Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಅಸ್ತ್ರ – ಐಸಿಎಂಆರ್ ಅನುಮತಿ, ಶೀಘ್ರದಲ್ಲಿ ಆರಂಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಅಸ್ತ್ರ – ಐಸಿಎಂಆರ್ ಅನುಮತಿ, ಶೀಘ್ರದಲ್ಲಿ ಆರಂಭ

Corona

ಕೊರೊನಾ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಅಸ್ತ್ರ – ಐಸಿಎಂಆರ್ ಅನುಮತಿ, ಶೀಘ್ರದಲ್ಲಿ ಆರಂಭ

Public TV
Last updated: April 16, 2020 4:18 pm
Public TV
Share
2 Min Read
Corona Virus 2
SHARE

ನವದೆಹಲಿ: ಭಾರತದಲ್ಲಿ ಪ್ಲಾಸ್ಮಾ ಥೆರಪಿ ಆರಂಭಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು(ಐಸಿಎಂಆರ್) ಅನುಮತಿ ನೀಡಿದ್ದು ಕೇರಳದಲ್ಲಿ ಮೊದಲು ಪ್ರಾಯೋಗಿಕವಾಗಿ ಆರಂಭಿಸಲಿದ್ದು ದೇಶದ್ಯಾಂತ ಎಲ್ಲ ಕೊರೊನಾ ಆಸ್ಪತ್ರೆಗಳಲ್ಲಿ ಶೀಘ್ರದಲ್ಲಿ ಆರಂಭವಾಗುವ ಸಾಧ್ಯತೆ ಇದೆ.

ಕೊರನಾಗೆ ಲಸಿಕೆ ಇಲ್ಲದ ಹಿನ್ನೆಲೆ ಚೀನಾ ಅಮೆರಿಕಾ ಬ್ರಿಟನ್ ದೇಶಗಳಲ್ಲಿ ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ಥೆರಪಿ ಸಹಾಯಕವಾಗುವುದು ಸಾಬೀತಾದ ಮೇಲೆ ದೇಶದಲ್ಲೂ ಆರಂಭಿಸಲು ಒತ್ತಡ ಕೇಳಿ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿರುವ ಐಸಿಎಂಆರ್ ಈಗ ಅನುಮತಿ ನೀಡಿದೆ.

corona 2 1

ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆ್ಯಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.

Corona Virus

ಸೋಂಕು ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದ್ದು ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.

Corona Virus 6

ಏನಿದು ಪ್ಲಾಸ್ಮಾ ಥೆರಪಿ?
ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಜಾಸ್ತಿ ಇರುತ್ತದೆ. ಅವರ ರಕ್ತ ಕಣಗಳನ್ನು ಬೇರ್ಪಡಿಸಿ ಸೋಂಕಿತರ ಚಿಕಿತ್ಸೆಗೆ ಬಳಸಲಾಗುತ್ತದೆ. ಕೊರೊನಾ ವೈರಸ್ಸಿನೊಂದಿಗೆ ಹೋರಾಡಿದ ಪರಿಣಾಮ ಈ ರಕ್ತಕ್ಕೆ ವೈರಸ್ ಗಳನ್ನು ತಡೆಯುವ ಶಕ್ತಿ ಇರುತ್ತದೆ. ಹೀಗಾಗಿ ಪ್ಲಾಸ್ಮಾ ಥೆರಪಿ ನೀಡಿದರೆ ಉತ್ತಮ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.

ಪ್ರಯೋಗ ನಡೆದಿದೆಯೇ?
ಚೀನಾದಲ್ಲೂ ಕೂಡ ಕೊರೊನಾ ನಿಯಂತ್ರಣಕ್ಕೆ ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ಪ್ಲಾಸ್ಮಾವನ್ನೇ ಬಳಸಲಾಗಿದೆ. ಚೀನಾದ 2 ವೈದ್ಯರ ತಂಡ 2 ಪ್ರತ್ಯೇಕ ಆಸ್ಪತ್ರೆಗಳಲ್ಲಿ 15 ಮಂದಿ ಸೋಂಕಿತರಿಗೆ ಮೊದಲು ಈ ಪರೀಕ್ಷೆ ನಡೆಸಿ ಅವರಲ್ಲಿ ಸುಧಾರಣೆ ಕಂಡದ್ದನ್ನು ದಾಖಲಿಸಿವೆ.

Corona 1 1

ಒಬ್ಬನಿಂದ ಎಷ್ಟು ಮಂದಿಗೆ ನೀಡಬಹುದು?
ಒಬ್ಬನಿಂದ ಇಷ್ಟೇ ಮಂದಿಗೆ ನೀಡಬಹುದು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟು ಪ್ರಮಾಣದಲ್ಲಿ ಪ್ಲಾಸ್ಮಾ ಸಿಗುತ್ತದೆ ಎಂಬುದರ ಮೇಲೆ ಎಷ್ಟು ಮಂದಿಗೆ ನೀಡಬಹುದು ಎನ್ನುವ ಲೆಕ್ಕಾಚಾರವನ್ನು ಹಾಕಲಾಗುತ್ತದೆ. ಒಬ್ಬನಿಂದ ಕನಿಷ್ಟ ಇಬ್ಬರು ಗರಿಷ್ಟ 5 ಮಂದಿಗೆ ಪ್ಲಾಸ್ಮಾ ನೀಡಬಹುದು. ಒಬ್ಬ ರೋಗಿಯನ್ನು ಗುಣಪಡಿಸಲು ಅಂದಾಜು 200-250 ಎಂಎಲ್ ಪ್ಲಾಸ್ಮಾ ಬೇಕಾಗುತ್ತದೆ.

ಎಷ್ಟು ದಿನಗಳ ನಂತರ ಪ್ಲಾಸ್ಮಾ ಸಂಗ್ರಹಿಸಬಹುದು?
ಇದು ಬಹಳ ಕಠಿಣ ಪ್ರಶ್ನೆ. ಕೊರೊನಾ ವಾಸಿಯಾದ ನಂತರವು ಸೋಂಕು ಬಂದಿದೆ ಎನ್ನುವ ವರದಿಗಳು ಚೀನಾದಲ್ಲಿ ದಾಖಲಾಗಿದೆ. ಹೀಗಾಗಿ ರೋಗಿ ಸಂಪೂರ್ಣವಾಗಿ ಗುಣವಾದ 28 ದಿನಗಳ ನಂತರ ಪ್ಲಾಸ್ಮಾವನ್ನು ಸಂಗ್ರಹಿಸಬಹುದು ಎನ್ನುವ ಲೆಕ್ಕಾಚಾರಕ್ಕೆ ಬರಲಾಗಿದೆ.

CORONA

ಯಾರಿಗೆ ನೀಡಬಹುದು?
ಕೊರೊನಾ ಪೀಡಿತ ಎಲ್ಲರಿಗೆ ಈ ಥೆರಪಿಯ ಅಗತ್ಯವಿಲ್ಲ. ರೋಗ ನಿರೋಧಕ ಶಕ್ತಿಯನ್ನು ಹೊಂದಿರುವ ವ್ಯಕ್ತಿಗಳು ಉತ್ತಮ ಆಹಾರ, ಔಷಧಿ, ತಮ್ಮಲ್ಲಿನ ದೃಢ ವಿಶ್ವಾಸದಿಂದಲೇ ಗುಣಮುಖರಾಗುತ್ತಾರೆ. ಆದರೆ ಗಂಭೀರವಾಗಿರುವ ರೋಗಿಗಳಿಗೆ ನೀಡಲು ಯಾವುದೇ ಔಷಧ ಇಲ್ಲದ ಕಾರಣ ಈ ಥೆರಪಿ ಮಾಡಬಹುದು. ಈ ಥೆರಪಿ ಮೂಲಕ ರೋಗಿಯನ್ನು 5-7 ದಿನಗಳಲ್ಲಿ ಗುಣಪಡಿಸಬಹುದು ಎನ್ನುವ ಅಭಿಪ್ರಾಯಕ್ಕೆ ಬರಲಾಗಿದೆ.

TAGGED:CoronaICMRkeralaNew DelhiPlasma TherapyPublic TVಐಸಿಎಂಆರ್ಕೇರಳಕೊರೊನಾನವದೆಹಲಿಪಬ್ಲಿಕ್ ಟಿವಿಪ್ಲಾಸ್ಮಾ ಥೆರಪಿ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Droupadi Murmu
Latest

70 ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ಘೋಷಣೆ

Public TV
By Public TV
3 minutes ago
Mysuru IPS officers M. Puttamadaiah Presidents Medal
Districts

ಮೈಸೂರು ಮೂಲದ ಎಂ.ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

Public TV
By Public TV
37 minutes ago
shivamogga narrow escape passanger as bus catches fire in sigandoor
Districts

ಸಿಗಂದೂರು | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ – ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Public TV
By Public TV
1 hour ago
Rohit Sharma Harmanpreet Kaur
Cricket

Padma Awards 2026: ರೋಹಿತ್ ಶರ್ಮಾ, ಹರ್ಮನ್‌ಪ್ರೀತ್ ಕೌರ್‌ಗೆ ಪದ್ಮಶ್ರೀ ಪ್ರಶಸ್ತಿ

Public TV
By Public TV
1 hour ago
Shubhanshu Shukla and Modi
Latest

ಬಾಹ್ಯಾಕಾಶಕ್ಕೆ ತೆರಳಿದ್ದ ಸ್ಪೇಸ್‌ ಹೀರೋ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ

Public TV
By Public TV
2 hours ago
Couple dies in horrific road accident In Nippani Belagavi Jigar Nakrani Hetika Nakrani
Belgaum

ನಿಂತಿದ್ದ ಕಾರಿಗೆ ಕಂಟೇನರ್ ಲಾರಿ ಡಿಕ್ಕಿ – ದಂಪತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?