Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುತ್ತಿಗೆದಾರರು ರಾಜಕೀಯದಿಂದ ದೂರವಿರಬೇಕು: ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುತ್ತಿಗೆದಾರರು ರಾಜಕೀಯದಿಂದ ದೂರವಿರಬೇಕು: ಡಿ.ಕೆ ಶಿವಕುಮಾರ್

Bengaluru City

ಗುತ್ತಿಗೆದಾರರು ರಾಜಕೀಯದಿಂದ ದೂರವಿರಬೇಕು: ಡಿ.ಕೆ ಶಿವಕುಮಾರ್

Public TV
Last updated: March 4, 2024 4:16 pm
Public TV
Share
2 Min Read
DK SHIVAKUMAR
SHARE

– ಸರ್ಕಾರ, ಗುತ್ತಿಗೆದಾರರ ಸಂಬಂಧ ಹಾಲು ಜೇನಿನಂತೆ

ಬೆಂಗಳೂರು: ಗುತ್ತಿಗೆದಾರರಿಗೆ (Contractors) ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ. ಗುತ್ತಿಗೆದಾರರು ರಾಜಕೀಯದಿಂದ ದೂರವಿರಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮುಂದಿನ 9 ವರ್ಷಗಳ ಕಾಲ ನಾವೇ ಅಧಿಕಾರದಲ್ಲಿ ಇರುತ್ತೇವೆ. ನಿಮ್ಮ ಸಮಸ್ಯೆಗಳನ್ನು ನಾವೇ ಬಗೆಹರಿಸುವುದು. ನಾವೇ ಪರಿಹಾರ ನೀಡುವುದು. ಈ ವಿಚಾರ ನೆನಪಿನಲ್ಲಿ ಇಟ್ಟುಕೊಳ್ಳಿ. ಗುತ್ತಿಗೆದಾರರಿಲ್ಲದೆ ಸರ್ಕಾರ ನಡೆಸಲು ಸಾಧ್ಯವಿಲ್ಲ. ನಾವು ಸರ್ಕಾರ ನಡೆಸುತ್ತೇವೆ, ನೀವು ಕಾಮಗಾರಿ ನಡೆಸುತ್ತೀರಿ. ಇದೆರಡೂ ದೇಶದ ಕೆಲಸಗಳು. ನೀವೆಲ್ಲ ರಾಜ್ಯದ ಅಭಿವೃದ್ಧಿಯ ಭಾಗಗಳು. ಹಿಂದಿನ ಸರ್ಕಾರ ಸರಿಯಾದ ಯೋಜನೆ ಮಾಡದೆ ನಿಮ್ಮ ಮೇಲೆ ಹೊರೆ ಹಾಕಿದೆ ಎಂದಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜೆಡಿಎಸ್ ಸಮಾವೇಶ, ಸುಮ್ಮನೆ ಕೂರೋದಕ್ಕಾಗುತ್ತಾ?: ವಿರೋಧಿಗಳಿಗೆ ದೊಡ್ಡಗೌಡ್ರು ಟಾಂಗ್

ನೀರಾವರಿ ಇಲಾಖೆಯ ಬಜೆಟ್ 16 ಸಾವಿರ ಕೋಟಿ ರೂ. ಇದೆ. ಕಳೆದ ಬಾರಿ 25 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿತ್ತು. ಒಟ್ಟು ನನ್ನ ಇಲಾಖೆಯಲ್ಲಿ 1 ಲಕ್ಷ 25 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ನಡೆಯುತ್ತಿವೆ. ಹೀಗಿದ್ದಾಗ ಗುತ್ತಿಗೆದಾರರು ಕೆಲಸ ಮುಗಿಸುವುದು ಹೇಗೆ? ಸರ್ಕಾರ ಬಿಲ್ ಪಾವತಿ ಮಾಡುವುದು ಹೇಗೆ? ಈ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಬಾರಿ ಅಭಿವೃದ್ಧಿ ಕಾರ್ಯಗಳಿಗೆ ಎಂದು 1.20 ಲಕ್ಷ ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ. 3 ಲಕ್ಷದ 71 ಸಾವಿರ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ನಿಮಗೆ ತೊಂದರೆ ಆಗದಂತೆ ಒಂದಷ್ಟು ಹಣ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಹಣ ಸರಿಯಾಗಿ ನೀಡದ ಪರಿಣಾಮ ಹೆಚ್ಚಿನ ತೊಂದರೆಯಾಗುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ನೀಡುವುದಾಗಿ ಬಜೆಟ್‍ನಲ್ಲಿಯೇ ಹೇಳಿದ್ದರು. ಇದುವರೆಗೂ ಒಂದು ರೂಪಾಯಿ ಬಂದಿಲ್ಲ. ಪರಿಸ್ಥಿತಿ ಹೀಗಿರುವಾಗ ಸರ್ಕಾರ ಹೇಗೆ ನಡೆಸುವುದು? ದೊಡ್ಡ, ದೊಡ್ಡ ಗುತ್ತಿಗೆದಾರರು ಬೃಹತ್ ಮೊತ್ತದ ಪ್ಯಾಕೇಜ್ ಯೋಜನೆಗಳನ್ನು ತೆಗೆದುಕೊಂಡು ತುಂಡು ಗುತ್ತಿಗೆಯಾಗಿ ಸಣ್ಣವರಿಗೆ ನೀಡುತ್ತಿದ್ದಾರೆ. ಈ ಮಾಫಿಯಾವನ್ನು ಪ್ರಾರಂಭ ಮಾಡಿದ್ದೇ ಅಧಿಕಾರಿಗಳು ಎಂದು ಕಿಡಿಕಾರಿದ್ದಾರೆ.

ಗುತ್ತಿಗೆದಾರರು ಪ್ಯಾಕೇಜ್ ಪದ್ಧತಿ ರದ್ದು ಮಾಡಬೇಕು. ಬಾಕಿ ಮೊತ್ತ ಬಿಡುಗಡೆ ಮಾಡಬೇಕು. ಭ್ರಷ್ಟಾಚಾರ ಕಡಿಮೆ ಮಾಡಬೇಕು ಎನ್ನುವ ನಿಮ್ಮ ಬೇಡಿಕೆಗಳನ್ನು ಪೂರೈಸುವ ಚಿಂತನೆ ಮಾಡಲಾಗುವುದು. ಈ ಭ್ರಷ್ಟಾಚಾರದ ಭೂತ ನಿಮಗೂ ಅಂಟಿದೆ, ನಮಗೂ ಅಂಟಿದೆ. ಇಬ್ಬರೂ ಈ ಕಷ್ಟದಿಂದ ಪಾರಾಗಬೇಕಿದೆ. ಗುತ್ತಿಗೆದಾರರ ಎಲ್ಲಾ ಬೇಡಿಕೆಗಳು ಸರ್ಕಾರದ ಗಮನದಲ್ಲಿದೆ. ನೀವು ಹಣವನ್ನು ಬಡ್ಡಿಗೆ ತಂದು, ಮೀಟರ್ ಬಡ್ಡಿ ಕಟ್ಟುತ್ತಾ, ಆಸ್ತಿಗಳನ್ನು ಅಡವಿಟ್ಟು ಕಾಮಗಾರಿಗಳನ್ನು ಮಾಡಿರುತ್ತೀರಿ. ನಿಮ್ಮ ಕಷ್ಟ ಸರ್ಕಾರದ ಗಮನದಲ್ಲಿದೆ. ಎರಡು, ಮೂರು ದಿನಗಳಲ್ಲಿ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾಗುವ ಸಂಭವವಿದೆ. ಚುನಾವಣೆ ನಂತರ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡಲಾಗುವುದು. ನಮ್ಮ, ನಿಮ್ಮ ಸಂಬಂಧ ಹಾಲು ಜೇನಿನಂತೆ. ಹಾಲನ್ನು ಕುಡಿಯದೇ ಇರಲು, ಜೇನು ಸವಿಯದೇ ಇರಲು ಸಾಧ್ಯವಿಲ್ಲ. ಒಟ್ಟಿಗೆ ಕುಳಿತು ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳೋಣ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬಾಂಬ್ ಸ್ಫೋಟವಾಗಲು ಎರಡೂ ರಾಷ್ಟ್ರೀಯ ಪಕ್ಷದವರು ಕಾರಣ: ಪ್ರಮೋದ್ ಮುತಾಲಿಕ್

TAGGED:bengalurucongresscontractorsDK Shivakumarpoliticsಕಾಂಗ್ರೆಸ್ಗುತ್ತಿಗೆದಾರರ ಸಂಘಡಿ.ಕೆ.ಶಿವಕುಮಾರ್ರಾಜಕೀಯ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
18 minutes ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
46 minutes ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
58 minutes ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
2 hours ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
2 hours ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?