ದೊಡ್ಡಬಳ್ಳಾಪುರ: ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆಯಿಂದ ಎಸ್ಕೇಪ್ ಆಗಿ ಸಿಬ್ಬಂದಿಗೆ ತಲೆ ಬಿಸಿ ನೀಡಿದ ಘಟನೆ ದೊಡ್ಡಬಳ್ಳಾಪುರ ಸಮೀಪದ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ.
ಜ.3 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೊಡ್ಡಬಳ್ಳಾಪುರದ ಮಣಿಪಾಲ್ ಆಸ್ಪತ್ರೆಗೆ ರವಾನೆಯಾಗಿದ್ದ 26 ವರ್ಷದ ಸೋಂಕಿತ ವ್ಯಕ್ತಿ ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳಲು ವೃದ್ಧೆಯ ರಂಪಾಟ
ಬೆಳಗ್ಗೆ 11 ಗಂಟೆಗೆ ರೋಗಿ ಆಸ್ಪತ್ರೆಗೆ ದಾಖಲಾಗಿದ್ದು, 11:55 ಕ್ಕೆ ಆತ ಎಸ್ಕೇಪ್ ಆಗಿದ್ದಾನೆ. ಸೋಂಕಿತನನ್ನು ಆಸ್ಪತ್ರೆಯಲ್ಲಿ ಹುಡುಕಿದಾಗ ಆತ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.
ಸೋಂಕಿತನ ಮಾಹಿತಿಯನ್ನು ಆಧರಿಸಿ ಆಸ್ಪತ್ರೆಯ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೊರೊನಾ ಸೋಂಕಿತರು 7 ದಿನದಲ್ಲಿ ರಿಕವರಿ ಹೊಂದಿದ್ರೂ, 14 ದಿನ ಕ್ವಾರಂಟೈನ್ ಕಡ್ಡಾಯ: WHO