ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯ

Public TV
1 Min Read
anganavadi nelamangala 1

ನೆಲಮಂಗಲ: ಗ್ರಾಮೀಣ ಪ್ರದೇಶದಲ್ಲಿ ಆಡಳಿತ ವ್ಯವಸ್ಥೆಯ ಏಣಿಶ್ರೇಣಿ ನಿಯಮದಲ್ಲಿ ಬೇರು ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡಬೇಕು ಎಂದು ಎಐಟಿಯುಸಿ ಸಂಘಟನೆಯ ತಾಲೂಕು ಅಧ್ಯಕ್ಷೆ ಶಿವಗಂಗೆ ಜ್ಯೋತಿ ಸರ್ಕಾರಕ್ಕೆ ಒತ್ತಾಯಿಸಿದರು.

anganavadi nelamangala 3

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ, ಕುಲುವನಹಳ್ಳಿ ಪಂಚಾಯತಿ ವ್ಯಾಪ್ತಿಯ ಸುಧಾನಗರದ ಅಂಗನವಾಡಿ ಕೇಂದ್ರದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ಸಂಘಟನೆಗೆ ನೋಂದಣಿ ಮತ್ತು ಸಂಘದ ನಡಾವಳಿ ತಿಳಿಸಿಕೊಡುವ ಸಭೆ ನಡೆಯಿತು. ಇದನ್ನೂ ಓದಿ: ಹುಲಿ ಹುಡುಕೋ ಕಾರ್ಯಾಚರಣೆ ವೇಳೆ ಸಿಕ್ತು ಕಾಡುಕೋಣ..!

ಈ ವೇಳೆ ಮಾತನಾಡಿದ ಶಿವಗಂಗೆ ಜ್ಯೋತಿ ಅವರು, ಮಹಿಳೆಯರ ಸಬಲೀಕರಣದ ಜೊತೆಗೆ ಕಾರ್ಯಕರ್ತೆಯರ ಹಕ್ಕುಗಳಿಗೆ ಹಾಗೂ ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ, ಪಿಂಚಣಿ, ಹೋರಾಟ, ಸರ್ಕಾರದ ಸೌಲಭ್ಯವನ್ನು ತಲುಪಿಸಲು ಶ್ರಮಿಸುತ್ತಿದ್ದೇವೆ. ಕೋವಿಡ್ ನೆಪವೊಡ್ಡಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಲಕ್ಷ ಸರ್ಕಾರ ನೀಡುತ್ತಿದ್ದನ್ನು ಮೊಟಕುಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

anganavadi nelamangala 2

ಅಂಗನವಾಡಿ ಕಾರ್ಯಕರ್ತೆಯರನ್ನು ನೌಕರರೆಂದು ಗುರುತಿಸಿ ಸರ್ಕಾರಿ ಶ್ರೇಣಿಯ ಸೌಲಭ್ಯ ನೀಡಬೇಕು. ಕಾರ್ಯಕರ್ತೆಯರ ಜೀವನ ಮಟ್ಟ ಸುಧಾರಿಸುವುದೇ ನಮ್ಮ ಸಂಘಟನೆ ಗುರಿ ಎಂದು ಶಪಥ ಮಾಡಿದರು. ಇದನ್ನೂ ಓದಿ: ಸರಕು, ಸೇವೆಗಳ ಬೇಡಿಕೆ ಹೆಚ್ಚಿಸಲು ಗುಣಮಟ್ಟದ ರಫ್ತು ಅವಶ್ಯಕ – ವಸಂತ ಲದ್ವಾ

ಈ ವೇಳೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಹನುಮಕ್ಕ, ಸುಶೀಲ, ಮುದ್ದುಲಕ್ಷ್ಮಿ, ಚಂದ್ರಕಲಾ, ಪಾರಿಜಾತ, ಕಮಲಾಕ್ಷಿ, ಮುಂತಾದ ಮೂವತ್ತಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *