Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕಾಂಗ್ರೆಸ್‌ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ: ಸುಧಾಕರ್

Chikkaballapur

ಕಾಂಗ್ರೆಸ್‌ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ: ಸುಧಾಕರ್

Public TV
Last updated: April 13, 2022 5:48 pm
Public TV
Share
3 Min Read
K SUDHAKAR 2
SHARE

– ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು, ತೇಜೋವಧೆಗೆ ಸೊಪ್ಪು ಹಾಕುವುದಿಲ್ಲ
– ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಳವಾಗಿ ಬಳಕೆ

ಚಿಕ್ಕಬಳ್ಳಾಪುರ: ಗುತ್ತಿಗೆದಾರ ಸಂತೋಷ್ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಇಲ್ಲಿ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್‌ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ, ಗುತ್ತಿಗೆದಾರ ಮೃತರಾಗಿರುವುದಕ್ಕೆ ದುಃಖವಿದೆ. ಆದರೆ ಈ ಸಾವು ಏಕೆ ಸಂಭವಿಸಿದೆ ಎಂಬುದು ತನಿಖೆ ಆಗದೆ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಕೂಡ ಬೇಕಿಲ್ಲ. ಕಾಂಗ್ರೆಸ್‌ನವರು ಎಷ್ಟು ಸತ್ಯ ಹರಿಶ್ಚಂದ್ರರು ಎಂಬುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‌ನವರು ಯಾವ ಇಲಾಖೆಯಲ್ಲಿ ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎನ್ನುವ ಅಂಕಿ ಅಂಶಗಳನ್ನು ನಾವು ಕೂಡ ಕೊಡಬಹುದು ಎಂದರು. ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಮಾಡ್ಕೋಳ್ಳೋದಿದ್ರೆ ತಮ್ಮ ಜಿಲ್ಲೆಯಲ್ಲೇ ಮಾಡ್ಕೋಬೇಕಿತ್ತು: ಸೋಮಲಿಂಗ ಸ್ವಾಮೀಜಿ

SANTHOSH PATIL

ಓರ್ವ ವ್ಯಕ್ತಿ ಬರೆದ ಅನಾಮಧೇಯ ಪತ್ರ ಅಥವಾ ಆಧಾರ ರಹಿತ ದೂರಿಗೆ ಮಾನ್ಯತೆ ನೀಡಲು ಸಾಧ್ಯವಿಲ್ಲ. ದಾಖಲೆಗಳೇ ಇಲ್ಲದೆ ಒಬ್ಬರನ್ನು ಗೇಲಿ ಮಾಡುವುದು ಅಥವಾ ಆರೋಪ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರ ಬಹಳ ಪಾರದರ್ಶಕವಾಗಿ ನಡೆದುಕೊಳ್ಳುತ್ತಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದ ಪಿತಾಮಹರೇ ಕಾಂಗ್ರೆಸ್ಸಿಗರು. ಭ್ರಷ್ಟಾಚಾರದ ಜನಕರೇ ಕಾಂಗ್ರೆಸ್‌ನವರು ಎಂದು ಕಿಡಿಕಾರಿದರು.

ಪ್ರಧಾನಿ ನರೇಂದ್ರ ಮೋದಿ ಪಾರದರ್ಶಕತೆ, ಭ್ರಷ್ಟಾಚಾರ ರಹಿತ ಸರ್ಕಾರವನ್ನು ನೀಡಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿ ಹೇಗೆ ಕೆಲಸ ಮಾಡಬೇಕೆಂದು ಅವರು ತೋರಿಸಿಕೊಟ್ಟಿದ್ದಾರೆ. ಭ್ರಷ್ಟಾಚಾರ ಇಲ್ಲ ಎಂದು ಕೂಡ ನಾನು ಹೇಳುತ್ತಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಭ್ರಷ್ಟಾಚಾರ ಹುಟ್ಟಿರುವುದಲ್ಲ. ಇದರ ನಿರ್ಮೂಲನೆಗೆ ಎಲ್ಲಾ ಪಕ್ಷಗಳು ಸೇರಿ ಚರ್ಚೆ ಮಾಡಬೇಕಿದೆ. ಭ್ರಷ್ಟಾಚಾರವನ್ನು ನಿಯಂತ್ರಿಸುವುದು ಹಾಗೂ ನಿರ್ಮೂಲನೆ ಮಾಡುವುದೇ ಈಗಿನ ಸವಾಲು ಎಂದು ತಿಳಿಸಿದರು.

eshwarappa

ತನಿಖಾ ವರದಿ ಬರಲಿ:
ಕಾಂಗ್ರೆಸ್‌ನವರು ಏನು ಮಾಡುತ್ತಾರೆ ಎಂಬುದು ಈಗ ಮುಖ್ಯವಲ್ಲ. ತನಿಖೆ ನಂತರ ಸತ್ಯ ತಿಳಿದುಬರಲಿದೆ ಹಾಗೂ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಹಿಂದೆ ನಡೆದ ಡಿವೈಎಸ್‌ಪಿ ಗಣಪತಿ ಪ್ರಕರಣವೇ ಬೇರೆ, ಈಗಿನ ವಿಚಾರವೇ ಬೇರೆ. ವಾಟ್ಸಾಪ್‌ನಲ್ಲಿ ಬಂದ ಸಂದೇಶ ಅವರಿಂದಲೇ ಬಂದಿದೆಯೇ ಎಂಬುದು ಯಾರಿಗೂ ಗೊತ್ತಿಲ್ಲ. ತನಿಖೆ ನಡೆಯುತ್ತಿರುವುದರಿಂದ ಕಾದು ನೋಡಬೇಕಿದೆ. ಸಾರ್ವಜನಿಕ ಬದುಕಿನಲ್ಲಿರುವ ಸಚಿವ ಈಶ್ವರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಇದರಲ್ಲಿ ಸಿಲುಕಿಸುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ತನಿಖಾ ವರದಿ ಬಂದ ಬಳಿಕ ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮಾನನಷ್ಟ ಮೊಕದ್ದಮೆ:
ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದ್ದರಿಂದ ಅವರು ಪುರಾವೆ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪ ಮಾಡಬೇಕಾಗುತ್ತದೆ. ಆಧಾರ ರಹಿತವಾಗಿ ಅವರು ಆರೋಪ ಮಾಡಿದ್ದು, ಅವರ ವಿರುದ್ಧ ಕ್ರಮ ವಹಿಸಬೇಕು ಹಾಗೂ ಅವರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ. ಇದರೊಂದಿಗೆ ಅವರ ವಿರುದ್ಧ ವೈಯಕ್ತಿಕವಾಗಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಇಂತಹವರನ್ನು ಮುಂದೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದ್ದು, ಅವರೆಲ್ಲರಿಗೂ ನಾಚಿಕೆಯಾಗಬೇಕು. ಎಲ್ಲಾ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ಇದು ಕಾಂಗ್ರೆಸ್‌ನವರಿಗೂ ಅನ್ವಯವಾಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಪರ್ಸೆಂಟೇಜ್ ಬಗ್ಗೆ ಟೈಂ ಬಂದಾಗ ಹೇಳ್ತಿನಿ: ಹೆಚ್.ಡಿ.ರೇವಣ್ಣ

DR K SUDHAKAR 1

ಸರ್ಕಾರ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ, ಗಂಭೀರವಾಗಿ ತನಿಖೆ ಮಾಡಲಿದೆ. ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಆದರೆ ಯಾರೋ ಆರೋಪ ಮಾಡುವುದನ್ನು ಪರಿಗಣಿಸಲಾಗುವುದಿಲ್ಲ. ಈ ರೀತಿ ಮಾಡಿದರೆ ಇದೇ ಪರಂಪರೆ ಹೆಚ್ಚುತ್ತದೆ. ಬಡ ಜನರನ್ನು ಎತ್ತಿ ಕಟ್ಟಿ ಸಚಿವರ ವಿರುದ್ಧ ಮಾತನಾಡಲು ಕುಮ್ಮಕ್ಕು ನೀಡಲಾಗುತ್ತಿದೆ. ಆಮಿಷ ತೋರಿಸಿ ಅಮಾಯಕರ ಜೀವ ಕಳೆದರೆ ವಿಪಕ್ಷದ ವಿರುದ್ಧವೂ ತನಿಖೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ತನಿಖೆಗೆ ಸಿಎಂಗೆ ಮನವಿ:
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿ ಸಚಿವರು ಮಾಡಿದ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡಿಸಬೇಕಿದೆ. ಚಾರ್ಜ್ ಶೀಟ್ ಕೂಡ ದಾಖಲಿಸಬೇಕಿದೆ. ಈ ಘಟನೆಯಿಂದ ರಾಜ್ಯ ಹಾಗೂ ಸರ್ಕಾರದ ಗೌರವ ಹಾಳಾಗಿದೆ. ಈ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋರಲಾಗುವುದು ಎಂದು ಸುಧಾಕರ್ ಹೇಳಿದರು.

ಚುನಾವಣೆ ಸಮಯದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸನ್ನು ಕಾಂಗ್ರೆಸ್ ಕಾಣುತ್ತಿದೆ. ಈ ರೀತಿ ಆರೋಪಗಳನ್ನು ಮಾಡಿದರೆ ಕಾನೂನು ಹೋರಾಟ ನಡೆಸಲಾಗುವುದು. ಗುತ್ತಿಗೆದಾರರು ಆಧಾರ ರಹಿತವಾಗಿಯೇ ಎಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇವರೆಲ್ಲರೂ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

TAGGED:congresseshwarappaK SudhakarkempannaSantosh Patilಈಶ್ವರಪ್ಪಕಾಂಗ್ರೆಸ್ಕೆ.ಸುಧಾಕರ್ಕೆಂಪಣ್ಣಸಂತೋಷ್ ಪಾಟೀಲ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 minute ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
8 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
40 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?