Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭುವನೇಶ್ವರಿ ಭಾವಚಿತ್ರಕ್ಕೆ ಭುಗಿಲೆದ್ದ ವಿವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭುವನೇಶ್ವರಿ ಭಾವಚಿತ್ರಕ್ಕೆ ಭುಗಿಲೆದ್ದ ವಿವಾದ

Districts

ಭುವನೇಶ್ವರಿ ಭಾವಚಿತ್ರಕ್ಕೆ ಭುಗಿಲೆದ್ದ ವಿವಾದ

Public TV
Last updated: November 23, 2022 10:13 pm
Public TV
Share
2 Min Read
gadag nadadevi
SHARE

ಗದಗ: ಕರ್ನಾಟಕ ಏಕೀಕರಣಕ್ಕಾಗಿ ನಡೆದ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಅಖಂಡ ಕರ್ನಾಟಕ ಹೋರಾಟಕ್ಕೆ ಸ್ಪೂರ್ತಿಯಾಗಿದ್ದು, ಕರ್ನಾಟಕ ಮಾತೆ ಭುವನೇಶ್ವರಿ ಭಾವಚಿತ್ರ. ಸರ್ಕಾರ ಈಗ ಅಧಿಕೃತವಾಗಿ ಕನ್ನಡ ಭುವನೇಶ್ವರಿ ಚಿತ್ರ ಆರಾಧನೆಗೆ ಮುಂದಾಗುತ್ತಿದೆ. ಈ ವೇಳೆ ಹಲವೆಡೆ ವಿರೋಧದ ಕೂಗು ಕೇಳಿ ಬರುತ್ತಿದೆ. ಗದಗ ಜಿಲ್ಲೆಯ ಜಕ್ಕಲಿ ಗ್ರಾಮದ ಅಂದಾನಪ್ಪ ದೊಡ್ಡಮೇಟಿ ಕುಟುಂಬಸ್ಥರು, ಹಿರಿಯ ಸಾಹಿತಿಗಳು, ಕಲಾವಿದರು, ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬಸ್ಥರು, ಕನ್ನಡಪರ ಸಂಘಟನಾಕಾರರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ.

gadag nadadevi bhuvaneshwari 2

ಗದಗ ಜಿಲ್ಲೆ ಕರ್ನಾಟಕ ಏಕೀಕರಣಕ್ಕೆ ಅನೇಕ ಮಹಾತ್ಮರನ್ನು ತೆತ್ತ ಜನ್ಮಭೂಮಿ. ಈಗ 67ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. 67 ವರ್ಷಗಳ ನಂತರ ಅಧಿಕೃತವಾಗಿ ಭುವನೇಶ್ವರಿ ಆರಾಧನೆಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಗದಗ ಜಿಲ್ಲೆ ಸೇರಿದಂತೆ ಹಲವು ಕಡೆಗಳಲ್ಲಿ ಹಲವಾರು ವಿರೋಧ, ಅಪಸ್ವರಗಳು ಶುರುವಾಗಿದೆ. ಕರ್ನಾಟಕ ಏಕೀಕರಣ ಹೋರಾಟ ಸಂದರ್ಭದಲ್ಲಿ ಕರ್ನಾಟಕ ಮಾತೆ ಭುವನೇಶ್ವರಿ ಭಾವಚಿತ್ರ ಹೇಗಿರಬೇಕು ಎಂಬ ಪರಿಕಲ್ಪನೆ ಮಾಡಿದವರೇ, ಗದಗ ಜಿಲ್ಲೆಯ ಜಕ್ಕಲಿ ಗ್ರಾಮದ ದಿವಂಗತ ಅಂದಾನಪ್ಪ ದೊಡ್ಡಮೇಟಿ ಅವರು.

gadag nadadevi bhuvaneshwari 4

ದೊಡ್ಡಮೇಟಿ ಅವರ ಕಲ್ಪನೆಯನ್ನು ಗದಗದ ಕಲಾವಿದ ಸಿ.ಎನ್ ಪಾಟೀಲ್ ಅವರು 1952 ರಲ್ಲಿ ತೈಲ ವರ್ಣದಲ್ಲಿ ಚಿತ್ರ ಬಿಡಿಸಿದರು. ಕರ್ನಾಟಕ ನಕಾಶೆಯಲ್ಲಿ ಸುಂದರವಾಗಿ ಮೂಡಿ ಬಂದ ಭಾವಚಿತ್ರ ಇದಾಗಿದೆ. ಭುವನೇಶ್ವರಿ ಭಾವಚಿತ್ರದ ಸುತ್ತಲು ಮೈಸೂರು ಅರಮನೆ, ಚಾಮುಂಡೇಶ್ವರಿ, ಗೊಮ್ಮಟೇಶ್ವರ ವಿಗ್ರಹ, ಹಂಪಿ ವಿರೂಪಾಕ್ಷ ಗೋಪುರ ವಿಗ್ರಹ, ಜೋಗ ಜಲಪಾತ, ಶೃಂಗೇರಿ ಶಾರದಾ ಪೀಠ, ಅತ್ತಿಮಬ್ಬೆ ತಾಳೆಗರಿ, ಅರಣ್ಯ, ನದಿಗಳು ಸೇರಿದಂತೆ ಇನ್ನಿತರ ಪ್ರಮುಖ ಪ್ರವಾಸಿ ಚಿತ್ರಗಳಿವೆ. ಸರ್ಕಾರ ಇದನ್ನೇ ಅಂತಿಮವಾಗಿ ಘೋಷಣೆ ಮಾಡಬೇಕು ಎಂದು ದೊಡ್ಡಮೇಟಿ ಕುಟುಂಬಸ್ಥರು ಹಾಗೂ ಕನ್ನಡಪರ ಸಂಘಟನಾಕಾರರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಾಡ ದೇವಿಯ ಭಾವಚಿತ್ರ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

gadag nadadevi bhuvaneshwari 3

67 ವರ್ಷದ ನಂತರ ಅಧಿಕೃತವಾಗಿ ಸರ್ಕಾರ ಕನ್ನಡ ದೇವತೆ ಆರಾಧನೆಗೆ ಮುಂದಾಗಿದೆ. ಏಕರೂಪತೆಗಾಗಿ ಲಲಿತಕಲಾ ಅಕಾಡೆಮಿಯಿಂದ 6 ಜನ ಸದಸ್ಯರ ಸಮಿತಿ ರಚಿಸಿದ್ದಾರೆ. ಕನ್ನಡ ಮಾತೆ ಹೇಗಿರಬೇಕೆಂದು ಆ ಸಮಿತಿ ಈಗ ಭಾವಚಿತ್ರ ಬಿಡಿಸಿ ಸರ್ಕಾರಕ್ಕೆ ಒಪ್ಪಿಸಿದೆ. ಆದರೆ ಇದು ಸರಿಯಾದ ನಿರ್ಧಾರವಲ್ಲ. ಸಮಿತಿ ರಚನೆಯಲ್ಲಿ ಕಲೆ, ಸಾಹಿತ್ಯ, ಸಂಗೀತ, ಶಿಲ್ಪಕಲೆ ಸೇರಿದಂತೆ ಎಲ್ಲಾ ವಲಯ ಒಗ್ಗೂಡಿಸಿ ಸಮಿತಿ ರಚಿಸಬೇಕಿತ್ತು. ಆದರೆ ಲಲಿತಕಲಾ ಅಕಾಡೆಮಿ ರಚಿಸಿದ ಸಮಿತಿಯಲ್ಲಿ ಹೆಚ್ಚು ಒಂದೇ ವರ್ಗದವರಿದ್ದಾರೆ. ಸರ್ಕಾರ ಇದನ್ನು ಪರಿಗಣಿಸಬಾರದು. ಅಂದಾನಪ್ಪ ದೊಡ್ಡಮೇಟಿ ಅವರ ತೈಲ ವರ್ಣದ ಭಾವಚಿತ್ರ ಘೋಷಿಸಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಇದಕ್ಕೆ ಗದಗ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್, ದೊಡ್ಡಮೇಟಿ ಕುಟುಂಬಸ್ಥರು, ಅನೇಕ ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬಸ್ಥರು, ಕನ್ನಡ ಪರ ಸಂಘಟನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

gadag nadadevi bhuvaneshwari

ಈ ಕನ್ನಡ ತಾಯಿ ಭುವನೇಶ್ವರಿ ಜಕ್ಕಲಿ ಗ್ರಾಮದ ದೊಡ್ಡಮೇಟಿ ಅವರ ಮನೆಯಲ್ಲಿ ನಿತ್ಯವೂ ಪೂಜನೀಯವಾಗಿದ್ದಾಳೆ. ಈ ಚಿತ್ರ ತಯಾರಾಗಿದ್ದು 1952 ರಲ್ಲಿ. ಡಿಜಿಟಲ್ ಯುಗಕ್ಕೆ ಕಾಲಿಟ್ಟಿರುವ ಪ್ರಚಲಿತದ ಭುವನೇಶ್ವರಿಯು ತನ್ನ ಕಳೆಯನ್ನು ಕಳೆದುಕೊಂಡಿದ್ದಾಳೆ. ಈಗಿನ ಭುವನೇಶ್ವರಿ ಭಾವಚಿತ್ರ ಅವೈಜ್ಞಾನಿಕವಾಗಿದ್ದು, ಅಪೂಜನಿಯವಾಗಿದೆ ಎಂಬುದು ಗದಗ ಜಿಲ್ಲೆ ದೊಡ್ಡಮೇಟಿ ಕುಟುಂಬದವರ ಆರೋಪವಾಗಿದೆ. ಇದನ್ನೂ ಓದಿ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಪ್ರವೇಶಿಸಲು ವಸ್ತ್ರ ಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ವೇದಿಕೆ ಒತ್ತಾಯ

Live Tv
[brid partner=56869869 player=32851 video=960834 autoplay=true]

TAGGED:gadagKannadambekarnatakaNadadeviಕನ್ನಡಾಂಬೆಕರ್ನಾಟಕಗದಗನಾಡದೇವಿಭಾವಚಿತ್ರ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
16 minutes ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
23 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
32 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
39 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
1 hour ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?