ಬೆಳಗಾವಿ: ಅರುಣ್ ಸಿಂಗ್ ಅವರಿಗೆ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯವಿದೆ, ಆದರೆ ಕಾಂಗ್ರೆಸ್ ಪಕ್ಷದವರಿಗೆ ಅದರ ಅನಿವಾರ್ಯವಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಅಂತ ಆಗ್ರಹಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದನ್ನೂ ಓದಿ: IPL ಬೆಟ್ಟಿಂಗ್ ದಾಳಿ ವೇಳೆ ಪೊಲೀಸರಿಗೆ ಹೆದರಿ ಓಡುವಾಗ ವ್ಯಕ್ತಿ ಬಿದ್ದು ಸಾವು
ಈ ವೇಳೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ನಗರದ ಆರ್ಟಿಓ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿದರು. ಪ್ರತಿಭಟನೆಯಲ್ಲಿ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ಅಶೋಕ ಪಟ್ಟಣ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದರಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಾಗಿದೆ. ಇವತ್ತು ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕುಟುಂಬದ ಜೊತೆಗೆ ನಿಂತಿದೆ, ಇದು ರಾಜಕೀಯವಲ್ಲ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯ ನಮ್ಮ ಪಕ್ಷಕ್ಕೆ ಬಂದಿಲ್ಲ ಎಂದರು. ಇದನ್ನೂ ಓದಿ: ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್ ನಿರುಪಮ್
ಸದ್ಯ ನನಗೆ ಬಂದಿರುವ ಮಾಹಿತಿ ಪ್ರಕಾರ ಕೆ.ಎಸ್.ಈಶ್ವರಪ್ಪನವರ ಮಗ ಮತ್ತೊಬ್ಬ ಪ್ರಭಾವಿ ಶಾಸಕರು ಸಂತೋಷ್ಗೆ ಧಮ್ಕಿ ಹಾಕಿದ್ದಾರೆ. ಆ ಮೆಸೇಜ್ ಕೂಡ ನನಗೆ ಬಂದಿದೆ. ನಮ್ಮ ಪಕ್ಷದ ಹಿರಿಯ ನಾಯಕರು ಬಂದ ಮೇಲೆ ಆ ಪ್ರಭಾವಿ ಶಾಸಕನ ಹೆಸರನ್ನು ಬಹಿರಂಗ ಮಾಡುತ್ತಾರೆ ಎಂದು ಹೇಳಿದರು.
ಅರುಣ್ ಸಿಂಗ್ ಅವರಿಗೆ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯವಿದೆ. ಭ್ರಷ್ಟಾಚಾರ, ಬೆಲೆ ಏರಿಕೆ ಮುಖವಾಡ ಡೈವರ್ಟ್ ಮಾಡಲು ಶಿವಮೊಗ್ಗದಲ್ಲಿ 144 ಸೆಕ್ಸನ್ ಇದ್ದರೂ ಈಶ್ವರಪ್ಪ ಮೆರವಣಿಗೆಯಲ್ಲಿ ಭಾಗಿಯಾಗಿ ರಾಜಕೀಯ ಬಣ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.