Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ, ಇನ್ನೂ ಹಲವು ಅಲೆಗಳು ಬರಬಹುದು: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ, ಇನ್ನೂ ಹಲವು ಅಲೆಗಳು ಬರಬಹುದು: ಸುಧಾಕರ್

Bengaluru City

ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ, ಇನ್ನೂ ಹಲವು ಅಲೆಗಳು ಬರಬಹುದು: ಸುಧಾಕರ್

Public TV
Last updated: March 16, 2022 3:07 pm
Public TV
Share
3 Min Read
CORONA VACCINATION
SHARE

ಬೆಂಗಳೂರು: ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣ ಮಾಡಲಾಗಿದೆ. ಕೊರೊನಾ ನಿಯಂತ್ರಣದಲ್ಲಿ ಸಾಗಬೇಕಾದ ಹಾದಿ ಇನ್ನೂ ದೂರವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

CORONA VACCINATION 4

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಸ್ಥೆಯಲ್ಲಿ, 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಲಸಿಕಾಕರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಲಸಿಕೆ ಮೂಲಕ ಪೋಷಕರ ಆತಂಕ ದೂರ ಮಾಡುತ್ತಿದೆ. 12 ರಿಂದ 14 ವರ್ಷ ಮಕ್ಕಳು ಈ ಲಸಿಕೆ ತೆಗೆದುಕೊಂಡರೆ ಕೊರೊನಾ ವಿರುದ್ಧ ಹೋರಾಡಲು ಶಕ್ತಿ ಪಡೆಯಬಹುದು. ರಾಜ್ಯದಲ್ಲಿ 20 ಲಕ್ಷ ಮಕ್ಕಳಿಗೆ ಈ ಲಸಿಕೆ ನೀಡಲಾಗುವುದು. ಸರ್ಕಾರದ ಕ್ರಮಗಳಿಗೆ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಜಬ್ ವಿವಾದ, ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್ – ಹೋಳಿ ರಜೆ ಬಳಿಕ ವಿಚಾರಣೆ

ಕೋವಿಡ್ ಲಸಿಕೆ ಪಡೆದವರು ಕೂಡ ಮುಂಜಾಗೃತಾ ಕ್ರಮಗಳನ್ನು ಮರೆಯುವ ಹಾಗಿಲ್ಲ. ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣಕ್ಕೆ ಬಂದಿದೆ. ಈ ವಿಚಾರದಲ್ಲಿ ಸಾಗಬೇಕಾದ ಹಾದಿ ದೂರವಿದೆ. ಇನ್ನೂ ಹಲವು ಅಲೆಗಳು ಬರಬಹುದು ಎಂಬ ಆತಂಕವಿದೆ. ಲಸಿಕಾಕರಣದಿಂದ ಅದೆಲ್ಲವನ್ನೂ ದೂರ ಮಾಡಬಹುದು. ಮಾಸ್ಕ್, ಭೌತಿಕ ಅಂತರದ ಮೂಲಕ ಮುಂಜಾಗೃತಾ ಕ್ರಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

CORONA VACCINATION 1

ರಾಜ್ಯದಲ್ಲಿ 10 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ 180 ಕೋಟಿಗೂ ಹೆಚ್ಚು ಡೋಸ್ ನೀಡಲಾಗಿದೆ. ಈ ಸಾಧನೆ ವಿಶ್ವಮಟ್ಟದಲ್ಲೇ ದೊಡ್ಡದು. ಈ ಹಿಂದೆ ಯಾವುದೇ ಲಸಿಕೆ ಕೊಟ್ಟಿದ್ದರೂ ಅದು ಕೇವಲ 4 ರಿಂದ 5 ಕೋಟಿ ಡೋಸ್ ಅಷ್ಟೇ ಇದೆ. ಆದರೆ ಕೊರೊನಾ ಲಸಿಕೆಯನ್ನು ಕಳೆದ 1 ವರ್ಷದಲ್ಲಿ 180 ಕೋಟಿ ಡೋಸ್ ನೀಡಲಾಗಿದೆ. ಭಾರತ ಕೊರೊನಾ ವಿರುದ್ಧದ ಹೋರಾಟದಲ್ಲಿ ವಿಶ್ವ ನಾಯಕನಾಗಿದೆ ಎಂದರು. ಇದನ್ನೂ ಓದಿ: ಅಗ್ಗದ ದರದಲ್ಲಿ ರಷ್ಯಾದ ಕಚ್ಚಾ ತೈಲ ಖರೀದಿಗೆ ಮುಂದಾದ ಭಾರತ- ಅಮೆರಿಕ ಹೇಳಿದ್ದೇನು?

0-12 ವರ್ಷದ ಒಳಗಿನ ಮಕ್ಕಳಿಗೂ ಮುಂದಿನ ದಿನಗಳಲ್ಲಿ ಲಸಿಕೆ ದೊರೆಯಲಿದೆ. ಎಲ್ಲವೂ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆಯಾಗಿ, ಅಧ್ಯಯನವಾಗಿ, ಪರವಾನಗಿ ತೆಗೆದುಕೊಂಡು ಜನರಿಗೆ ನೀಡಲಾಗುತ್ತಿದೆ. ಚೀನಾದ ಕೆಲ ನಗರಗಳಲ್ಲಿ ಮತ್ತು ಕೆಲ ದೇಶಗಳಲ್ಲಿ ಕೋವಿಡ್ ಹೆಚ್ಚಾದ ಬಗ್ಗೆ ಗಮನ ನೀಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಹೆಚ್ಚಾಗುತ್ತಿರುವ ದೇಶ, ನಗರಗಳ ಬಗ್ಗೆ ಮಾಹಿತಿ ಪಡೆಯುತ್ತಿವೆ ಎಂದು ತಿಳಿಸಿದರು.

CORONA VACCINATION 3

ಯುದ್ಧ ಪೀಡಿತ ಉಕ್ರೇನ್ ನಿಂದ ವಾಪಸ್ಸಾದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಜೊತೆ ವಿಚಾರ ವಿನಿಮಯ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಮತ್ತು ಶಿಕ್ಷಣಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ 18 ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಳಿ- ಎಸಿಬಿಯಿಂದ ಪ್ರಾಥಮಿಕ ಮಾಹಿತಿ ರಿಲೀಸ್‌

ಮಕ್ಕಳಿಗೆ ಹಾಗೂ ಹಿರಿಯ ನಾಗರಿಕರಿಗೆ ಲಸಿಕೆ:
ಮಾರ್ಚ್ 16 ರಿಂದ, 12-14 ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಆರಂಭವಾಗಿದೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಲಸಿಕೆ ನೀಡಲಾಗುತ್ತಿದೆ. 2010ರ ಮಾರ್ಚ್ 15 ರಂದು ಜನಿಸಿದ ಹಾಗೂ ಅದಕ್ಕೂ ಮುನ್ನ ಜನಿಸಿದ ಮಕ್ಕಳು ಇದಕ್ಕೆ ಅರ್ಹರಾಗುತ್ತಾರೆ. ಇದು ಕೋರ್ಬಿವ್ಯಾಕ್ಸ್ ಲಸಿಕೆಯಾಗಿದ್ದು, ಮೊದಲ ಡೋಸ್ ನೀಡಿದ 28 ದಿನಗಳ ನಂತರ ಎರಡನೇ ಡೋಸ್ ನೀಡಲಾಗುತ್ತದೆ.

CORONA VACCINATION 2

ರಾಜ್ಯದಲ್ಲಿ 12-14ರ ವಯೋಮಾನದ 20 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ. ಇಷ್ಟೇ ಅಲ್ಲದೆ, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಎರಡನೇ ಡೋಸ್ ಪಡೆದ 39 ವಾರ ಅಥವಾ 9 ತಿಂಗಳ ಬಳಿಕ ಅವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತದೆ. ಈ ವಯೋಮಾನದ 76.58 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ಎಂದು ಮಾಹಿತಿ ಹಂಚಿಕೊಂಡರು.

TAGGED:bengaluruCoronaCorona VirusCovid 19dr. k sudhakarkarnatakaಕೊರೊನಾಕೋರ್ಬಿವ್ಯಾಕ್ಸ್ ಲಸಿಕೆಕೋವಿಡ್‌-19ಸುಧಾಕರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
6 minutes ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
20 minutes ago
TUMBAIL 00000 00000
Latest

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ – ಏನಿದು ಹೊಸ ರೂಲ್ಸ್‌?

Public TV
By Public TV
28 minutes ago
RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
8 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
8 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?