ಲೋನ್ ನೀಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್ ಕಪಾಳಕ್ಕೆ ಬಾರಿಸಿದ ಗ್ರಾಹಕ

Public TV
1 Min Read
bij kapalamoksha

ವಿಜಯಪುರ: ಹಲವು ದಿನಗಳಿಂದ ಲೋನ್‍ಗಾಗಿ ಅಲೆದಾಡಿ ರೋಸಿ ಹೋದ ಗ್ರಾಹಕರೊಬ್ಬರು ತಮ್ಮನ್ನು ಸತಾಯಿಸಿದ ಬ್ಯಾಂಕ್  ಮ್ಯಾನೇಜರ್​ಗೆ ಕಪಾಳಮೋಕ್ಷ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ ಈ ಘಟನೆ ನಡೆದಿದ್ದು, ಗ್ರಾಹಕ ಶರಣು ಮಾಮನೆ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಬಿ.ವಿ. ಕುಲಕರ್ಣಿಗೆ ಕಪಾಳಮೋಕ್ಷ ಮಾಡಿದ್ದಾರೆ. ಎರಡು ದಿನದ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

bij kapalamoksha 1

ಹಲವು ದಿನಗಳಿಂದ ಲೋನ್‍ಗಾಗಿ ಶರಣು ಅವರು ಬ್ಯಾಂಕಿಗೆ ಅಲೆದಾಡಿ ರೋಸಿ ಹೋಗಿದ್ದರು. ಹೀಗಾಗಿ ಲೋನ್ ನೀಡಲು ಸತಾಯಿಸುತ್ತಿದ್ದ ಮ್ಯಾನೇಜರ್ ಮೇಲೆ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ. ಈ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆದರೆ ಬ್ಯಾಂಕಿನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳಿಂದ ಈ ವಿಚಾರ ಬಯಲಾಗಿದೆ. ಕಪಾಳಮೋಕ್ಷ ಮಾಡಿದ ದೃಶ್ಯಗಳು ಬ್ಯಾಂಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *