Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ವಕ್ಕರಿಸಿಕೊಂಡ ಕೊರೊನಾ – ಸೋಮವಾರದಿಂದ ಟೆಸ್ಟ್ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ವಕ್ಕರಿಸಿಕೊಂಡ ಕೊರೊನಾ – ಸೋಮವಾರದಿಂದ ಟೆಸ್ಟ್ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಕರೆ

Bengaluru City

ಮತ್ತೆ ವಕ್ಕರಿಸಿಕೊಂಡ ಕೊರೊನಾ – ಸೋಮವಾರದಿಂದ ಟೆಸ್ಟ್ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಕರೆ

Public TV
Last updated: May 25, 2025 11:15 pm
Public TV
Share
3 Min Read
Corona
SHARE

ಬೆಂಗಳೂರು: ಸುಮಾರು ಎರಡೂವರೆ ವರ್ಷಗಳ ಗ್ಯಾಪ್ ಬಳಿಕ ಮತ್ತೆ ಕೊರೊನಾ (Corona) ಮತ್ತೆ ವಕ್ಕರಿಸಿದೆ. ಹೆಮ್ಮಾರಿಗೆ ಬೆಂಗಳೂರಿನಲ್ಲಿ (Bengaluru) ಮೊದಲ ಬಲಿಯಾಗಿದೆ. ವೈಟ್‌ಫೀಲ್ಡ್ ಮೂಲದ 85 ವರ್ಷ ವೃದ್ಧರಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಕೊರೊನಾ ಸೋಂಕಿನಿಂದ ಉಸಿರಾಟದಲ್ಲಿ ಸಮಸ್ಯೆ ಉಂಟಾಗಿ ಅಸುನೀಗಿದ್ದಾರೆ.

ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ಡೆತ್ ಆಡಿಟ್ ಮಾಡೋದಕ್ಕೆ ಹೇಳಿದ್ದೇನೆ. ಕೋವಿಡ್‌ನಿಂದ ಸಾವು ಆಯ್ತಾ ಬೇರೆ ಕಾರಣನಾ ಎಂದು ಪರಿಶೀಲಿಸುತ್ತೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಟ್ಟು 47 ಪಾಸಿಟಿವ್ ಕೇಸ್‌ಗಳಿವೆ. ಬೆಂಗಳೂರು ಕೋವಿಡ್ ಹಾಟ್‌ಸ್ಪಾಟ್ ಆಗ್ತಿದ್ದು, 38 ಕೇಸ್‌ಗಳಿವೆ. ಇದನ್ನೂ ಓದಿ: ಉಡುಪಿಯಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ – ರೆಡ್ ಅಲರ್ಟ್ ಘೋಷಣೆ

ಇಂದಿನಿಂದ ಕೋವಿಡ್ ಟೆಸ್ಟ್ ಆರಂಭಿಸಲಾಗಿದೆ. ಹಾಗಾಗಿ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ. ಸಭೆ, ಸಮಾರಂಭಗಳಲ್ಲಿ ಮಾಸ್ಕ್, ಅಂತರ ಪಾಲನೆ, ಸ್ಯಾನಿಟೈಸರ್ ಬಳಕೆ, ಬಸ್, ಮೆಟ್ರೋಗಳಲ್ಲಿ ನಿಯಮಾವಳಿ ಪಾಲನೆ ಸದ್ಯಕ್ಕೆ ಮುನ್ನೆಚ್ಚರಿಕಾ ಕ್ರಮಗಳಾಗಿವೆ. ಇನ್ನು ಸೋಂಕು ಹೆಚ್ಚಾದರೆ ಟೆಸ್ಟಿಂಗ್ ಹೆಚ್ಚಿಸುವ ಎಲ್ಲಾ ಸಾಧ್ಯತೆ ಇದೆ. ಈ ಬಾರಿ ಸೌಮ್ಯ ಗುಣಲಕ್ಷಣಗಳು ಹೊಂದಿದ್ದು, ಆತಂಕ ಪಡುವ ವಾತಾವರಣ ಇಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಚ್ಚರಿಕೆ ಇರಲಿ. ಇದನ್ನೂ ಓದಿ: ಕೊಡಗಿನಲ್ಲಿ ಮಳೆ ಆರ್ಭಟ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ

ಇನ್ನು ಉಸಿರಾಟ, ಹೃದಯ ಸಂಬಂಧಿ ಸಮಸ್ಯೆ ಇದ್ದವರಿಗೆ ಟೆಸ್ಟ್ ಕಡ್ಡಾಯ. ಗುಣಲಕ್ಷಣಗಳು ಹೊಂದಿದ್ದವರಿಗೆ ಅಗತ್ಯ ಇದ್ದರೆ ಟೆಸ್ಟ್ ಮಾಡಿಸಬಹುದು. ಮೆಡಿಕಲ್ ಕಾಲೇಜ್, ಜಿಲ್ಲಾಸ್ಪತ್ರೆಗಳಲ್ಲಿ ಟೆಸ್ಟ್ ಮಾಡಲಾಗುವುದು. ಆಸ್ಪತ್ರೆಗಳಿಗೆ ಕೋವಿಡ್ ಟೆಸ್ಟ್ ಕಿಟ್ ರವಾನಿಸಿದ್ದು, ನಾಳೆಯಿಂದ ಪೂರ್ಣ ಪ್ರಮಾಣದಲ್ಲಿ ಟೆಸ್ಟಿಂಗ್ ನಡೆಯಲಿದೆ. ನಿತ್ಯ 150 ರಿಂದ 200 ಸ್ಯಾಂಪಲ್ ಟೆಸ್ಟಿಂಗ್‌ಗೆ ಟಾರ್ಗೆಟ್ ನೀಡಲಾಗಿದೆ. ಸಾರಿ ಕೇಸ್‌ಗಳ ಕಡ್ಡಾಯ ಟೆಸ್ಟಿಂಗ್‌ಗೆ ಸೂಚನೆ ನೀಡಿದ್ದು, ಸರ್ಕಾರಿ ಪ್ರಯೋಗಲಾಯಕ್ಕೆ ಸ್ಯಾಂಪಲ್ ರವಾನೆ ಮಾಡುವಂತೆ ಸೂಚನೆ ನೀಡಿದೆ. ಕೆಸಿ ಜನರಲ್ ಆಸ್ಪತ್ರೆಯಲ್ಲಿ 20 ಬೆಡ್‌ಗಳ ವ್ಯವಸ್ಥೆ ಮಾಡಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ನಾಳೆಯಿಂದ ಕೋವಿಡ್ ವಾರ್ಡ್ ತೆರಯಲಾಗುವುದು. ಇದನ್ನೂ ಓದಿ: Kolar | ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಕಾರು ಅಪಘಾತ – ತಾಯಿ ಸಾವು, ಮಗ ಗಂಭೀರ

ಕೋವಿಡ್ ಪ್ರಕರಣ ಹೆಚ್ಚಾದರೆ ಹೇಗೆ ತಯಾರಿ ಮಾಡಬೇಕು ಎಂದು ಈಗಾಗಲೇ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಫನಾ ಸೂಚನೆ ಕೊಟ್ಟಿದೆ. ಈಗಾಗಲೇ ಆರೋಗ್ಯ ಇಲಾಖೆಯಿಂದ ಎಲ್ಲರಿಗೂ ಒಂದು ಸೂಚನೆ ಸಿಕ್ಕಿದೆ. ಸದ್ಯಕ್ಕೆ ಕೋವಿಡ್ ಉಲ್ಬಣವಾಗಿಲ್ಲ. ಮುಂದಿನ ದಿನಗಳಲ್ಲಿ ಏನಾದರೂ ಕೋವಿಡ್ ಸಂಖ್ಯೆ ಹೆಚ್ಚಾದರೆ ಅನ್ನೋ ಆತಂಕ ಹಿನ್ನೆಲೆ ಸರ್ಕಾರದಿಂದ ಸೂಚನೆ ಇಲ್ಲದಿದ್ರೂ ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ ಕಡೆಯಿಂದ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ 3ನೇ ವ್ಯಕ್ತಿಯ ಪಾತ್ರವಿಲ್ಲ – ಮೋದಿ

ಸೋಮವಾರ ಕ್ರಮಗಳ ಬಗ್ಗೆ ಖಾಸಗಿ ಆಸ್ಪತ್ರೆಗಳ ಸಭೆ ನಡೆಯಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್ ಸಿದ್ಧತೆಗೆ ಸೂಚನೆ ಕೊಡುವ ಸಾಧ್ಯತೆ ಇದೆ. ಅಲ್ಲದೇ ನೆಗಡಿ, ಕೆಮ್ಮಿಗಿಂತ ಬಾಡಿಪೇನ್ ಬಂದವರ ಬಗ್ಗೆ ಹೆಚ್ಚು ನಿಗಾಗೆ ಸೂಚಿಸಲಾಗಿದೆ. ಇನ್ನು ಈ ಕೋವಿಡ್ ವೇರಿಯೆಂಟ್ ನೇರವಾಗಿ ಶ್ವಾಸಕೋಶಕ್ಕೆ ದಾಳಿ ಮಾಡುತ್ತೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಈ ಕೆಳಗಿನವರು ಹೆಚ್ಚಿನ ನಿಗಾವಹಿಸಬೇಕು. ಇದನ್ನೂ ಓದಿ: ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್

ಯಾರೆಲ್ಲಾ ಹೆಚ್ಚಿನ ನಿಗಾ ವಹಿಸಬೇಕು?
– ಹಿರಿಯರ ನಾಗರಿಕರು
– ಮಕ್ಕಳು
– ಗರ್ಭಿಣಿಯರು
– ರೋಗನಿರೋಧಕ ಶಕ್ತಿ ಕಡಿಮೆ ಇರುವವರು
– ಕ್ಯಾನ್ಸರ್, ಟಿಬಿ ಸೇರಿ ಬೇರೆ ಆರೋಗ್ಯ ಸಮಸ್ಯೆ ಇರುವವರು

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಬಲಿಗಳೊಂದಿಗೆ ಸೋಂಕು ಹೆಚ್ಚಳವಾಗುತ್ತಿದ್ದು, ಗಡಿ ಜಿಲ್ಲೆ ಬೀದರ್‌ನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಬೀದರ್ ಬ್ರೀಮ್ಸ್ನಲ್ಲಿ 30 ಬೆಡ್‌ಗಳ ಕೋವಿಡ್ ವಾರ್ಡ್ ರೆಡಿಯಿದೆ. ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಆಗಲೇ ಮುಂಜಾಗ್ರತಾ ಕ್ರಮವಾಗಿ 10 ಬೆಡ್ ತಯಾರಿ ಮಾಡಿಕೊಂಡಿದ್ದಾರೆ. ಮೈಸೂರಲ್ಲಿ 3 ಸಕ್ರಿಯ ಕೇಸ್‌ಗಳಿವೆ. ಇನ್ನು, ಕೇರಳಕ್ಕೆ ಹೋಗಿ ಬಂದವರ ಪರೀಕ್ಷೆಗೆ ಗಡಿ ಭಾಗದಲ್ಲಿ ಸಿದ್ಧತೆ ನಡೆದಿದೆ. ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ 20 ಬೆಡ್, ತಾಲೂಕು ಆಸ್ಪತ್ರೆಗಳಲ್ಲಿ 10 ಬೆಡ್ ಮೀಸಲಿಡಲಾಗಿದೆ. ಆದರೆ, ಕೋಲಾರದಲ್ಲಿ ಆಕ್ಸಿಜನ್ ಪ್ಲ್ಯಾಂಟ್‌ಗಳು ಕೆಟ್ಟು ನಿಂತಿವೆ. ಇದನ್ನೂ ಓದಿ: ಕೋವಿಡ್ ಮಧ್ಯೆ ಶಾಲಾ ಕಾಲೇಜುಗಳು ಆರಂಭ – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್!

TAGGED:bengaluruCoronaCovidhealth departmentkarnatakaಆರೋಗ್ಯ ಇಲಾಖೆಕರ್ನಾಟಕಕೊರೊನಾಕೋವಿಡ್ಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
37 seconds ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
22 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
24 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?