ಚಿಕ್ಕಮಗಳೂರು: ಬೆಳಗಾವಿ ಮೂಲದ ಗುತ್ತಿಗೆದಾರನ ಮೇಲ್ವಿಚಾರಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಲಾಡ್ಜ್ ನಲ್ಲಿ ನಡೆದಿದೆ.
ಬಸವರಾಜ್ ಲಿಂಗಪ್ಪ (47) ಮೃತ ವ್ಯಕ್ತಿ. ಲಿಂಗಪ್ಪ ಅವರು ದೊಡ್ಡ ವಾಟರ್ ಟ್ಯಾಂಕ್ ಕಟ್ಟುವ ಗುತ್ತಿಗೆದಾರನ ಬಳಿ ಕೆಲಸ ಮಾಡುತ್ತಿದ್ದರು. ಅವರು ಕಳೆದ 10 ದಿನಗಳಿಂದ ಬಾಳೆಹೊನ್ನೂರಿನಲ್ಲಿ ಕೆಲಸ ಮಾಡುತ್ತಿದ್ದರು. ಆರು ವರ್ಷದ ಕೆಲಸದ ಸಂಬಳ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಪೊಲೀಸ್ ಠಾಣೆ ಮುಂಭಾಗದಲ್ಲೇ ಏರ್ ಫೈರ್ – ವೆಬ್ ಡಿಸೈನರ್ ಕಿಡ್ನಾಪ್
ಆತ್ಮಹತ್ಯೆಗೂ ಮುನ್ನ ಲಿಂಗಪ್ಪ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಮೃತ ಬಸವರಾಜ್ ಅವರ ಕುಟುಂಬಸ್ಥರಿಗಾಗಿ ಕಾಯುತ್ತಿದ್ದಾರೆ. ಲಾಡ್ಜ್ ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಲಾಲ್ ಮಾಂಸ, ಮಸೀದಿಗಳಲ್ಲಿ ಧ್ವನಿವರ್ಧಕ ಏಕೆ ನಿಷೇಧಿಸಬೇಕು: ಒಮರ್ ಅಬ್ದುಲ್ಲಾ ಪ್ರಶ್ನೆ