Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತೆಂದು ಸರ್ಕಾರದಿಂದ ಸುಳ್ಳು ಲೆಕ್ಕ: ರಾಮಲಿಂಗಾರೆಡ್ಡಿ

Public TV
Last updated: September 11, 2021 8:49 pm
Public TV
Share
3 Min Read
ramalinga reddy
SHARE

ಬೆಂಗಳೂರು: ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾವಿನ ಸುಳ್ಳು ಲೆಕ್ಕ ಕೊಡುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರ ಪತ್ರಿಕಾಗೋಷ್ಠಿ. https://t.co/QzXzEXZnrx

— Karnataka Congress (@INCKarnataka) September 11, 2021

ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮಾಹಿತಿ ಪ್ರಕಾರ ಕೋವಿಡ್ ನಲ್ಲಿ ಸತ್ತಿರುವವರ ಸಂಖ್ಯೆ 37,318. ರಾಜ್ಯದಲ್ಲಿ ಜನನ ಹಾಗೂ ಮರಣ ಇಲಾಖೆಯ ಅಧಿಕೃತ ಅಂಕಿ ಅಂಶ ಹಾಗೂ ವರ್ಷವಾರು ಮೃತರ ಗಣತಿ ಪ್ರಕಾರ, 2018ರಲ್ಲಿ ಸತ್ತವರ ಸಂಖ್ಯೆ 4,83,511, 2019ರಲ್ಲಿ 5,08,584, 2020ರಲ್ಲಿ 5,51,808 ಜನ ಸತ್ತಿದ್ದಾರೆ. ಪ್ರತಿ ವರ್ಷ ಸತ್ತವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. 2021ರ ಆರಂಭಿಕ ಏಳು ತಿಂಗಳು ಅಂದರೆ ಜುಲೈ ತಿಂಗಳವರೆಗೂ 4.21 ಲಕ್ಷ ಜನ ಸತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಲಬುರಗಿ, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸಾಧ್ಯತೆ: ಸಚಿವ ಅಶೋಕ್

ಪ್ರತಿ ವರ್ಷ ಆರಂಭಿಕ ಏಳು ತಿಂಗಳ ಸಾವಿನ ಸಂಖ್ಯೆ ನೋಡುವುದಾದರೆ, 2018ರಲ್ಲಿ 2.69 ಲಕ್ಷ ಜನ ಮೃತಪಟ್ಟರೆ, 2019ರಲ್ಲಿ 2.79 ಲಕ್ಷ ಜನ ಸತ್ತಿದ್ದಾರೆ, 2020ರಲ್ಲಿ 2.64 ಲಕ್ಷ ಜನ ಸತ್ತಿದ್ದರು. 2021ರಲ್ಲಿ 4,26,790 ಜನ ಸತ್ತಿದ್ದಾರೆ. ಅಂದರೆ 1.62 ಲಕ್ಷ ಜನ ಹೆಚ್ಚುವರಿಯಾಗಿ ಸಾವನ್ನಪ್ಪಿದ್ದಾರೆ. ಈ 1.62 ಲಕ್ಷ ಜನ ಹೇಗೆ ಸತ್ತಿದ್ದಾರೆ? ರಾಜ್ಯದಲ್ಲಿ ಸುನಾಮಿ, ಭೂಕಂಪ, ಚಂಡಮಾರುತ ಬಂದಿತ್ತೇ? ಕಾಲರಾ, ಪ್ಲೇಗ್ ನಂತಹ ಬೇರೆ ಕಾಯಿಲೆಗಳು ಬಂದಿತ್ತೆ ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷವೇ ಕೋವಿಡ್ ನಿಂದ 30 ಸಾವಿರ ಜನ ಸತ್ತಾಗ ಕೇವಲ 3 ಸಾವಿರ ಜನ ಎಂದು ಲೆಕ್ಕ ತೋರಿಸಿದ್ದರು. ಸರ್ಕಾರ ಕೋವಿಡ್ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ ನೀಡುತ್ತಿದೆ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ. ಸರ್ಕಾರ ಹೇಗೆ ಈ ಸುಳ್ಳು ಲೆಕ್ಕ ನೀಡುತ್ತಿದೆ ಎಂಬುದು ತಿಳಿಯಬೇಕಾದರೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತರಾಗಿ ಚಿಕಿತ್ಸೆ ಪಡೆದವರು, ಟಿಬಿ, ಕ್ಯಾನ್ಸರ್, ಹೃದಯ ಸಂಬಂಧಿ, ಬಿಪಿ, ಆರ್ಥರೈಟಿಸ್, ಪಾಶ್ರ್ವವಾಯು, ಸೇರಿದಂತೆ ಇತರೆ ಅನಾರೋಗ್ಯವಿರುವವರು ಸತ್ತರೆ ಕೋವಿಡ್ ಸಾವು ಎಂದು ಮರಣಪತ್ರ ನೀಡುವುದಿಲ್ಲ. ಸೋಂಕಿತರು ನಂತರ ನೆಗೆಟಿವ್ ಬಂದರೆ ಅವರನ್ನು ಕೋವಿಡ್ ಎಂದು ಪರಿಗಣಿಸುವುದಿಲ್ಲ. ಹೀಗೆ ಸರ್ಕಾರಗಳು ತಪ್ಪು ಸಾವಿನ ಲೆಕ್ಕ ನೀಡುತ್ತಿದೆ ಎಂದು ಆರೋಪಿಸಿದರು.

ಈ ಯಾವುದೇ ಕಾಯಿಲೆ ಇಲ್ಲದವರು ಕೋವಿಡ್ ನಿಂದ ಸತ್ತಿದ್ದರೆ ಅದನ್ನು ಮಾತ್ರ ಕೋವಿಡ್ ಸಾವು ಎಂದು ಪರಿಗಣಿಸಿದ್ದಾರೆ. ಆ ರೀತಿ ಸತ್ತಿರುವವರು 37 ಸಾವಿರ ಜನ ಇದ್ದಾರೆ.ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ 42.80 ಲಕ್ಷ ಜನ ಭಾರತದಲ್ಲಿ ಕೋವಿಡ್ ನಿಂದ ಸತ್ತಿದ್ದಾರೆ ಎಂದು ವರದಿ ನೀಡಿದೆ. ಮೃತರಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಆದರೆ ಸರ್ಕಾರ ಕೇವಲ 1 ಲಕ್ಷ ಪರಿಹಾರ ಘೋಷಿಸಿದ್ದು, ಅದರಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಪರಿಹಾರ ಇಲ್ಲ, ಕುಟುಂಬದಲ್ಲಿ ಒಬ್ಬರಿಗೆ, ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಪರಿಹಾರ ಎಂಬ ಷರತ್ತುಗಳನ್ನು ಹಾಕಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಆಪರೇಷನ್‌ ಕಲಬುರಗಿ: ಖರ್ಗೆ, ದೇವೇಗೌಡರು ಚರ್ಚಿಸಿದ್ದಾರೆ ಎಂದ ಡಿ.ಕೆ. ಶಿವಕುಮಾರ್

ದೇಶದಲ್ಲಿ 41 ಲಕ್ಷ ಜನ ಸತ್ತಿರುವುದನ್ನು ಮುಚ್ಚಿಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿವೆ. ಕೋವಿಡ್ ಮೃತರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿ ತಾಂತ್ರಿಕವಾಗಿ ಮಾರ್ಗಸೂಚಿ ಹೊರಡಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಈ ಅಂಕಿ ಅಂಶಗಳು ಕೇವಲ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟವರ ಸಂಖ್ಯೆಯಾದರೆ, ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲಿ ಮೃತಪಟ್ಟವರ ಸಂಖ್ಯೆ ಬೇರೆಯಾಗಿದೆ ಎಂದರು.

ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ತನ್ನ ವೈಫಲ್ಯ ಮುಚ್ಚಿಹಾಕಲು ಸುಳ್ಳು ಸಾವಿನ ಲೆಕ್ಕ ನೀಡುತ್ತಿದೆ. ಅಧಿವೇಶನದಲ್ಲಿ ಕೋವಿಡ್ ವಿಚಾರ ಬಂದಾಗ ಈ ಎಲ್ಲ ವಿಚಾರವೂ ಪ್ರಸ್ತಾಪವಾಗಲಿದೆ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ಹೊರಹಾಕಿದರು.

TAGGED:bjpcongressCorona VirusdeathgovernmentmiscalculationPublic TVramalingareddyಕಾಂಗ್ರೆಸ್ಕೊರೊನಾ ವೈರಸ್ತಪ್ಪು ಲೆಕ್ಕಪಬ್ಲಿಕ್ ಟಿವಿಬಿಜೆಪಿರಾಮಲಿಂಗಾರೆಡ್ಡಿಸರ್ಕಾರಸಾವು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ramya made reels for Param Sundari Music
ಪರಮ ಸುಂದರಿಯಾದ ರಮ್ಯಾ!
Cinema Latest Sandalwood
SS David
ಹೃದಯಾಘಾತ – ಸಿನಿಮಾ ರೈಟರ್ ಎಸ್.ಎಸ್ ಡೇವಿಡ್ ನಿಧನ
Cinema Latest Sandalwood
Chikkanna
ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ
Cinema Latest Main Post Mandya Mysuru Sandalwood
Rachita Ram Bindi
ಹೆಣ್ಣಿಗೆ ಬಿಂದಿ ಅಂದ ಎಂದ ರಚ್ಚು!
Cinema Latest Top Stories
Sudeep 3
ಬರ್ತ್‌ಡೇ ಪ್ರಯುಕ್ತ ಸುದೀಪ್‌ ಸಿಡಿಪಿ ರಿಲೀಸ್ ಮಾಡಿದ ತ್ರಿವಳಿ ಸ್ಟಾರ್ಸ್‌
Cinema Latest Sandalwood Top Stories

You Might Also Like

hulimavu murder
Bengaluru City

ಅನೈತಿಕ ಸಂಬಂಧ ಶಂಕೆ – ಪೆಟ್ರೋಲ್ ಸುರಿದು 26ರ ಲಿವ್ ಇನ್ ಗೆಳತಿಯ ಹತ್ಯೆಗೈದ 52ರ ವ್ಯಕ್ತಿ

Public TV
By Public TV
8 minutes ago
Afghanistan Earthquake
Latest

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 622 ಮಂದಿ ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
15 minutes ago
Narendra Modi Vladimir Putin Xi Jinping
Latest

ಪುಟಿನ್‌, ಮೋದಿ, ಜಿನ್‌ಪಿಂಗ್‌ ಮಾತುಕತೆ – Video Of The Day ಎಂದ ರಷ್ಯಾ

Public TV
By Public TV
40 minutes ago
K Gopalayya
Bengaluru City

ಧರ್ಮಸ್ಥಳ ಪ್ರಕರಣ; ಎನ್‌ಐಎ ತನಿಖೆಗೆ ಶಾಸಕ ಗೋಪಾಲಯ್ಯ ಒತ್ತಾಯ

Public TV
By Public TV
46 minutes ago
BMTC Bus Driver Fight
Bengaluru City

ನಡುರಸ್ತೆಯಲ್ಲೇ ಬಸ್ ನಿಲ್ಲಿಸಿ BMTC ಚಾಲಕರಿಬ್ಬರ ಕಿತ್ತಾಟ – ವಿಡಿಯೋ ಹರಿಬಿಟ್ಟ ಪ್ರಯಾಣಿಕರು

Public TV
By Public TV
53 minutes ago
man collapses dies of heart attack while ganesh procession in mandya 2
Districts

ಮಂಡ್ಯ | ಗಣೇಶ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ ಕುಣಿಯುತ್ತಿದ್ದ ವ್ಯಕಿ ಹೃದಯಾಘಾತಕ್ಕೆ ಬಲಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?