ಹಾಸನ: ಚಿನ್ನಕ್ಕಾಗಿ ಗುತ್ತಿಗೆದಾರನ ಬರ್ಬರ ಹತ್ಯೆ ಮಾಡಿ, ಮೈಮೇಲಿದ್ದ ಚಿನ್ನದ ಒಡವೆಗಳನ್ನು ದೋಚಿ ಆರೋಪಿಗಳು ಪರಾರಿಯಾಗಿರುವ ಘಟನೆ ಅರಸೀಕೆರೆ (Arsikere) ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ.
ವಿಜಯಕುಮಾರ್ (46) ಬರ್ಬರವಾಗಿ ಕೊಲೆಯಾದ ಕಂಟ್ರಾಕ್ಟರ್. ಬಿಹಾರ ಮೂಲದ ವಿಕ್ರಂ ಮತ್ತು ಸಚಿನ್ ಕೊಲೆ ಆರೋಪಿಗಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕೊಳ್ಳೇಗಾಲ| ಕಾಂಪೌಂಡ್ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಅರಸೀಕೆರೆ ಪಟ್ಟಣದ ವಿಜಯಕುಮಾರ್, ಕಟ್ಟಡ ಹಾಗೂ ಲೇಬರ್ ಗುತ್ತಿಗೆದಾರರಾಗಿದ್ದರು. ಕೆಎಸ್ಆರ್ಟಿಸಿ ಮುಂಭಾಗ ನಿರ್ಮಾಣವಾಗುತ್ತಿರುವ ಹೊಸ ಹೋಟೆಲ್ ಕಟ್ಟಡದ ಗಾರೆ ಕೆಲಸಕ್ಕೆ ವಿಕ್ರಂ ಹಾಗೂ ಸಚಿನ್ನನ್ನು ಕರೆ ತಂದಿದ್ದರು. ಕೆಲವು ದಿನಗಳಿಂದ ವಿಕ್ರಂ ಹಾಗೂ ಸಚಿನ್, ವಿಜಯ್ಕುಮಾರ್ ಜೊತೆಯಲ್ಲೇ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
ವಿಜಯಕುಮಾರ್ ಯಾವಾಗಲೂ ಕೊರಳಿನಲ್ಲಿ ದಪ್ಪದಾದ ಚಿನ್ನದ ಸರ, ನಾಲ್ಕೈದು ಚಿನ್ನದ ಉಂಗುರಗಳನ್ನು ಹಾಕಿಕೊಳ್ಳುತ್ತಿದ್ದರು. ವಿಜಯಕುಮಾರ್ ಮೈಮೇಲಿದ್ದ ಚಿನ್ನದ ಒಡವೆಗಳ ಮೇಲೆ ವಿಕ್ರಂ ಹಾಗೂ ಸಚಿನ್ ಕಣ್ಣು ಹಾಕಿದ್ದು ಅದನ್ನು ಪಡೆಯಲು ಮಾಸ್ಟರ್ ಪ್ಲಾನ್ ಮಾಡಿದ್ದರು. ಇದನ್ನೂ ಓದಿ: ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್
ಶುಕ್ರವಾರ ತಡರಾತ್ರಿ ವಿಕ್ರಂ ಹಾಗೂ ಸಚಿನ್, ವಿಜಯಕುಮಾರ್ ಅವರಿಗೆ ಕರೆ ಮಾಡಿ ನಮಗೆ ಆರೋಗ್ಯ ಸರಿಯಲ್ಲಿ ನಮ್ಮನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ನಾವು ಹೊರಗಡೆ ಹೋದರೆ ಅನುಮಾನ ಪಡುತ್ತಾರೆ ಎಂದಿದ್ದರು. ತಕ್ಷಣವೇ ವಿಜಯಕುಮಾರ್ ಕಟ್ಟಡದ ಮಾಲೀಕ ಶ್ರೀನಿವಾಸ್ಗೆ ಕರೆ ಮಾಡಿ ವಿಷಯ ತಿಳಿಸಿದ್ದರು.
ಈಗ ನೀನು ಹೋಗುವುದು ಬೇಡ ನಾಳೆ ನೋಡೋಣ ಬಿಡು ಎಂದಿದ್ದರು. ಆದರೆ ವಿಜಯಕುಮಾರ್ ಅವರಿಗೆ ಏನಾದರೂ ಹೆಚ್ಚು ಕಡಿಮೆ ಆದರೆ ನಾನು ಹೋಣೆಗಾರನಾಗಬೇಕಾಗುತ್ತದೆ. ಹೋಗಿ ನೋಡಿಕೊಂಡು ಬರುತ್ತೇನೆ ಎಂದು ತಮ್ಮ ಸ್ಕೂಟಿಯಲ್ಲಿ ಕಟ್ಟಡದ ಬಳಿಗೆ ತೆರಳಿದ್ದರು. ವಿಜಯಕುಮಾರ್ ಬರುವುದನ್ನೇ ವಿಕ್ರಂ ಹಾಗೂ ಸಚಿನ್ ಕಾಯುತ್ತ ನಿಂತಿದ್ದರು. ನಿರ್ಮಾಣ ಹಂತದ ಕಟ್ಟಡದ ಮುಂದೆ ಸ್ಕೂಟಿ ನಿಲ್ಲಿಸಿ ಒಳಗೆ ಹೋಗುತ್ತಿದ್ದಂತೆ ಆರೋಪಿಗಳು, ಕಬ್ಬಿಣದ ರಾಡ್ನಿಂದ ಬಲವಾಗಿ ತಲೆಗೆ ಹೊಡೆದಿದ್ದು, ಪರಿಣಾಮ ಆ ಕೂಡಲೇ ವಿಜಯಕುಮಾರ್ ನೆಲಕ್ಕೆ ಬಿದ್ದಿದ್ದರು. ನಂತರ ಸಣ್ಣ ಗ್ಯಾಸ್ ಸಿಲಿಂಡರ್ನಿಂದ ತಲೆ, ಮುಖವನ್ನು ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದರು. ಇದನ್ನೂ ಓದಿ: ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್ ಇದೆ: ಹೆಚ್.ಸಿ.ಬಾಲಕೃಷ್ಣ
ವಿಜಯಕುಮಾರ್ ಮೃತಪಟ್ಟ ನಂತರ ಆರೋಪಿಗಳು ಅವರ ಕೊರಳಿನಲ್ಲಿದ್ದ ಚಿನ್ನದ ಚೈನ್, ಕೈಯಲ್ಲಿದ್ದ ಮೂರು ಉಂಗರುಗಳನ್ನು ಕಸಿದುಕೊಂಡಿದ್ದರು. 1 ಉಂಗುರ ಬೆರಳಿನಿಂದ ಬಾರದಿದ್ದಾಗ ಬೆರಳನ್ನು ತುಂಡರಿಸಿ ಬೆರಳಿನ ಸಮೇತ ಉಂಗುರವನ್ನು ಎತ್ತಿಕೊಂಡು ವಿಜಯಕುಮಾರ್ ಅವರ ಸ್ಕೂಟಿಯಲ್ಲಿಯೇ ಸ್ಥಳದಿಂದ ಹೊರಟಿದ್ದರು. ಬಳಿಕ ಪಟ್ಟಣದ ಹೋಟೆಲ್ವೊಂದರ ಮುಂದೆ ಸ್ಕೂಟಿ ನಿಲ್ಲಿಸಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ
ಆರೋಪಿಗಳು ವಿಜಯಕುಮಾರ್ ಅವರನ್ನು ಕೊಲೆ ಮಾಡಿ ಸ್ಕೂಟಿಯಲ್ಲಿ ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಸೀಕೆರೆ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.