ಹೈದರಾಬಾದ್: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳಾ ಪೇದೆಯನ್ನು ಕೊಲೆ ಮಾಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಮಂದಾರಿಕಾ ಮೃತ ಮಹಿಳಾ ಪೊಲೀಸ್ ಕಾನ್ಸ್ಟೇಬಲ್. ಈ ಘಟನೆ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂಗರೆಡ್ಡಿ ಜಿಲ್ಲೆಯ ವೆಂಕಟಪುರಂ ಗ್ರಾಮದವರಾಗಿದ್ದು, ಕುತ್ತಿಗೆ ಹಿಸುಕಿ ಆರೋಪಿ ಪ್ರಕಾಶ್ ಕೊಲೆ ಮಾಡಿದ್ದಾನೆ. ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
- Advertisement 2
- Advertisement 3
ಮಹಿಳಾ ಪೇದೆಯ ತಂದೆ ಸದಾನಂದಂ ಅವರು ಮಂಗಳವಾರ ಪೊಲೀಸ್ ಠಾಣೆಗೆ ಹೋಗಿ ಮಗಳು ಕರ್ತವ್ಯ ಮುಗಿದ ನಂತರ ಮನೆಗೆ ಹಿಂದಿರುಗಲಿಲ್ಲ ಎಂದು ವಿಚಾರಣೆ ಮಾಡಿದ್ದಾರೆ. ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ಪ್ರಕಾಶ್ ಮಂದಾರಿಕಾರನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
- Advertisement 4
ಏನಿದು ಪ್ರಕರಣ?
ಕೆಲವು ತಿಂಗಳುಗಳ ಹಿಂದೆ ಸಂಗರೆಡ್ಡಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಆರೋಪಿ ಪ್ರಕಾಶ್ ಮತ್ತು ಮಂದಾರಿಕಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈಗಾಗಲೇ ಪ್ರಕಾಶ್ಗೆ ಮದುವೆಯಾಗಿತ್ತು. ಇವರಿಬ್ಬರ ಅನೈತಿಕ ಸಂಬಂಧ ಎರಡು ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಮಾಡಿದ ನಂತರವೂ ಮುಂದುವರಿದಿತ್ತು.
ಇತ್ತೀಚೆಗೆ ಮಂದಾರಿಕಾ ಪ್ರಕಾಶ್ ನನ್ನು ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದರು. ಜೊತೆಗೆ ಈ ವಿಚಾರದ ಬಗ್ಗೆ ಇಬ್ಬರ ನಡುವೆ ಜಗಳ ನಡೆಯುತಿತ್ತು. ಇದರಿಂದ ಬೇಸತ್ತ ಆರೋಪಿ ಪ್ರಕಾಶ್ ಕೊಲೆ ಮಾಡಲು ಪ್ಲಾನ್ ಮಾಡಿ ಸೋಮವಾರ ಕಾರಿನಲ್ಲಿ ಹೊರಗಡೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದರು.
ಸದ್ಯಕ್ಕೆ ಪೊಲೀಸರು ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕಾಶ್ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.