ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ದಾಳಿ- ಅಡ್ಡೆಯಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ ಅರೆಸ್ಟ್

Public TV
1 Min Read
BJP Prostitution

ರಾಯಚೂರು: ಜಿಲ್ಲೆಯ ಸಿಂಧನೂರು ನಗರ ಪೊಲೀಸರು ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಅಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನೋರ್ವರನ್ನು ಬಂಧಿಸಿದ್ದಾರೆ.

ಸಿಂಧನೂರು ತಾಲೂಕು ಬಿಜೆಪಿ ಎಸ್‍ಸಿ ಘಟಕದ ಅಧ್ಯಕ್ಷ ಹುಸೇನಪ್ಪ ಶ್ರೀಪುರಂ ಬಂಧಿತ ಮುಖಂಡ. ನಗರದ ಆದರ್ಶ ಕಾಲೋನಿಯಲ್ಲಿ ಅಕ್ರಮ ದಂಧೆ ನಡೆಸಲಾಗ್ತಿದೆ ಅಂತ ಸಾರ್ವಜನಿಕರು ಪೊಲೀಸರಿಗೆ ದೂರು ಸಲ್ಲಿಸಿದ್ದರು.

BJP Leader Arrest

ಹೀಗಾಗಿ ಖಚಿತ ಮಾಹಿತಿ ಮತ್ತು ದೂರಿನ ಅನ್ವಯ ಪೊಲೀಸರು ಅಡ್ಡೆಯ ಮೇಲೆ ರಾತ್ರಿ 8 ಗಂಟೆಯ ಸುಮಾರಿಗೆ ದಾಳಿ ನಡೆಸಿದ್ದರು. ಈ ವೇಳೆ ಮನೆಯಲ್ಲಿದ್ದ ಹುಸೇನಪ್ಪನನ್ನು ಸಿಂಧನೂರು ಪೊಲೀಸರು ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಹುಸೇನಪ್ಪ ಈ ವೇಶ್ಯಾವಾಟಿಕೆಯನ್ನ ನಡೆಸುತ್ತಿದ್ದ ಅಂತ ಹೇಳಲಾಗುತ್ತಿದ್ದು, ಪೊಲೀಸರು ಈ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *