ಬಾಗಲಕೋಟೆ: ಕೊರೊನಾ ಈಗ ಮೂರನೇ ಹಂತಕ್ಕೆ ತಲುಪಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಕಾರಜೋಳ, ದೇಶದಲ್ಲಿ ಕೊರೊನಾ ಇಡೀ ದೇಶದಲ್ಲಿ ತಲುಪಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 144 ಸೆಕ್ಷನ್ ಹಾಕಿದ್ದು, ಕೆಲವರು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಎಷ್ಟು ಹೇಳಿದರೂ ಪಾಲಿಸುತ್ತಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ಇದು ಮಾನವ ಕುಲಕ್ಕೆ ಬಂದ ವಿಪತ್ತು. ಸಾಮೂಹಿಕವಾಗಿ ಜನ ಸೇರಬಾರದು ಎಂದು ಮನವಿ ಮಾಡಿಕೊಂಡರೆ, ಎಲ್ಲರೂ ಅದನ್ನು ಸಹಕರಿಸಬೇಕು. 130 ಜನಸಂಖ್ಯೆ ಹೊಂದಿರುವ ದೇಶ ಭಾರತ. ಆದರೆ ಇಲ್ಲಿ ಕೊರೊನಾ ಹರಡಿದರೆ ಕ್ರಮಕೈಗೊಳ್ಳಲು ಕಂಟ್ರೋಲ್ ಮಾಡಲು ಕಷ್ಟವಾಗುತ್ತೆ. ಹಾಗಾಗಿ ಬಿಗಿಯಾದಂತ ಕ್ರಮ ತೆಗೆದುಕೊಳ್ಳಿ ಎಂದು ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರಿಗೆ ಜನರು ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ ದಿನಸಿ, ತರಕಾರಿ ಮನೆ ಮನೆಗೆ ತಲುಪಿಸಲಾಗುತ್ತಿದೆ. ಇದರಿಂದ ಜನದಟ್ಟಣೆಯಾಗೋದು ಕಡಿಮೆ ಆಗಿದೆ. ನಮ್ಮ ಜಿಲ್ಲೆಯಿಂದ ಗುಳೆ ಹೋದವರು ಸಹಸ್ರಾರು ಸಂಖ್ಯೆಯಲ್ಲಿ ಬಂದಿದ್ದಾರೆ. ಅವರ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ಬಾರ್, ವೈನ್ ಶಾಪ್ ಬಂದ್ ಮಾಡಿಸಲಾಗಿದೆ. ಬಂದ್ ಇರುವ ಕಾರಣ ಕಳ್ಳಬಟ್ಟಿ ಜೋರಾಗಿದೆ. ಶುಕ್ರವಾರ ಕೆಲ ಊರಲ್ಲಿ ಗಮನಕ್ಕೆ ಬಂದ ಬಗ್ಗೆ ಜಿಲ್ಲಾಧಿಕಾರಿಗೆ ಹೇಳಿ ಬಂದ್ ಮಾಡಿಸಿದ್ದಾರೆ. ಕಳ್ಳಬಟ್ಟಿಗಾಗಿ ಒಂದೊಂದು ಊರಲ್ಲಿ ಹತ್ತು ಊರಿನ ಜನ ಮುಗಿಬಿದ್ದಿದ್ದಾರೆ ಎಂದರು.