ಚೆನ್ನೈ: ನಗರದ ನೈರ್ಮಲ್ಯ ಕಾರ್ಮಿಕನೊಬ್ಬ ತನ್ನ ಐದು ವರ್ಷದ ಮಗಳನ್ನು ಒಳ್ಳೆಯ ಶಾಲೆಗೆ ಸೇರಿಸುವ ಆಸೆಯಿಂದ ಎಟಿಎಂ ದರೋಡೆಗೆ ಮುಂದಾಗಿದ್ದ ಘಟನೆ ಚೆನ್ನೈನ ಚೆಟ್ಪೇಟ್ನಲ್ಲಿ ನಡೆದಿದೆ.
ಆರೋಪಿ ಅಣೈ ಸತ್ಯನಗರದ ನಿವಾಸಿ ಪಿ.ರಂಜಿತ್ ಕುಮಾರ್(33) ಮಗಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವ ಆಸೆ ಹೊಂದಿದ್ದ. ತನ್ನ ಬಳಿ ಹಣವಿಲ್ಲದ ಕಾರಣ ಎಟಿಎಂಗೆ ಕನ್ನ ಹಾಕಲು ಯತ್ನಿಸಿದ್ದ. ಎಟಿಎಂಗೆ ಕನ್ನ ಹಾಕಿರುವ ವಿಚಾರ ತಿಳಿದ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಇನ್ಸ್ಟಾಗ್ರಾಮ್ ನಲ್ಲಿ ಟ್ರೆಂಡ್ ಆಯ್ತು ಕಡಲೆಕಾಯಿ ಮಾರುವವನ ಹಾಡು
ಆರೋಪಿ ದರೋಡೆ ನಡೆಸಲು ಯತ್ನಿಸಿದ ಕೆಲವೇ ಹೊತ್ತಿನಲ್ಲಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಕಳೆದ 3 ವರ್ಷಗಳಿಂದ ಕಸ ಸಂಗ್ರಹಿಸುವ ವಾಹನ ಚಲಾಯಿಸುತ್ತಿದ್ದ ರಂಜಿತ್ಗೆ 5 ವರ್ಷದ ಮಗಳು ಹಾಗೂ 3 ವರ್ಷದ ಮಗನಿದ್ದಾನೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಗಳನ್ನು ಖಾಸಗಿ ಶಾಲೆಗೆ ಕಳುಹಿಸುವ ಮಹದಾಸೆಯಲ್ಲಿ ದರೋಡೆಗೆ ಪ್ರಯತ್ನ ಪಟ್ಟಿರುವುದಾಗಿ ಆರೋಪಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಪ್ರತಾಪ್ ಸಿಂಹ, ರಾಮದಾಸ್ ಕಿತ್ತಾಟ- ಕಣ್ಣೀರಾಕಿದ ಮೇಯರ್