-2 ಕ್ರೇನ್ ನೆರವಿನಿಂದ ಮೃತದೇಹಗಳನ್ನು ಹೊರತೆಗೆದ ಪೊಲೀಸರು
ಆನೇಕಲ್: ಕಂಟೈನರ್ ಲಾರಿಯೊಂದು (Container Lorry) ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ಉರಗನದೊಡ್ಡಿ (Uraganadoddi) ಬಳಿ ನಡೆದಿದೆ.
ಬೆಳಗ್ಗೆ 11 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ. ರಸ್ತೆಯ ಕೇಬಲ್ ಡ್ರಿಲ್ಲಿಂಗ್ ಮಿಷನ್ ತುಂಬಿದ್ದ ಕಂಟೈನರ್ ಇಳಿಜಾರಿನ ತಿರುವಿನಲ್ಲಿ ಅತಿವೇಗವಾಗಿ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಘಟನೆಯ ಪರಿಣಾಮ ಇಬ್ಬರು ಕಾರ್ಮಿಕರು ಕಂಟೈನರ್ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳಿಗೆ ಜಿಗಣಿಯ ವಿಜಯಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ
ಪೊಲೀಸರು ಎರಡು ಕ್ರೇನ್ ನೆರವಿನಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತರನ್ನು ಜಾರ್ಖಂಡ್ ಮೂಲದ ಶ್ರೀಮಾನ್ (25), ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ (26) ಎಂದು ಗುರುತಿಸಲಾಗಿದೆ. ಮೃತ ಶ್ರೀನಿವಾಸ್ ಕಂಟೈನರ್ ಚಾಲಕನಾಗಿದ್ದು, ಶ್ರೀಮಾನ್ ಕೇಬಲ್ ಡ್ರಿಲ್ಲಿಂಗ್ ಮಿಷನ್ ಆಪರೇಟರ್ ಆಗಿದ್ದ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಕುಮಾರ್, ಜಿಗಣಿ ಇನ್ಸ್ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಬೆಂಗಳೂರು ಗ್ರಾಮಾಂತರ ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

