Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೊರೊನಾ ಬರುತ್ತೆ: ಸಂಸದ ಜಿ.ಎಂ ಸಿದ್ದೇಶ್ವರ್ ಪುತ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೊರೊನಾ ಬರುತ್ತೆ: ಸಂಸದ ಜಿ.ಎಂ ಸಿದ್ದೇಶ್ವರ್ ಪುತ್ರಿ

Corona

ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೊರೊನಾ ಬರುತ್ತೆ: ಸಂಸದ ಜಿ.ಎಂ ಸಿದ್ದೇಶ್ವರ್ ಪುತ್ರಿ

Public TV
Last updated: April 8, 2020 9:37 pm
Public TV
Share
3 Min Read
DVG ASHWINI
SHARE

– ಕೋವಿಡ್ 19ನಿಂದ ಭಯಪಡೋ ಅಗತ್ಯವಿಲ್ಲ
– ಹೊರದೇಶದಿಂದ ಬಂದವರು ಪ್ಲೀಸ್ ಟೆಸ್ಟ್ ಮಾಡಿಸ್ಕೊಳ್ಳಿ
– ಆಸ್ಪತ್ರೆಯಲ್ಲಿದ್ದ ಸಂದರ್ಭ ವಿವರಿಸಿದ ಅಶ್ವಿನಿ

ದಾವಣಗೆರೆ: ಜಿಲ್ಲೆಯ ಸಂಸದ ಜಿ.ಎಂ ಸಿದ್ದೇಶ್ವರ್ ಪುತ್ರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ಗುಣಮುಖರಾಗಿ ತಾನು ಗೆದ್ದ ಕಥೆಯನ್ನು ಬಿಚ್ಚಿಟ್ಟಿದ್ದಾರೆ.

CORONA

ಈ ಸಂಬಂಧ ವಿಡಿಯೋ ಮಾಡಿರುವ ಅಶ್ವಿನಿ, ಗಯಾನಾ ದೇಶದಿಂದ ಮಾರ್ಚ್ 20ರಂದು ಭಾರತಕ್ಕೆ ಬಂದಿದ್ದೇನೆ. ಗಯಾನದಲ್ಲಿ ಚುನಾವಣೆಯ ಪ್ರಯುಕ್ತ ಜನಾಂಗೀಯ ಹಿಂಸೆ ನಡೆಯುತ್ತಾ ಇರೋ ಕಾರಣದಿಂದ ಮಕ್ಕಳ ಜೊತೆ ಭಾರತಕ್ಕೆ ಬರಬೇಕಾದ ಅನಿವಾರ್ಯ ಸ್ಥಿತಿ ಬಂತು. ಇಲ್ಲಿ ಬಂದು ಹೋಂ ಕ್ವಾರಂಟೈನ್ ಆಗಿ ಇದ್ದೆವು. ಯಾರ ಜೊತೆಯೂ ಸಂಪರ್ಕದಲ್ಲಿ ಇರಲಿಲ್ಲ ಎಂದಿದ್ದಾರೆ.

ಎರಡು ದಿನದ ಬಳಿಕ ತಂದೆ ಕೋವಿಡ್ 19 ಟೆಸ್ಟ್ ಮಾಡಿಸಿದ್ರು. ಈ ವೇಳೆ ವರದಿಯಲ್ಲಿ ನನ್ನದು ಪಾಸಿಟಿವ್, ಮಕ್ಕಳದ್ದು ನೆಗೆಟಿವ್ ಬಂತು. ಅದಾದ ಬಳಿಕ ದಾವಣಗೆರೆ ಜಿಲ್ಲಾಧಿಕಾರಿ ಮತ್ತು ಎಸ್‍ಪಿ ಜೊತೆ ತಂದೆ ಮಾತಾಡಿ ಪ್ರೋಟೋಕಾಲ್ ಪ್ರಕಾರ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಎಸ್‍ಎಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಅಲ್ಲಿ ಐಸೋಲೇಷನ್ ವಾರ್ಡಿನಲ್ಲಿದ್ದೆ. ಅಲ್ಲಿ ನನ್ನನ್ನು ಪ್ರತಿಯೊಬ್ಬರೂ ತುಂಬಾನೆ ಚೆನ್ನಾಗಿ ನೋಡಿಕೊಂಡರು ಅಂತ ತಿಳಿಸಿದ್ದಾರೆ.

DVG ASHWINI 1

ಕೋವಿಡ್ 19 ಬಂದ ತಕ್ಷಣ ಏನೋ ಒಂದು ದೊಡ್ಡ ರೋಗ ಬಂದಿದೆ ಎಂದು ಭಯಪಡುವ ಅವಶ್ಯಕತೆ ಇಲ್ಲ. ನನಗೆ ಯಾವುದೇ ರೀತಿಯ ಲಕ್ಷಣಗಳು ಇರಲಿಲ್ಲ. ಆದರೆ ಆಸ್ಪತ್ರೆಗೆ ದಾಖಲಾದ ಬಳಿಕ ಅವರು ಕೊಟ್ಟ ಔಷಧಿಗಳ ಕಾರಣವೋ ಗೊತ್ತಿಲ್ಲ. ಆದರೆ ಯಾವುದೇ ರೀತಿಯ ನೆಗಡಿ, ಜ್ವರ, ಕೆಮ್ಮು ಏನೂ ಇರಲಿಲ್ಲ. ಹೀಗಾಗಿ ಏನೂ ಲಕ್ಷಣಗಳಿಲ್ಲದೆ ಎಷ್ಟೋ ಜನ ಮನೆಯಲ್ಲಿ ಎಲ್ಲಾ ಕಡೆ ಓಡಾಡಿಕೊಂಡಿದ್ದು, ಬೇರೆಯವರಿಗೆ ಹಬ್ಬಿಸುತ್ತಿದ್ದೀರಾ ಎಂಬುದನ್ನು ನಾವು ಇಲ್ಲಿ ಗಮನದಲ್ಲಿಟ್ಟುಕೊಳ್ಳಬೇಕು. ಈ ಕಾಯಿಲೆ ಬೇಗ ಹರಡುತ್ತೆ. ಆದರೆ ನಿಮಗೇನೂ ತೊಂದರೆ ಮಾಡಲ್ಲ. ಹೀಗಾಗಿ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

coronavirus 1 1000x600 1

ಆಸ್ಪತ್ರೆಯಲ್ಲಿ 14 ದಿನ ಒಬ್ಬರೇ ಇರುವುದರಿಂದ ಬಹಳಷ್ಟು ಬೇಜಾರಾಗುತ್ತೆ. ಈ ಸಂದರ್ಭದಲ್ಲಿ ನನಗೆ ಬೆನ್ನೆಲುಬಾಗಿ ನಿಂತಿದ್ದು ನನ್ನ ಕುಟುಂಬ. ಪ್ರತಿ ದಿನ ಫೋನ್ ಮಾಡಿ ನನ್ನ ವಿಚಾರಿಸಿಕೊಳ್ಳುತ್ತಿದ್ದರು. ಅಲ್ಲದೆ ಗೆಳೆಯರು ಕೂಡ ಫೋನ್ ಮಾಡಿ ನಗಿಸುತ್ತಿದ್ದರು. ಇಷ್ಟು ಮಾತ್ರವಲ್ಲದೆ ನಾನು ಯೋಗ, ಪ್ರಾಣಯಾಮ ಮಾಡುತ್ತಿದ್ದೆ. ಇದರಿಂದ ಬಹಳಷ್ಟು ಉಪಯೋಗವಾಗುತ್ತೆ. ಹೀಗಾಗಿ ಪ್ರತಿಯೊಬ್ಬರೂ ಮನೆಯಲ್ಲಿ ಪ್ರಾಣಯಾಮ ಮಾಡಿ ಎಂದು ಸಲಹೆಯಿತ್ತಿದ್ದಾರೆ.

DVG 1

ಆಸ್ಪತ್ರೆಯಲ್ಲಿ ಸಮಯ ಕಳೆಯಲು ಪುಸ್ತಕ, ಮ್ಯೂಸಿಕ್ ಕೇಳೋದು ಹಾಗೆಯೇ ಮೊಬೈಲ್ ನಲ್ಲೇ ಸಿನಿಮಾಗಳನ್ನು ನೋಡಿಕೊಂಡು ಸಮಯ ಕಳೆಯಬೇಕಾಗುತ್ತೆ. ಈ 14 ದಿನ ನಮ್ಮ ಸಂಬಂಧಿಕರು ಬಂದು ಭೇಟಿಯಾಗಲು ಸಾಧ್ಯವಿಲ್ಲ. ದೇಶದ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಯವರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿರುವ ರೋಗಗಳಿಗೆ ಕೂಡ ಮಾನಸಿಕ ತೊಂದರೆ ಇದ್ದರೆ ಅಂತವರಿಗೆ ನಿಮ್ಹಾನ್ಸ್ ನಿಂದ ವೈದ್ಯರು ಕಾಲ್ ಮಾಡಿ ಮಾತಾಡ್ತಾರೆ. ಅಲ್ಲದೆ ಕುಟುಂಬದ ಸದಸ್ಯರಿಗೂ ತೊಂದರೆ ಇದ್ದರೆ ಮಾತಾಡಿಸ್ತಾರೆ ಎಂದು ವಿವರಿಸಿದ್ದಾರೆ.

Corona Virus 6

ದೈಹಿಕ ಶಕ್ತಿ ಎಷ್ಟು ಮುಖ್ಯವೋ ಕೊರೊನಾ ವೈರಸ್ ಜೊತೆ ಹೋರಾಡಿ ಗೆಲ್ಲಲು ಮಾನಸಿಕ ಸ್ಥೈರ್ಯ ಕೂಡ ಅಷ್ಟೇ ಮುಖ್ಯವಾಗುತ್ತದೆ. ಹೀಗಾಗಿ ನಾವು ಯಾವತ್ತೂ ಶಾಂತರಾಗಿರಬೇಕು, ಗಾಬರಿಗೊಳಗಾಗಬಾರದು. ಒಟ್ಟಿನಲ್ಲಿ ಇದರಿಂದ ಏನೂ ತೊಂದರೆನೇ ಇಲ್ಲ. 14 ದಿನ ಯಾರನ್ನೂ ಬೇಟಿಯಾಗಲು ಸಾಧ್ಯವಿಲ್ಲ ಅನ್ನೋ ಬೇಜಾರು ಬಿಟ್ಟರೆ ಇನ್ನೇನೂ ಇರಲ್ಲ ಎಂದು ತಿಳಿಸಿದ್ದಾರೆ.

SVG ASHWINI 1

ನಮ್ಮ ಸರ್ಕಾರ ಒಳ್ಳೊಳ್ಳೆಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ಯಾರೇ ಹೊರದೇಶದಿಂದ ಬಂದವರು ದಯವಿಟ್ಟು ಟೆಸ್ಟ್ ಮಾಡಿಸಿಕೊಳ್ಳಿ. ಕೊರೊನಾ ಲಕ್ಷಣಗಳು ಇರಲೇಬೇಕು ಅಂತ ಏನಿಲ್ಲ. ಇಲ್ಲದಿದ್ದರೂ ಪಾಸಿಟಿವ್ ಬರುತ್ತೆ. ಮನೆಯಲ್ಲಿ ವಯಸ್ಸಾದವರಿದ್ದರೆ ದಯವಿಟ್ಟು ಅವರಿಂದ ದೂರ ಇರಿ. ನಿಮಗೆ ಏನು ಲಕ್ಷಣಗಳಿಲ್ಲದಿದ್ದರೂ ಇದರಿಂದ ಅವರಿಗೆ ಅಪಾಯವಿರುತ್ತೆ. ದಯವಿಟ್ಟು ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಒಂದು ವೇಳೆ ಕೊರೊನಾ ಪಾಸಿಟಿವ್ ಬಂದರೂ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳುತ್ತಾ ದಾವಣಗೆರೆ ಡಿಸಿ, ಪೊಲೀಸ್ ಸಿಬ್ಬಂದಿ, ವೈದ್ಯರು, ನರ್ಸ್ ಎಲ್ಲರಿಗೂ ಧನ್ಯವಾದ ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

TAGGED:AshwiniCorona Virusdavanagereg m siddeshwarPublic TVಅಶ್ವಿನಿಕೊರೊನಾ ವೈರಸ್ಜಿ.ಎಂ.ಸಿದ್ದೇಶ್ವರ್ದಾವಣಗೆರೆಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood
Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories

You Might Also Like

Bheemanna Khandre Eshwar Khandre
Bidar

ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ

Public TV
By Public TV
36 minutes ago
Yatnal
Districts

ಸಿಎಂ ಎದುರೇ ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ – ಯತ್ನಾಳ್

Public TV
By Public TV
55 minutes ago
GBA
Bengaluru City

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

Public TV
By Public TV
1 hour ago
pavithra gowda
Bengaluru City

ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

Public TV
By Public TV
1 hour ago
Skill Sonics Company Non Kannadiga HR
Bengaluru City

PUBLiC TV Impact | ನಮ್ಮಿಂದ ತಪ್ಪಾಗಿದೆ ಕ್ಷಮಿಸಿ – ಕನ್ನಡಿಗರ ಕ್ಷಮೆಯಾಚಿಸಿದ ಖಾಸಗಿ ಕಂಪನಿ

Public TV
By Public TV
1 hour ago
goraguntepalya nayandahalli Ring Road flyover is becoming an accident zone 1
Bengaluru City

ಆಕ್ಸಿಡೆಂಟ್ ವಲಯವಾಗುತ್ತಿದೆ ಬೆಂಗಳೂರಿನ ರಿಂಗ್‌ ರೋಡ್‌ ಫ್ಲೈಓವರ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?