದ್ಯತೆಯನ್ನು ರಸ್ತೆಗೆ ನೀಡಬೇಕಾಗುತ್ತದೆ. ಅರಣ್ಯನಾಶವನ್ನು ತಡೆಗಟ್ಟಬೇಕಾದರೆ ಮೊದಲು ಅರಣ್ಯ ಇಲಾಖೆಗೆ ಖಡಕ್ ಅಧಿಕಾರಿಗಳನ್ನು ನೇಮಿಸಿ ಟಿಂಬರ್ ಮಾಫಿಯಾವನ್ನು ತಡೆಗಟ್ಟಬೇಕು. ಟಿಂಬರ್ ಮಾಫಿಯಾ ನಡೆಯಬೇಕಾದರೆ ಗ್ರಾಮಸ್ಥರ ಸಾಥ್ ಇದ್ದೇ ಇರುತ್ತದೆ. ಹೇಗೆ ವ್ಯಕ್ತಿಗಳು ಖಾಸಗಿ ಆಸ್ತಿಯನ್ನು ರಕ್ಷಣೆ ಮಾಡುತ್ತಾರೋ ಅದೇ ರೀತಿಯಾಗಿ ಅರಣ್ಯವು ನನ್ನ ಆಸ್ತಿ. ಅದನ್ನು ನಾನು ರಕ್ಷಿಸುತ್ತೇನೆ ಎಂದು ಅರಣ್ಯದ ಬುಡದಲ್ಲಿರುವ ಜನ ಪಣ ತೊಡುವುದಿಲ್ಲವೋ ಅಲ್ಲಿಯವರೆಗೂ ಈ ಮಾಫಿಯಾವನ್ನು ತಡೆಗಟ್ಟಲು ಸಾಧ್ಯವಿಲ್ಲ.

 

Bengaluru – Karavali Road Connectivity , the reality is different than reported . My sources say the Shiradi ghat can be repaired in 1 week time . I urged Mr Revanna .H .D Hon’ble PWD Minister of Karnataka to look in to this , Sri @CMofKarnataka #connectustoMangalore pic.twitter.com/rCQW9L1UpE

— Sadananda Gowda (@DVSadanandGowda) August 24, 2018

 

#connectustoMangalore The nearest route to Mangalore from Bengaluru is closed , the next nearest is in bad shape and the third one is is completely cutoff. Festive season is on the line and we need proper connectivity to the coastal line @CMofKarnataka @narendramodi @niting

— Roshan Sequeira (@RoJoSequeira) August 24, 2018

 

https://twitter.com/MeghanNaik/status/1032913383685799936

 

We definitely need better connectivity between two important cities on Karnataka. It has never been smooth to reach my hometown from Bengaluru#connectustoMangalore

— Sathya Bhat (@PSathyaBhat) August 24, 2018

I'll definitely meet Nitin Gadkari to discuss the roads.I'll speak to Home Minister because he takes care of National Disaster Relief Funding & I'll certainly go back to Prime Minister to give him report of what I've seen here: Defence Min Nirmala Sitharaman in Karnataka's Kodagu pic.twitter.com/MuVuSc8Bmg

— ANI (@ANI) August 24, 2018

TAGGED:bengalurukannadanewsMangalururoadSampajeshiradi ghattwitterಕೊಡಗುಘಾಟಿಚಾರ್ಮಾಡಿದಕ್ಷಿಣ ಕನ್ನಡಮಡಿಕೇರಿಶಿರಾಡಿಸಂಪಾಜೆ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
6 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
7 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
7 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
7 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
8 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?