ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತೆ- ಮೌಲ್ವಿಯಿಂದ ವಿವಾದಾತ್ಮಕ ಹೇಳಿಕೆ

Public TV
1 Min Read
PAKISTHAN

ಹುಬ್ಬಳ್ಳಿ: ನಗರದ ಗಣೇಶ ಪೇಟೆ ನನಗೆ ಪಾಕಿಸ್ತಾನದಂತೆ ಕಾಣುತ್ತದೆ. ಪಾಕಿಸ್ತಾನಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂದು ಮೌಲ್ವಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯ ಗಣೇಶ್ ಪೇಟೆಯಲ್ಲಿ ಶನಿವಾರ ನಡೆದ ಈದ್ ಮಿಲಾದ್ ಹಬ್ಬದ ವೇಳೆ ಗಣೇಶ ಪೇಟೆಯ ಮಜೀದ ಮುತವಲಿ ಅಬ್ದುಲ್ ಹಮೀದ್ ಖೈರಾತಿ ಎನ್ನುವ ಮೌಲ್ವಿಯೇ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿದ್ದಾರೆ.

HBL 5

ಗಣೇಶ್ ಪೇಟೆ ನನಗೆ ಪಾಕಿಸ್ತಾನ ಹಾಗೇ ಕಾಣುತ್ತಿದೆ, ಪಾಕಿಸ್ತಾನಕ್ಕೆ ಹೋಗಿ ನೋಡುವ ಅವಶ್ಯಕತೆ ಇಲ್ಲ. ಇಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದೆ. ನಾವು ಒಗ್ಗಟ್ಟಿನಿಂದ ಹಾಗೂ ಎದೆ ಸೆಟೆದು ನಡೆದರೆ ನಮ್ಮ ತಂಟೆಗೆ ಯಾರೂ ಬರುವುದಿಲ್ಲ ಎಂದು ಹೇಳಿದ್ದಾರೆ.

ಮೌಲ್ವಿಯ ಈ ಹೇಳಿಕೆಯ ವಿಡಿಯೋ ಈಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಮೌಲ್ವಿ ಈ ರೀತಿ ಹೇಳಿಕೆ ನೀಡುವಾಗ ಅವರ ಪಕ್ಕದಲ್ಲೇ ಉತ್ತರ ವಲಯ ಎಸಿಪಿ ದಾವೂದ್ ಖಾನ್ ಹಾಗೂ ಪೊಲೀಸರು ಇದ್ದರು. ಪೊಲೀಸರ ಎದುರು ವಿವಾದಾತ್ಮಕ ಹೇಳಿಕೆ ನೀಡಿದ್ದರು ಪೊಲೀಸರು ಸುಮ್ಮನೆ ಕುಳಿತುಕೊಂಡಿದ್ದಕ್ಕೆ ವ್ಯಾಪಕ ಟೀಕೆ ಬಂದಿದೆ.

ವಿವಾದಾತ್ಮಕ ಹೇಳಿಕೆ ನೀಡಿದ್ರು ಸುಮ್ಮನೇ ಕುಳಿತ ಪೊಲೀಸರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇಂತ ದೇಶದ್ರೋಹ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಮೌಲ್ವಿ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

HBL 1
HBL 2

HBL 3

HBL 4

HBL 6

Share This Article
Leave a Comment

Leave a Reply

Your email address will not be published. Required fields are marked *