Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

Dharwad

ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

Public TV
Last updated: March 20, 2019 8:46 am
Public TV
Share
3 Min Read
DWR BUD copy
SHARE

ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಕಳೆದ ದಿನ ಇಬ್ಬರು ಮೃತಪಟ್ಟಿದ್ದರು. ಆದರೆ ಈಗ ಈ ದುರಂತದಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಸಲಿಮ್ ಮಕಾಂದರ್ ಮೃತ ದುರ್ದೈವಿ. ಇನ್ನು ಉಳಿದ ಮೂವರ ಗುರುತು ಪತ್ತೆಯಾಗಿಲ್ಲ. ಮಂಗಳವಾರ ರಾತ್ರಿ ಸುಮಾರು 1.30ಕ್ಕೆ ಎನ್‍ಡಿಆರ್‍ಎಫ್(National Disaster Response Force) ತಂಡ ಸ್ಥಳಕ್ಕೆ ಆಗಮಿಸಿದ್ದು, ಸುಮಾರು 30 ಜನರ ತಂಡದಿಂದ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಎನ್‍ಡಿಆರ್‍ಎಫ್‍ಗೆ ಶ್ವಾನದಳ ಸಾಥ್ ನೀಡಿದೆ.

190319kpn44

ಕುಸಿದ ಕಟ್ಟಡದಲ್ಲಿ ಒಂದು ಕಂಪ್ಯೂಟರ್ ಸೆಂಟರ್ ಇರುವ ಸಾಧ್ಯತೆ ಇದ್ದು, ಕಂಪ್ಯೂಟರ್ ಸೆಂಟರ್‍ನಲ್ಲಿ ಸುಮಾರು 15 ವಿದ್ಯಾರ್ಥಿಗಳು ಇರುಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ 30 ದಾಟುವ ಸಾಧ್ಯತೆ ಇದೆ. ಇನ್ನೂ ಕಟ್ಟಡದ ಅವಶೇಷಗಳ ಅಡಿ 30ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಅವಷೇಶದಡಿ ಸಿಲುಕಿದವರಿಗೆ ನಿರಂತರವಾಗಿ ಪೈಪ್ ಮುಖಾಂತರ ನೀರು ಮತ್ತು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.

ಧಾರವಾಡ ನಿರ್ಮಾಣ ಹಂತದ ಕಟ್ಟಡ ಕುಸಿದ ಪ್ರಕರಣದಲ್ಲಿ ಈವರೆಗೂ ರಕ್ಷಣಾ ಕಾರ್ಯದಲ್ಲಿ 54 ಜನರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಎರಡು ದಿನಗಳ ಕಾಲ ಕಾರ್ಯಾಚರಣೆ ನೆಡೆಯುವ ಸಾದ್ಯತೆ ಇದೆ. ಈ ಹಿನ್ನೆಲೆಯಲ್ಲಿ ಘಾಜಿಯಾಬಾದ್ NDRFನ ಮತ್ತೊಂದು ತಂಡದ 78 ಸಿಬ್ಬಂದಿ ಧಾರವಾಡಕ್ಕೆ ಆಗಮಿಸಿದ್ದಾರೆ. ಘಟನಾ ಸ್ಥಳದಲ್ಲಿ ಅವರಿಂದಲೂ ಕಾರ್ಯಾಚರಣೆ ಮುಂದುವರಿಯಲಿದ್ದು, ಅವಶೇಷಗಳ ಅಡಿಯಲ್ಲಿ ನಾಲ್ಕು ಮೃತ ದೇಹ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಇತ್ತ ಮಾಜಿ ಸಚಿವ ವಿನಯ ಕುಲಕರ್ಣಿ ಸಹ ರಾತ್ರಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

190319kpn46

ಪ್ರಕರಣ ದಾಖಲು:
ಧಾರವಾಡ ಬಹುಮಹಡಿ ಕಟ್ಟಡ ಕುಸಿತ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಕಟ್ಟಡ ಮಾಲೀಕರು ಹಾಗೂ ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲಾಗಿದೆ. ಪಾಲಿಕೆ ಸಹಾಯಕ ಆಯುಕ್ತ ಸಂತೋಷ ಆನಿಶೆಟ್ಟರ್ ಪೊಲೀಸರಿಗೆ ದೂರ ಸಲ್ಲಿಸಿದ್ದು, ರೇಣುಕಾ ಕನ್ಸ್ ಟ್ರಕ್ಷನ್ ಮಾಲೀಕ ವಿವೇಕ ಪವಾರ್, ಕಟ್ಟಡ ಮಾಲೀಕರಾದ ಬಸವರಾಜ್ ನಿಗದಿ, ರವಿ ಸವರದ, ಗಂಗಪ್ಪ ಶಿಂತ್ರಿ, ಮಹಾಬಲೇಶ್ವರ ಕುರಬಗುಡಿ, ರಾಜು ಘಾಟಿನ್ ವಿರುದ್ಧ ಕ್ರಿಮಿನಲ್ ಕೇಸನ್ನು ದಾಖಲಿಸಲಾಗಿದೆ.

ಇವರೆಗೂ 49 ಜನರನ್ನು ರಕ್ಷಣೆ ಮಾಡಿ ಅವರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಕೆಳಗೆ 12 ಜನ ಮಕ್ಕಳು ಸಿಲಿಕಿರುವ ಬಗ್ಗೆ ಮಾಹಿತಿ ಇದೆ. ಸದ್ಯಕ್ಕೆ ಅವರನ್ನು ಹೊರತರುವ ಕೆಲಸ ಭರದಿಂದ ಸಾಗಿದೆ. ಕಟ್ಟಡದ ಕೆಳಗಡೆ ಸಿಲುಕಿರುವ ಜನರಿಂದ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎನ್‍ಡಿಆರ್‍ಎಫ್ ಹಾಗೂ ಎನ್‍ಎಸ್‍ಎಫ್ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಮುಖ್ಯವಾಗಿ ಜೀವ ಉಳಿಸುವುದಕ್ಕೆ ಮೊದಲ ಆಧ್ಯತೆ ನೀಡಲಾಗುತ್ತಿದ್ದು, ಕಟ್ಟಡ ಕೊರೆದು ಮಕ್ಕಳ ರಕ್ಷಣೆ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದುರಂತಕ್ಕೆ ಕಾರಣರಾದವರ ಮೇಲೆ ಪ್ರಕರಣ ಕೂಡ ದಾಖಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.

190319kpn39

ಪತಿಗಾಗಿ ಕಂಗಾಲು
ಅಶೀತ್ ಹಿರೇಮಠ ಎಂಬವರು ಕಟ್ಟಡದಲ್ಲಿ ಮೂರು ತಿಂಗಳಿನಿಂದ ಪೇಂಟ್ ಅಂಗಡಿ ಇಟ್ಟುಕೊಂಡಿದ್ದರು. ಕಟ್ಟಡದ ಕುಸಿತದ ವೇಳೆ ಅಶೀತ್ ಅಂಗಡಿಯಲ್ಲಿದ್ದರು. ಇತ್ತ ಪತಿ ಕಾಣದೆ ಗರ್ಭಿಣಿ ಪತ್ನಿ ಕಂಗಲಾಗಿದ್ದು, ಆಸ್ಪತ್ರೆ ಆವರಣದಲ್ಲಿ ಅಶೀತ್‍ಗಾಗಿ ಕುಟುಂಬ ಕಾದು ಕುಳಿತಿತ್ತು. ಕೊನೆಗೂ ಸತತ 14 ಘಂಟೆಗಳ ಕಾರ್ಯಾಚರಣೆ ಬಳಿಕ ಅಶೀತ್ ಬದುಕಿ ಬಂದಿದ್ದಾರೆ.

ನಡೆದಿದ್ದೇನು?
ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ 3.40ರ ವೇಳೆಗೆ ಜನ ನೋಡುತ್ತಿದ್ದಂತೆ ಕುಸಿದು ಬಿದ್ದಿತ್ತು. ಈ ಕಟ್ಟಡ ಕಾಮಗಾರಿಯಲ್ಲಿ 100ಕ್ಕೂ ಹೆಚ್ಚು ಮಂದಿ ಇದ್ದರು ಅಂತ ಹೇಳಲಾಗಿತ್ತು. ಈ ಪೈಕಿ 40ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, 27 ಮಂದಿಯನ್ನು ಜಿಲ್ಲಾಸ್ಪತ್ರೆ, 13 ಮಂದಿಗೆ ಕಿಮ್ಸ್, 6 ಮಂದಿಗೆ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

https://www.youtube.com/watch?v=WhgyTU-1oN8

TAGGED:buildingdeathdharwadhospitalNDRFpoliceprotectionPublic TVಆಸ್ಪತ್ರೆಕಟ್ಟಡಧಾರವಾಡಪಬ್ಲಿಕ್ ಟಿವಿಪೊಲೀಸ್ರಕ್ಷಣೆಸಾವು
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
6 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
8 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
1 hour ago
Elephant 1
Chikkamagaluru

ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ – ಹೈರಾಣಾದ ಸಾಕಾನೆಗಳು!

Public TV
By Public TV
2 hours ago
Elephant Woman Death
Chikkamagaluru

ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
3 hours ago
Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?