Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ, ಇನ್ನೂ ಹಲವು ಅಲೆಗಳು ಬರಬಹುದು: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ, ಇನ್ನೂ ಹಲವು ಅಲೆಗಳು ಬರಬಹುದು: ಸುಧಾಕರ್

Bengaluru City

ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ, ಇನ್ನೂ ಹಲವು ಅಲೆಗಳು ಬರಬಹುದು: ಸುಧಾಕರ್

Public TV
Last updated: March 16, 2022 3:07 pm
Public TV
Share
3 Min Read
CORONA VACCINATION
SHARE

ಬೆಂಗಳೂರು: ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣ ಮಾಡಲಾಗಿದೆ. ಕೊರೊನಾ ನಿಯಂತ್ರಣದಲ್ಲಿ ಸಾಗಬೇಕಾದ ಹಾದಿ ಇನ್ನೂ ದೂರವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

CORONA VACCINATION 4

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಸ್ಥೆಯಲ್ಲಿ, 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಲಸಿಕಾಕರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಲಸಿಕೆ ಮೂಲಕ ಪೋಷಕರ ಆತಂಕ ದೂರ ಮಾಡುತ್ತಿದೆ. 12 ರಿಂದ 14 ವರ್ಷ ಮಕ್ಕಳು ಈ ಲಸಿಕೆ ತೆಗೆದುಕೊಂಡರೆ ಕೊರೊನಾ ವಿರುದ್ಧ ಹೋರಾಡಲು ಶಕ್ತಿ ಪಡೆಯಬಹುದು. ರಾಜ್ಯದಲ್ಲಿ 20 ಲಕ್ಷ ಮಕ್ಕಳಿಗೆ ಈ ಲಸಿಕೆ ನೀಡಲಾಗುವುದು. ಸರ್ಕಾರದ ಕ್ರಮಗಳಿಗೆ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಜಬ್ ವಿವಾದ, ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್ – ಹೋಳಿ ರಜೆ ಬಳಿಕ ವಿಚಾರಣೆ

ಕೋವಿಡ್ ಲಸಿಕೆ ಪಡೆದವರು ಕೂಡ ಮುಂಜಾಗೃತಾ ಕ್ರಮಗಳನ್ನು ಮರೆಯುವ ಹಾಗಿಲ್ಲ. ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣಕ್ಕೆ ಬಂದಿದೆ. ಈ ವಿಚಾರದಲ್ಲಿ ಸಾಗಬೇಕಾದ ಹಾದಿ ದೂರವಿದೆ. ಇನ್ನೂ ಹಲವು ಅಲೆಗಳು ಬರಬಹುದು ಎಂಬ ಆತಂಕವಿದೆ. ಲಸಿಕಾಕರಣದಿಂದ ಅದೆಲ್ಲವನ್ನೂ ದೂರ ಮಾಡಬಹುದು. ಮಾಸ್ಕ್, ಭೌತಿಕ ಅಂತರದ ಮೂಲಕ ಮುಂಜಾಗೃತಾ ಕ್ರಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

CORONA VACCINATION 1

ರಾಜ್ಯದಲ್ಲಿ 10 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ 180 ಕೋಟಿಗೂ ಹೆಚ್ಚು ಡೋಸ್ ನೀಡಲಾಗಿದೆ. ಈ ಸಾಧನೆ ವಿಶ್ವಮಟ್ಟದಲ್ಲೇ ದೊಡ್ಡದು. ಈ ಹಿಂದೆ ಯಾವುದೇ ಲಸಿಕೆ ಕೊಟ್ಟಿದ್ದರೂ ಅದು ಕೇವಲ 4 ರಿಂದ 5 ಕೋಟಿ ಡೋಸ್ ಅಷ್ಟೇ ಇದೆ. ಆದರೆ ಕೊರೊನಾ ಲಸಿಕೆಯನ್ನು ಕಳೆದ 1 ವರ್ಷದಲ್ಲಿ 180 ಕೋಟಿ ಡೋಸ್ ನೀಡಲಾಗಿದೆ. ಭಾರತ ಕೊರೊನಾ ವಿರುದ್ಧದ ಹೋರಾಟದಲ್ಲಿ ವಿಶ್ವ ನಾಯಕನಾಗಿದೆ ಎಂದರು. ಇದನ್ನೂ ಓದಿ: ಅಗ್ಗದ ದರದಲ್ಲಿ ರಷ್ಯಾದ ಕಚ್ಚಾ ತೈಲ ಖರೀದಿಗೆ ಮುಂದಾದ ಭಾರತ- ಅಮೆರಿಕ ಹೇಳಿದ್ದೇನು?

0-12 ವರ್ಷದ ಒಳಗಿನ ಮಕ್ಕಳಿಗೂ ಮುಂದಿನ ದಿನಗಳಲ್ಲಿ ಲಸಿಕೆ ದೊರೆಯಲಿದೆ. ಎಲ್ಲವೂ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆಯಾಗಿ, ಅಧ್ಯಯನವಾಗಿ, ಪರವಾನಗಿ ತೆಗೆದುಕೊಂಡು ಜನರಿಗೆ ನೀಡಲಾಗುತ್ತಿದೆ. ಚೀನಾದ ಕೆಲ ನಗರಗಳಲ್ಲಿ ಮತ್ತು ಕೆಲ ದೇಶಗಳಲ್ಲಿ ಕೋವಿಡ್ ಹೆಚ್ಚಾದ ಬಗ್ಗೆ ಗಮನ ನೀಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಹೆಚ್ಚಾಗುತ್ತಿರುವ ದೇಶ, ನಗರಗಳ ಬಗ್ಗೆ ಮಾಹಿತಿ ಪಡೆಯುತ್ತಿವೆ ಎಂದು ತಿಳಿಸಿದರು.

CORONA VACCINATION 3

ಯುದ್ಧ ಪೀಡಿತ ಉಕ್ರೇನ್ ನಿಂದ ವಾಪಸ್ಸಾದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಜೊತೆ ವಿಚಾರ ವಿನಿಮಯ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಮತ್ತು ಶಿಕ್ಷಣಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ 18 ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಳಿ- ಎಸಿಬಿಯಿಂದ ಪ್ರಾಥಮಿಕ ಮಾಹಿತಿ ರಿಲೀಸ್‌

ಮಕ್ಕಳಿಗೆ ಹಾಗೂ ಹಿರಿಯ ನಾಗರಿಕರಿಗೆ ಲಸಿಕೆ:
ಮಾರ್ಚ್ 16 ರಿಂದ, 12-14 ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಆರಂಭವಾಗಿದೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಲಸಿಕೆ ನೀಡಲಾಗುತ್ತಿದೆ. 2010ರ ಮಾರ್ಚ್ 15 ರಂದು ಜನಿಸಿದ ಹಾಗೂ ಅದಕ್ಕೂ ಮುನ್ನ ಜನಿಸಿದ ಮಕ್ಕಳು ಇದಕ್ಕೆ ಅರ್ಹರಾಗುತ್ತಾರೆ. ಇದು ಕೋರ್ಬಿವ್ಯಾಕ್ಸ್ ಲಸಿಕೆಯಾಗಿದ್ದು, ಮೊದಲ ಡೋಸ್ ನೀಡಿದ 28 ದಿನಗಳ ನಂತರ ಎರಡನೇ ಡೋಸ್ ನೀಡಲಾಗುತ್ತದೆ.

CORONA VACCINATION 2

ರಾಜ್ಯದಲ್ಲಿ 12-14ರ ವಯೋಮಾನದ 20 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ. ಇಷ್ಟೇ ಅಲ್ಲದೆ, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಎರಡನೇ ಡೋಸ್ ಪಡೆದ 39 ವಾರ ಅಥವಾ 9 ತಿಂಗಳ ಬಳಿಕ ಅವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತದೆ. ಈ ವಯೋಮಾನದ 76.58 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ಎಂದು ಮಾಹಿತಿ ಹಂಚಿಕೊಂಡರು.

TAGGED:bengaluruCoronaCorona VirusCovid 19dr. k sudhakarkarnatakaಕೊರೊನಾಕೋರ್ಬಿವ್ಯಾಕ್ಸ್ ಲಸಿಕೆಕೋವಿಡ್‌-19ಸುಧಾಕರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
18 minutes ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
40 minutes ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
1 hour ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
2 hours ago
Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
3 hours ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?