Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣೇಶ ಹಬ್ಬದ ಬೆನ್ನಲ್ಲೇ ಜನರಿಗೆ ಗುಡ್ ನ್ಯೂಸ್- ಅಡುಗೆ ಎಣ್ಣೆ ದರ ಇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಣೇಶ ಹಬ್ಬದ ಬೆನ್ನಲ್ಲೇ ಜನರಿಗೆ ಗುಡ್ ನ್ಯೂಸ್- ಅಡುಗೆ ಎಣ್ಣೆ ದರ ಇಳಿಕೆ

Bengaluru City

ಗಣೇಶ ಹಬ್ಬದ ಬೆನ್ನಲ್ಲೇ ಜನರಿಗೆ ಗುಡ್ ನ್ಯೂಸ್- ಅಡುಗೆ ಎಣ್ಣೆ ದರ ಇಳಿಕೆ

Public TV
Last updated: September 12, 2021 12:42 pm
Public TV
Share
4 Min Read
oil pan
SHARE

ಬೆಂಗಳೂರು: ಗಣೇಶ ಹಬ್ಬದ ಬೆನ್ನಲ್ಲೇ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಗುಡ್‌ ನ್ಯೂಸ್‌ ನೀಡಿದೆ. ಅಡುಗೆ ಎಣ್ಣೆಯ ಮೇಲಿನ ಆಮದು ಸುಂಕ ಇಳಿಕೆ ಮಾಡಿ ಕೇಂದ್ರ ಸರ್ಕಾರ ಜನರಿಗೆ ಕೊಂಚ ರಿಲೀಫ್‌ ನೀಡಿದೆ.

ನಿನ್ನೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಮದು ಸುಂಕ ಕಡಿತಕ್ಕೆ ನಿರ್ಧರಿಸಲಾಗಿದೆ. ಕಚ್ಛಾ ತೈಲದ ಸೆಸ್‌ ಸೇರಿದಂತೆ ಇತರೆ ಸುಂಕಗಳನ್ನು ಕೂಡಾ ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ಇದರಿಂದಾಗಿ ಮುಂಬರುವ ಅಕ್ಟೋಬರ್‌ನಿಂದ ಅಡುಗೆ ಎಣ್ಣೆಯ ದರ ಇಳಿಕೆಯಾಗುವ ನಿರೀಕ್ಷೆ ಇದೆ.

OIL

ಖಾದ್ಯ ತೈಲ ಬೆಲೆಗಳನ್ನು ಕಡಿಮೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಸುಂಕವನ್ನು 2.5%ಕ್ಕೆ ಇಳಿಸಿದೆ. ಅಲ್ಲದೇ ಸಂಸ್ಕರಿಸಿದ ತಾಳೆ ಎಣ್ಣೆ, ಸಂಸ್ಕರಿಸಿದ ಸೋಯಾಬೀನ್ ಎಣ್ಣೆ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ ಮೇಲಿನ ಸುಂಕವನ್ನು 32.5%ಗೆ ಇಳಿಸಲಾಗಿದೆ. ಸರ್ಕಾರ ಸುಂಕಗಳ ಇಳಿಕೆಯ ನಷ್ಟವನ್ನು ಭರಿಸುವ ಮೂಲಕ 4,600 ಕೋಟಿ ರೂ. ಮೌಲ್ಯದ ಪ್ರಯೋಜನಗಳನ್ನು ನೇರವಾಗಿ ಗ್ರಾಹಕರಿಗೆ ವರ್ಗಾಯಿಸಿದೆ.

neem plant and essential oil

ಗ್ರಾಹಕರಿಗೆ ನ್ಯಾಯಯುತ ಬೆಲೆಯಲ್ಲಿ ಖಾದ್ಯ ತೈಲ ಲಭ್ಯತೆಯನ್ನು ಖಾತರಿಪಡಿಸುವ ಸಲುವಾಗಿ, ಭಾರತ ಸರ್ಕಾರವು 2021ರ ಸೆಪ್ಟೆಂಬರ್ 10ರಿಂದ ಅಧಿಸೂಚನೆ ಸಂಖ್ಯೆ 42/2021(ಕಸ್ಟಮ್ಸ್) ಮೂಲಕ (i) ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಸುಂಕವನ್ನು 2021 ಸೆಪ್ಟೆಂಬರ್ 11ರಿಂದ ಜಾರಿಗೆ ಬರುವಂತೆ 2.5%ಗೆ ಹಾಗೂ (ii) ಸಂಸ್ಕರಿಸಿದ ತಾಳೆ ಎಣ್ಣೆ, ಸಂಸ್ಕರಿಸಿದ ಸೋಯಾಬೀನ್ ಎಣ್ಣೆ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ ಮೇಲಿನ ಸುಂಕವನ್ನು 11.09.2021ರಿಂದ ಜಾರಿಗೆ ಬರುವಂತೆ 32.5% ಗೆ ಇಳಿಸಿದೆ.

oil rate

ಇದೇ ಅಧಿಸೂಚನೆಯಲ್ಲಿ ಕಚ್ಚಾ ತಾಳೆ ಎಣ್ಣೆಯ ಮೇಲಿನ ಕೃಷಿ ಸೆಸ್ ಅನ್ನು ಶೇ.17.5ರಿಂದ ಶೇ.20ಕ್ಕೆ ಹೆಚ್ಚಿಸಲಾಗಿದೆ. ಸರ್ಕಾರವು 2021 ಸೆಪ್ಟೆಂಬರ್ 10ರ ಅಧಿಸೂಚನೆ ಸಂಖ್ಯೆ 43/2021(ಕಸ್ಟಮ್ಸ್) ಮೂಲಕ ಹಣಕಾಸು ಸಚಿವಾಲಯದ (ಕಂದಾಯ ಇಲಾಖೆ), 2021 ಜೂನ್ 29ರ ಅಧಿಸೂಚನೆ ಸಂಖ್ಯೆ 34/2021( ಕಸ್ಟಮ್ಸ್) ಅನ್ನು ರದ್ದುಗೊಳಿಸಿದೆ. ಆದರೆ, ಈ ರದ್ದತಿಗೆ ಮೊದಲು ಮಾಡಲಾದ ಅಥವಾ ಕೈಬಿಡಲಾದ ಅಂಶಗಳಿಗೆ ಇದು ಅನ್ವಯವಾಗುವುದಿಲ್ಲ. ಆ ಮೂಲಕ ಇತ್ತೀಚಿನ ಆಮದು ಸುಂಕ (11.09.2021ರಿಂದ ಅನ್ವಯವಾಗುವಂತೆ) ಮುಂದಿನ ಆದೇಶಗಳವರೆಗೆ ಇನ್ನೂ ಜಾರಿಯಲ್ಲಿರಲಿದೆ.

Money

2021-22ರ ಅವಧಿಯಲ್ಲಿ ಅಂತರರಾಷ್ಟ್ರೀಯ ಖಾದ್ಯ ತೈಲಗಳ ಬೆಲೆಗಳು ಗಗನಕ್ಕೇರಿದ್ದು, ಆ ಮೂಲಕ ಖಾದ್ಯ ತೈಲಗಳ ದೇಶೀಯ ಬೆಲೆಗಳ ಹೆಚ್ಚಳಕ್ಕೂ ಕಾರಣವಾಗಿದ್ದು ಗಮನಾರ್ಹ. ಇದು ಹಣದುಬ್ಬರ ಮತ್ತು ಗ್ರಾಹಕರ ದೃಷ್ಟಿಕೋನದಿಂದ ಗಂಭೀರ ಕಳವಳಕ್ಕೆ ಕಾರಣವಾಯಿತು. ಖಾದ್ಯ ತೈಲಗಳ ಮೇಲಿನ ಆಮದು ಸುಂಕವು ಖಾದ್ಯ ತೈಲಗಳ ವೆಚ್ಚದ ಮೇಲೆ ಮತ್ತು ಆ ಮೂಲಕ ಮೂಲಕ ದೇಶೀಯ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ಚುನಾವಣೆ ಸಂದರ್ಭ ಮಾತ್ರವಲ್ಲ, ನಿರಂತರವಾಗಿ ಜನರ ಯೋಗಕ್ಷೇಮ ವಿಚಾರಿಸಬೇಕು: ಆರ್.ಅಶೋಕ್

ಈ ಬೆಲೆಗಳ ಏರಿಕೆಯನ್ನು ನಿಯಂತ್ರಿಸುವ ಸಲುವಾಗಿ, ಭಾರತ ಸರ್ಕಾರವು ಫೆಬ್ರವರಿ 2021 ಮತ್ತು ಆಗಸ್ಟ್ 2021ರ ನಡುವೆ ಸರಣಿ ಕ್ರಮಗಳನ್ನು ಕೈಗೊಂಡಿತ್ತು.

HOT OIL

ಅವುಗಳಲ್ಲಿ ಈ ಕೆಲವು ಸೇರಿವೆ:
1. ಆಮದು ಸುಂಕದ ಪುನರ್‌ವ್ಯವಸ್ಥೆ (ಸುಧಾರಣೆ)
ಸರ್ಕಾರವು ದಿನಾಂಕ 29 ಜೂನ್, 2021ರ ಅಧಿಸೂಚನೆ ಸಂಖ್ಯೆ 34/2021 (ಕಸ್ಟಮ್ಸ್) ಮೂಲಕ ಕಚ್ಚಾ ತಾಳೆ ಎಣ್ಣೆಯ ಮೇಲಿನ ಸುಂಕವನ್ನು 30.06.2021ರಿಂದ 10%ಗೆ ಇಳಿಸಿದೆ . ಇದು 30 ಸೆಪ್ಟೆಂಬರ್, 2021ರವರೆಗೆ ಅನ್ವಯವಾಗಲಿದೆ.

2) ಸರ್ಕಾರವು, 2021ರ ಜೂನ್ 30ರ ಡಿಜಿಎಫ್‍ಟಿ’ಯ ಅಧಿಸೂಚನೆ ಸಂಖ್ಯೆ 10/2015-2020 ಮೂಲಕ ಸಂಸ್ಕರಿತ ತಾಳೆ ಎಣ್ಣೆಯ ಆಮದು ನೀತಿಯನ್ನು ತಿದ್ದುಪಡಿ ಮಾಡಿತು. ತಕ್ಷಣದಿಂದ ಜಾರಿಗೆ ಬರುವಂತೆ ತಾಳೆ ಎಣ್ಣೆಯ ಆಮದನ್ನು “ನಿರ್ಬಂಧಿತ” ಸ್ಥಿತಿಯಿಂದ “ಮುಕ್ತ” ಸ್ಥಿತಿಗೆ ಬದಲಾಯಿಸಲಾಯಿತು. ಇದು 31.12.2021ರ ವರೆಗೆ ಜಾರಿಯಲ್ಲಿರಲಿದೆ.

Heat Oil medium

ಇದಲ್ಲದೆ, ಸಂಸ್ಕರಿಸಿದ ತಾಳೆ ಎಣ್ಣೆಯನ್ನು ಕೇರಳದ ಯಾವುದೇ ಬಂದರಿನ ಆಮದು ಮಾಡಿಕೊಳ್ಳುವುದನ್ನು ನಿರ್ಬಂಧಿಸಲಾಗಿದೆ.
3) ಸರ್ಕಾರವು ದಿನಾಂಕ 19 ಆಗಸ್ಟ್ 2021ರ ಅಧಿಸೂಚನೆ ಸಂಖ್ಯೆ 40/2021- (ಕಸ್ಟಮ್ಸ್) ಮೂಲಕ ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಸುಂಕವನ್ನು ಶೇ.7.5ಕ್ಕೆ ಮತ್ತು ಸಂಸ್ಕರಿಸಿದ ಸೋಯಾಬೀನ್ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಯ ಮೇಲಿನ ಸುಂಕವನ್ನು 20.08.2021ರಿಂದ ಜಾರಿಗೆ ಬರುವಂತೆ ಶೇ.37.5ಕ್ಕೆ ಇಳಿಸಿದೆ. ದಿನಾಂಕ ಜೂನ್ 29, 2021ರ ಹಣಕಾಸು ಸಚಿವಾಲಯದ (ಕಂದಾಯ ಇಲಾಖೆ) ಅಧಿಸೂಚನೆಗೆ(ಸಂಖ್ಯೆ: 34/2021-ಕಸ್ಟಮ್ಸ್) ತಿದ್ದುಪಡಿ ಮೂಲಕ ಈ ಇಳಿಕೆ ಮಾಡಲಾಗಿದೆ.

4) ಅಬಕಾರಿ, ಎಫ್.ಎಸ್.ಎಸ್, ಎ.ಐ, ಪಿಪಿ & ಕ್ಯೂ, ಡಿ.ಎಫ್.ಪಿ.ಡಿ ಮತ್ತು ಡಿ.ಒ.ಸಿ.ಎಗಳಿಂದ ವಿವಿಧ ಬಂದರಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಇದನ್ನೂ ಓದಿ: ನೈಟ್ ಕರ್ಫ್ಯೂ ಹೊತ್ತಲ್ಲಿ ಯುವಜನತೆಯ ಮೋಜು ಮಸ್ತಿ – ಪೊಲೀಸರ ಮುಂದೆಯೇ ಬಿಂದಾಸ್ ಸುತ್ತಾಟ

5) ಕೋವಿಡ್-19 ಕಾರಣದಿಂದಾಗಿ ಆಮದು ಮಾಡಿಕೊಂಡ ಖಾದ್ಯ ತೈಲಗಳ ಸಾಗಣೆಯಲ್ಲಿ ಆಗಿರುವ ವಿಳಂಬವನ್ನು ಸರಿಪಡಿಸಿ, ಸರಬರಾಜು ತ್ವರಿತಗೊಳಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‍ಎಸ್‍ಎಸ್‍ಎಐ), ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆಯ ಪ್ಲಾಂಟ್ ಕ್ವಾರಂಟೈನ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಗ್ರಾಹಕ ವ್ಯವಹಾರಗಳು ಮತ್ತು ಅಬಕಾರಿ ಇಲಾಖೆಗಳು ಈ ಸಮಿತಿಯ ಭಾಗವಾಗಿವೆ. ಈ ಸಮಿತಿಯು ವಾರಕ್ಕೊಮ್ಮೆ ಆಮದು ಮಾಡಿದ ಖಾದ್ಯ ತೈಲಗಳ ಸರಕುಗಳನ್ನು ಪರಿಶೀಲಿಸಿ, ಕಾರ್ಯದರ್ಶಿ (ಆಹಾರ) ಅಧ್ಯಕ್ಷತೆಯ ‘ಕೃಷಿ ಸರಕುಗಳ ಅಂತರ ಸಚಿವಾಲಯ ಸಮಿತಿ’ಗೆ ವರದಿ ನೀಡುತ್ತದೆ.

TAGGED:bengaluruCentral Governmentcooking oilprice ReductionPublic TVಅಡುಗೆ ಎಣ್ಣೆಕೇಂದ್ರ ಸರ್ಕಾರಪಬ್ಲಿಕ್ ಟಿವಿಬೆಂಗಳೂರುಬೆಲೆ ಇಳಿಕೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
1 minute ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
12 minutes ago
Rajanna Naseer next Zameer Ahmed CM Siddaramaiahs close circle friends is the big target Karnataka Politics
Bengaluru City

ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

Public TV
By Public TV
25 minutes ago
leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
51 minutes ago
Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
1 hour ago
Marathi mandatory for rickshaw and taxi drivers in Maharashtra from May 1 Pratap Sarnaik RTO
Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?